ಓದುಗರ ಪತ್ರ
ಮೈಸೂರಿನ ರಾಜೇಂದ್ರ ನಗರದ ಮುಖ್ಯ ರಸ್ತೆ, ರಾಜೇಂದ್ರ ನಗರ ಆರ್ಚ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಂಗಡಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ಜನರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಜನರ ಓಡಾಟಕ್ಕೆ ಮೀಸಲಾದ ಪಾದಚಾರಿ ಮಾರ್ಗವನ್ನು ಬಟ್ಟೆ, ಪಾದರಕ್ಷೆ, ತರಕಾರಿ, ಹಣ್ಣು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಹೂವಿನ ವ್ಯಾಪಾರಿಗಳು ಅತಿಕ್ರಮಿಸಿ ಕೊಂಡಿದ್ದಾರೆ. ಹೀಗಾಗಿ ಜನರು ಪಾದಚಾರಿ ಮಾರ್ಗದ ಬದಲಿಗೆ ರಸ್ತೆ ಮಧ್ಯೆ ಓಡಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಪಾದಚಾರಿ ಮಾರ್ಗದಲ್ಲಿ ತಾತ್ಕಾಲಿಕವಾಗಿ ಮಳಿಗೆ ಇಟ್ಟುಕೊಂಡು ಮತ್ತು ತಳ್ಳುವ ಕೈಗಾಡಿಗಳಲ್ಲಿ ವಹಿವಾಟು ನಡೆಸುತ್ತಿದ್ದಾರೆ. ಇದರಿಂದ ವಾಹನಗಳ ಸಂಚಾರಕ್ಕೆ ಹೆಚ್ಚಿನ ಸ್ಥಳಾವಕಾಶವಿಲ್ಲದೆ ಸಮಸ್ಯೆಯಾಗುತ್ತಿದೆ. ಆಗಾಗ್ಗೆ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಇದು ವಾಹನ ಸವಾರರು ಮತ್ತು ಜನರ ನಡುವೆ ಸಂಘರ್ಷಕ್ಕೆ ದಾರಿ ಮಾಡಿ ಕೊಡುತ್ತಿದೆ. ಈ ಸಮಸ್ಯೆಯನ್ನು ಸಂಬಂಧಪಟ್ಟಂತಹ ಅಧಿಕಾರಿಗಳು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.
– ಸ್ಥಳೀಯ ನಿವಾಸಿಗಳು, ರಾಜೇಂದ್ರ ನಗರ, ಮೈಸೂರು
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…