ಓದುಗರ ಪತ್ರ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವ ಬ್ರಿಗೇಡ್ ಮೈಸೂರು ಘಟಕದ ಸ್ವಯಂ ಸೇವಕರು ಎರಡು ಟ್ರಾಕ್ಟರ್ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಏಳು ಚೀಲಗಳಷ್ಟು ಮದ್ಯದ ಬಾಟಲಿಗಳನ್ನು ಸಂಗ್ರಹಿಸಿರುವುದು ಶ್ಲಾಘನೀಯ. ಚಾಮುಂಡಿಬೆಟ್ಟ ಈಗಾಗಲೇ ಪ್ಲಾಸ್ಟಿಕ್ ನಿಷೇಧಿತ ಪ್ರದೇಶ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಣೆ ಆಗಿದ್ದರೂ ಇಷ್ಟೊಂದು ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಮದ್ಯದ ಬಾಟಲಿಗಳು ದೊರೆತಿರುವುದು ವಿಪರ್ಯಾಸವೇ ಸರಿ.
ರಸ್ತೆಬದಿಯಲ್ಲಿ, ವ್ಯೂ ಪಾಯಿಂಟ್ ಬಳಿ ಹಾಗೂ ಪೊಲೀಸರು ಗಸ್ತು ತಿರುಗುವ ಸ್ಥಳಗಳಲ್ಲಿಯೂ ನೂರಾರು ಮದ್ಯದ ಬಾಟಲಿಗಳು ದೊರೆತಿರುವುದು ಬೇಸರದ ಸಂಗತಿ. ಚಾಮುಂಡಿ ಬೆಟ್ಟದಲ್ಲಿ ಪಾವಿತ್ರ್ಯತೆ ಕಾಪಾಡುವುದು ಬೆಟ್ಟಕ್ಕೆ ಬರುವ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪವಿತ್ರ ಸ್ಥಳದಲ್ಲಿ ಮದ್ಯದ ಬಾಟಲಿ ಹಾಗೂ ಪ್ಲಾಸ್ಟಿಕ್ ಕವರ್ಗಳನ್ನು ಎಸೆದು ಅಪವಿತ್ರ ಗೊಳಿಸುವವರ ವಿರುದ್ಧ ಸಂಬಂಧಪಟ್ಟವರು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…