Andolana originals

‘ಶಾಲಾ ಆವರಣದಲ್ಲಿನ ಒಣಮರಗಳನ್ನು ತೆರವುಗೊಳಿಸಿ’

ಆನಂದ್ ಹೊಸೂರು

ಹೊಸೂರು ಶಾಲೆ ಆವರಣದಲ್ಲಿ ಒಣ ಮರಗಳ ರೆಂಬೆಕೊಂಬೆ ಬೀಳುತ್ತಿರುವುದರಿಂದ ಪೋಷಕರಲ್ಲಿ ಆತಂಕ

ಹೊಸೂರು: ಆರು ತಿಂಗಳುಗಳಿಂದಲೂ ಮರಗಳು ಒಣಗಿ ಬೀಳುತ್ತಿದ್ದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸರ್ಕಾರಿ ಶಾಲಾ ಮಕ್ಕಳು ಆತಂಕದಲ್ಲೇ ಪಾಠ ಕೇಳುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಸಿಲ್ವರ್ ಮರಗಳು ಒಣಗಿ ಹೋಗಿದ್ದು, ನಿತ್ಯ ಗಾಳಿ-ಮಳೆಗೆ ಒಣ ಮಗಳ ರೆಂಬೆ-ಕೊಂಬೆಗಳು ಬೀಳುತ್ತಿವೆ. ಶಾಲಾವರಣದಲ್ಲಿ ೫ಕ್ಕೂ ಹೆಚ್ಚು ಮರಗಳು ಒಣಗಿ ಅಪಾಯದ ಸ್ಥಿತಿಯಲ್ಲಿದ್ದರೂ ಅವುಗಳನ್ನು ತೆರವುಗೊಳಿಸದೆ ಅಧಿಕಾರಿಗಳು ಮಕ್ಕಳ ಪ್ರಾಣದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಣಗಿರುವ ಈ ಮರಗಳ ಪಕ್ಕದಲ್ಲಿ ಹೊಸೂರು ಬ್ಲಾಕ್ ೨ ಅಂಗನವಾಡಿ ಕಟ್ಟಡವಿದ್ದು, ಸದ್ಯ ಕಟ್ಟಡದ ಚಾವಣಿಯ ಮೇಲೆ ಮರದ ಕೊಂಬೆಗಳು ಮುರಿದು ಬೀಳುತ್ತಿದ್ದು ಈ ವಿಷಯದ ಗಂಭೀರತೆ ಅರಿತು ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಶಿಕ್ಷಕರು, ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಅರಣ್ಯ ಇಲಾಖೆ ಯವರಿಗೆ ಹಲವಾರು ಬಾರಿ ಮನವಿಮಾಡಿ, ಒಣ ಮರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದರೂ, ಟೆಂಡರ್ ಕರೆದು ಬಿಡ್ ನಡೆಯಬೇಕಿದ್ದು ನಂತರ ತೆರವು ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಕನ್ನಡ ಶಾಲೆಯಲ್ಲಿ ೬೭ ಮಕ್ಕಳು, ಉರ್ದು ಶಾಲೆಯಲ್ಲಿ ೧೯ ಮಕ್ಕಳು ಮತ್ತು ಅಂಗನವಾಡಿಯಲ್ಲಿ ೧೬ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಆಕಸ್ಮಿಕವಾಗಿ ಏನಾದರೂ ಮರಗಳ ಬಳಿ ಹೋದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ. ಈಗಲಾದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆ ಎಚ್ಚೆತ್ತು ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಿದೆ.

” ಒಣ ಮರಗಳನ್ನು ಹರಾಜು ಹಾಕಲು ಈಗಾಗಲೇ ಮುಖ್ಯ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಸಿ ಒಣ ಮರಗಳನ್ನು ತೆರವುಗೊಳಿಸಲಾಗುವುದು.”

-ಹರಿಪ್ರಸಾದ್, ವಲಯ ಅರಣ್ಯಾಧಿಕಾರಿ, ಕೆ.ಆರ್.ನಗರ.

” ಸರ್ಕಾರಿ ಶಾಲೆ ಎಂದರೆ ಅಧಿಕಾರಿಗಳಿಗೆ ಮತ್ತುಸರ್ಕಾರಕ್ಕೆ ಉದಾಸೀನತ ಇದೆ ಎಂಬುದಕ್ಕೆ ಇಲ್ಲಿನ ಶಾಲೆಯ ಸ್ಥಿತಿ ಉದಾಹರಣೆಯಾಗಿದೆ. ಶಾಲೆಯ ಯಾವುದೇ ಮಗುವಿನ ಮೇಲೆ ಒಣ ಮರಗಳಿಂದ ಹಾನಿಯಾದರೆ ಶಿಕ್ಷಣಾಧಿಕಾರಿಗಳೇ ಅದರ ಹೊಣೆ ಹೊರಬೇಕಾಗುತ್ತದೆ.”

-ಸ್ವಾಮಿ, ಪೋಷಕರು, ಹೊಸೂರು

ಆಂದೋಲನ ಡೆಸ್ಕ್

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

14 mins ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

15 mins ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

29 mins ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

36 mins ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

1 hour ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

2 hours ago