Andolana originals

‘ಶಾಲಾ ಆವರಣದಲ್ಲಿನ ಒಣಮರಗಳನ್ನು ತೆರವುಗೊಳಿಸಿ’

ಆನಂದ್ ಹೊಸೂರು

ಹೊಸೂರು ಶಾಲೆ ಆವರಣದಲ್ಲಿ ಒಣ ಮರಗಳ ರೆಂಬೆಕೊಂಬೆ ಬೀಳುತ್ತಿರುವುದರಿಂದ ಪೋಷಕರಲ್ಲಿ ಆತಂಕ

ಹೊಸೂರು: ಆರು ತಿಂಗಳುಗಳಿಂದಲೂ ಮರಗಳು ಒಣಗಿ ಬೀಳುತ್ತಿದ್ದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸರ್ಕಾರಿ ಶಾಲಾ ಮಕ್ಕಳು ಆತಂಕದಲ್ಲೇ ಪಾಠ ಕೇಳುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಸಿಲ್ವರ್ ಮರಗಳು ಒಣಗಿ ಹೋಗಿದ್ದು, ನಿತ್ಯ ಗಾಳಿ-ಮಳೆಗೆ ಒಣ ಮಗಳ ರೆಂಬೆ-ಕೊಂಬೆಗಳು ಬೀಳುತ್ತಿವೆ. ಶಾಲಾವರಣದಲ್ಲಿ ೫ಕ್ಕೂ ಹೆಚ್ಚು ಮರಗಳು ಒಣಗಿ ಅಪಾಯದ ಸ್ಥಿತಿಯಲ್ಲಿದ್ದರೂ ಅವುಗಳನ್ನು ತೆರವುಗೊಳಿಸದೆ ಅಧಿಕಾರಿಗಳು ಮಕ್ಕಳ ಪ್ರಾಣದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಣಗಿರುವ ಈ ಮರಗಳ ಪಕ್ಕದಲ್ಲಿ ಹೊಸೂರು ಬ್ಲಾಕ್ ೨ ಅಂಗನವಾಡಿ ಕಟ್ಟಡವಿದ್ದು, ಸದ್ಯ ಕಟ್ಟಡದ ಚಾವಣಿಯ ಮೇಲೆ ಮರದ ಕೊಂಬೆಗಳು ಮುರಿದು ಬೀಳುತ್ತಿದ್ದು ಈ ವಿಷಯದ ಗಂಭೀರತೆ ಅರಿತು ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಶಿಕ್ಷಕರು, ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಅರಣ್ಯ ಇಲಾಖೆ ಯವರಿಗೆ ಹಲವಾರು ಬಾರಿ ಮನವಿಮಾಡಿ, ಒಣ ಮರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದರೂ, ಟೆಂಡರ್ ಕರೆದು ಬಿಡ್ ನಡೆಯಬೇಕಿದ್ದು ನಂತರ ತೆರವು ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಕನ್ನಡ ಶಾಲೆಯಲ್ಲಿ ೬೭ ಮಕ್ಕಳು, ಉರ್ದು ಶಾಲೆಯಲ್ಲಿ ೧೯ ಮಕ್ಕಳು ಮತ್ತು ಅಂಗನವಾಡಿಯಲ್ಲಿ ೧೬ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಆಕಸ್ಮಿಕವಾಗಿ ಏನಾದರೂ ಮರಗಳ ಬಳಿ ಹೋದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ. ಈಗಲಾದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆ ಎಚ್ಚೆತ್ತು ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಿದೆ.

” ಒಣ ಮರಗಳನ್ನು ಹರಾಜು ಹಾಕಲು ಈಗಾಗಲೇ ಮುಖ್ಯ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಸಿ ಒಣ ಮರಗಳನ್ನು ತೆರವುಗೊಳಿಸಲಾಗುವುದು.”

-ಹರಿಪ್ರಸಾದ್, ವಲಯ ಅರಣ್ಯಾಧಿಕಾರಿ, ಕೆ.ಆರ್.ನಗರ.

” ಸರ್ಕಾರಿ ಶಾಲೆ ಎಂದರೆ ಅಧಿಕಾರಿಗಳಿಗೆ ಮತ್ತುಸರ್ಕಾರಕ್ಕೆ ಉದಾಸೀನತ ಇದೆ ಎಂಬುದಕ್ಕೆ ಇಲ್ಲಿನ ಶಾಲೆಯ ಸ್ಥಿತಿ ಉದಾಹರಣೆಯಾಗಿದೆ. ಶಾಲೆಯ ಯಾವುದೇ ಮಗುವಿನ ಮೇಲೆ ಒಣ ಮರಗಳಿಂದ ಹಾನಿಯಾದರೆ ಶಿಕ್ಷಣಾಧಿಕಾರಿಗಳೇ ಅದರ ಹೊಣೆ ಹೊರಬೇಕಾಗುತ್ತದೆ.”

-ಸ್ವಾಮಿ, ಪೋಷಕರು, ಹೊಸೂರು

ಆಂದೋಲನ ಡೆಸ್ಕ್

Recent Posts

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 mins ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

20 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

32 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

1 hour ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago