Andolana originals

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್

ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ ವರ್ತುಲ ರಸ್ತೆಯ ಸೌಂದರ್ಯ ಹೆಚ್ಚಿಸಲು ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ.

ನಗರದಲ್ಲಿನ ಸುಮಾರು ೪೩ ಕಿಮೀ ಇರುವ ವರ್ತುಲ ರಸ್ತೆಯ ಎರಡೂ ಬದಿಗಳಲ್ಲಿ ಸುರಿದಿರುವ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತುಗಳ ತೆರವು ಸಂಬಂಧ ನಗರಪಾಲಿಕೆಯು ಇದೇ ಶನಿವಾರ ಹಾಗೂ ಭಾನುವಾರದಂದು ಬೃಹತ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದೆ.

ನಗರದ ವರ್ತುಲ ರಸ್ತೆಯು ಹುಣಸೂರು, ಬೆಂಗಳೂರು, ಗುಂಡ್ಲುಪೇಟೆ, ಮಳವಳ್ಳಿ, ಎಚ್.ಡಿ.ಕೋಟೆಯ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಇಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಹೀಗಾಗಿ ವರ್ತುಲ ರಸ್ತೆಯ ಸ್ವಚ್ಛತೆಗೆ ಆದ್ಯತೆ ನೀಡಬೇಕಾದುದು ಸ್ಥಳೀಯ ಸಂಸ್ಥೆಗಳ ಕರ್ತವ್ಯ, ವರ್ತುಲ ರಸ್ತೆಯ ಸುತ್ತಮುತ್ತಲಿನ ನಿವಾಸಿಗಳು ಕಸ, ಅನುಪಯುಕ್ತ ವಸ್ತುಗಳು ಹಾಗೂ ಕಟ್ಟಡ ತ್ಯಾಜ್ಯವನ್ನು ರಾತ್ರಿ ವೇಳೆ ಸುರಿದು ಹೋಗುವುದು ಸರ್ವೇ ಸಾಮಾನ್ಯ.

ಇದರಿಂದ ರಸ್ತೆಯ ಅಂದಗೆಡುವುದು ಮಾಮೂಲು. ಇದನ್ನು ಗಮನಿಸಿದ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರು, ಇಡೀ ವರ್ತುಲ ರಸ್ತೆಯನ್ನು ಸ್ವಚ್ಛಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.

” ಈ ಸಂಬಂಧ ಒಂದು ವಾರದಿಂದ ಸತತವಾಗಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇದರ ಜೊತೆಗೆ ವರ್ತುಲ ರಸ್ತೆಗೆ ಹೊಂದಿಕೊಂಡಂತೆ ಇರುವ ಬೋಗಾದಿ, ಶ್ರೀರಾಂಪುರ, ಹೂಟಗಳ್ಳಿ, ಕಡಕೊಳ, ಸಿದ್ದಲಿಂಗಪುರ ಪಟ್ಟಣ ಪಂಚಾಯ್ತಿ, ನಗರಸಭೆ, ಗ್ರಾಪಂಗಳ ಸಹಯೋಗವನ್ನು ಪಡೆಯಲಾಗುತ್ತಿದೆ. ಅಲ್ಲಿನ ಸಿಬ್ಬಂದಿಗಳು, ಗುತ್ತಿಗೆದಾರರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

೫೦ ಜೆಸಿಬಿ, ೩೦ ಲಾರಿ, ಟಿಪ್ಪರ್‌ಗಳು, ಸುಮಾರು ೫೦೦ ಮಂದಿ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಸಂಗ್ರಹವಾಗುವ ತ್ಯಾಜ್ಯವನ್ನು ವಿದ್ಯಾರಣ್ಯಪುರಂನಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಹಾಗೂ ಕಟ್ಟಡ ತ್ಯಾಜ್ಯವನ್ನು ಸಾತಗಳ್ಳಿಯ ಘಟಕಕ್ಕೆ ಸುರಿಯುವ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸ್ವಚ್ಛತಾ ಅಭಿಯಾನದಲ್ಲಿ ಆಸಕ್ತರು ಭಾಗವಹಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ದೊರಕಲಿದೆ. ಇದಕ್ಕಾಗಿ ನಗರಪಾಲಿಕೆಯ ಎಲ್ಲಾ ೯ ವಲಯ ಕಚೇರಿಗಳ ಸಹಾಯಕ ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು, ಪರಿಸರ ಇಂಜಿನಿಯರುಗಳು ಹಾಗೂ ನೌಕರರು ಭಾಗಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

3 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

3 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

3 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

3 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

3 hours ago

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ  ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…

3 hours ago