Andolana originals

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್

ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ ವರ್ತುಲ ರಸ್ತೆಯ ಸೌಂದರ್ಯ ಹೆಚ್ಚಿಸಲು ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ.

ನಗರದಲ್ಲಿನ ಸುಮಾರು ೪೩ ಕಿಮೀ ಇರುವ ವರ್ತುಲ ರಸ್ತೆಯ ಎರಡೂ ಬದಿಗಳಲ್ಲಿ ಸುರಿದಿರುವ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತುಗಳ ತೆರವು ಸಂಬಂಧ ನಗರಪಾಲಿಕೆಯು ಇದೇ ಶನಿವಾರ ಹಾಗೂ ಭಾನುವಾರದಂದು ಬೃಹತ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದೆ.

ನಗರದ ವರ್ತುಲ ರಸ್ತೆಯು ಹುಣಸೂರು, ಬೆಂಗಳೂರು, ಗುಂಡ್ಲುಪೇಟೆ, ಮಳವಳ್ಳಿ, ಎಚ್.ಡಿ.ಕೋಟೆಯ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಇಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಹೀಗಾಗಿ ವರ್ತುಲ ರಸ್ತೆಯ ಸ್ವಚ್ಛತೆಗೆ ಆದ್ಯತೆ ನೀಡಬೇಕಾದುದು ಸ್ಥಳೀಯ ಸಂಸ್ಥೆಗಳ ಕರ್ತವ್ಯ, ವರ್ತುಲ ರಸ್ತೆಯ ಸುತ್ತಮುತ್ತಲಿನ ನಿವಾಸಿಗಳು ಕಸ, ಅನುಪಯುಕ್ತ ವಸ್ತುಗಳು ಹಾಗೂ ಕಟ್ಟಡ ತ್ಯಾಜ್ಯವನ್ನು ರಾತ್ರಿ ವೇಳೆ ಸುರಿದು ಹೋಗುವುದು ಸರ್ವೇ ಸಾಮಾನ್ಯ.

ಇದರಿಂದ ರಸ್ತೆಯ ಅಂದಗೆಡುವುದು ಮಾಮೂಲು. ಇದನ್ನು ಗಮನಿಸಿದ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರು, ಇಡೀ ವರ್ತುಲ ರಸ್ತೆಯನ್ನು ಸ್ವಚ್ಛಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.

” ಈ ಸಂಬಂಧ ಒಂದು ವಾರದಿಂದ ಸತತವಾಗಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇದರ ಜೊತೆಗೆ ವರ್ತುಲ ರಸ್ತೆಗೆ ಹೊಂದಿಕೊಂಡಂತೆ ಇರುವ ಬೋಗಾದಿ, ಶ್ರೀರಾಂಪುರ, ಹೂಟಗಳ್ಳಿ, ಕಡಕೊಳ, ಸಿದ್ದಲಿಂಗಪುರ ಪಟ್ಟಣ ಪಂಚಾಯ್ತಿ, ನಗರಸಭೆ, ಗ್ರಾಪಂಗಳ ಸಹಯೋಗವನ್ನು ಪಡೆಯಲಾಗುತ್ತಿದೆ. ಅಲ್ಲಿನ ಸಿಬ್ಬಂದಿಗಳು, ಗುತ್ತಿಗೆದಾರರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

೫೦ ಜೆಸಿಬಿ, ೩೦ ಲಾರಿ, ಟಿಪ್ಪರ್‌ಗಳು, ಸುಮಾರು ೫೦೦ ಮಂದಿ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಸಂಗ್ರಹವಾಗುವ ತ್ಯಾಜ್ಯವನ್ನು ವಿದ್ಯಾರಣ್ಯಪುರಂನಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಹಾಗೂ ಕಟ್ಟಡ ತ್ಯಾಜ್ಯವನ್ನು ಸಾತಗಳ್ಳಿಯ ಘಟಕಕ್ಕೆ ಸುರಿಯುವ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸ್ವಚ್ಛತಾ ಅಭಿಯಾನದಲ್ಲಿ ಆಸಕ್ತರು ಭಾಗವಹಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ದೊರಕಲಿದೆ. ಇದಕ್ಕಾಗಿ ನಗರಪಾಲಿಕೆಯ ಎಲ್ಲಾ ೯ ವಲಯ ಕಚೇರಿಗಳ ಸಹಾಯಕ ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು, ಪರಿಸರ ಇಂಜಿನಿಯರುಗಳು ಹಾಗೂ ನೌಕರರು ಭಾಗಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

55 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

57 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

59 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

1 hour ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago