ಓದುಗರ ಪತ್ರ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವ ಬ್ರಿಗೇಡ್ ಮೈಸೂರು ಘಟಕದ ಸ್ವಯಂ ಸೇವಕರು ಎರಡು ಟ್ರಾಕ್ಟರ್ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಏಳು ಚೀಲಗಳಷ್ಟು ಮದ್ಯದ ಬಾಟಲಿಗಳನ್ನು ಸಂಗ್ರಹಿಸಿರುವುದು ಶ್ಲಾಘನೀಯ. ಚಾಮುಂಡಿಬೆಟ್ಟ ಈಗಾಗಲೇ ಪ್ಲಾಸ್ಟಿಕ್ ನಿಷೇಧಿತ ಪ್ರದೇಶ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಣೆ ಆಗಿದ್ದರೂ ಇಷ್ಟೊಂದು ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಮದ್ಯದ ಬಾಟಲಿಗಳು ದೊರೆತಿರುವುದು ವಿಪರ್ಯಾಸವೇ ಸರಿ.
ರಸ್ತೆಬದಿಯಲ್ಲಿ, ವ್ಯೂ ಪಾಯಿಂಟ್ ಬಳಿ ಹಾಗೂ ಪೊಲೀಸರು ಗಸ್ತು ತಿರುಗುವ ಸ್ಥಳಗಳಲ್ಲಿಯೂ ನೂರಾರು ಮದ್ಯದ ಬಾಟಲಿಗಳು ದೊರೆತಿರುವುದು ಬೇಸರದ ಸಂಗತಿ. ಚಾಮುಂಡಿ ಬೆಟ್ಟದಲ್ಲಿ ಪಾವಿತ್ರ್ಯತೆ ಕಾಪಾಡುವುದು ಬೆಟ್ಟಕ್ಕೆ ಬರುವ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪವಿತ್ರ ಸ್ಥಳದಲ್ಲಿ ಮದ್ಯದ ಬಾಟಲಿ ಹಾಗೂ ಪ್ಲಾಸ್ಟಿಕ್ ಕವರ್ಗಳನ್ನು ಎಸೆದು ಅಪವಿತ್ರ ಗೊಳಿಸುವವರ ವಿರುದ್ಧ ಸಂಬಂಧಪಟ್ಟವರು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…