Andolana originals

‘ಶಾಲಾ ಆವರಣದಲ್ಲಿನ ಒಣಮರಗಳನ್ನು ತೆರವುಗೊಳಿಸಿ’

ಆನಂದ್ ಹೊಸೂರು

ಹೊಸೂರು ಶಾಲೆ ಆವರಣದಲ್ಲಿ ಒಣ ಮರಗಳ ರೆಂಬೆಕೊಂಬೆ ಬೀಳುತ್ತಿರುವುದರಿಂದ ಪೋಷಕರಲ್ಲಿ ಆತಂಕ

ಹೊಸೂರು: ಆರು ತಿಂಗಳುಗಳಿಂದಲೂ ಮರಗಳು ಒಣಗಿ ಬೀಳುತ್ತಿದ್ದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸರ್ಕಾರಿ ಶಾಲಾ ಮಕ್ಕಳು ಆತಂಕದಲ್ಲೇ ಪಾಠ ಕೇಳುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಸಿಲ್ವರ್ ಮರಗಳು ಒಣಗಿ ಹೋಗಿದ್ದು, ನಿತ್ಯ ಗಾಳಿ-ಮಳೆಗೆ ಒಣ ಮಗಳ ರೆಂಬೆ-ಕೊಂಬೆಗಳು ಬೀಳುತ್ತಿವೆ. ಶಾಲಾವರಣದಲ್ಲಿ ೫ಕ್ಕೂ ಹೆಚ್ಚು ಮರಗಳು ಒಣಗಿ ಅಪಾಯದ ಸ್ಥಿತಿಯಲ್ಲಿದ್ದರೂ ಅವುಗಳನ್ನು ತೆರವುಗೊಳಿಸದೆ ಅಧಿಕಾರಿಗಳು ಮಕ್ಕಳ ಪ್ರಾಣದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಣಗಿರುವ ಈ ಮರಗಳ ಪಕ್ಕದಲ್ಲಿ ಹೊಸೂರು ಬ್ಲಾಕ್ ೨ ಅಂಗನವಾಡಿ ಕಟ್ಟಡವಿದ್ದು, ಸದ್ಯ ಕಟ್ಟಡದ ಚಾವಣಿಯ ಮೇಲೆ ಮರದ ಕೊಂಬೆಗಳು ಮುರಿದು ಬೀಳುತ್ತಿದ್ದು ಈ ವಿಷಯದ ಗಂಭೀರತೆ ಅರಿತು ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಶಿಕ್ಷಕರು, ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಅರಣ್ಯ ಇಲಾಖೆ ಯವರಿಗೆ ಹಲವಾರು ಬಾರಿ ಮನವಿಮಾಡಿ, ಒಣ ಮರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದರೂ, ಟೆಂಡರ್ ಕರೆದು ಬಿಡ್ ನಡೆಯಬೇಕಿದ್ದು ನಂತರ ತೆರವು ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಕನ್ನಡ ಶಾಲೆಯಲ್ಲಿ ೬೭ ಮಕ್ಕಳು, ಉರ್ದು ಶಾಲೆಯಲ್ಲಿ ೧೯ ಮಕ್ಕಳು ಮತ್ತು ಅಂಗನವಾಡಿಯಲ್ಲಿ ೧೬ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಆಕಸ್ಮಿಕವಾಗಿ ಏನಾದರೂ ಮರಗಳ ಬಳಿ ಹೋದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ. ಈಗಲಾದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆ ಎಚ್ಚೆತ್ತು ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಿದೆ.

” ಒಣ ಮರಗಳನ್ನು ಹರಾಜು ಹಾಕಲು ಈಗಾಗಲೇ ಮುಖ್ಯ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಸಿ ಒಣ ಮರಗಳನ್ನು ತೆರವುಗೊಳಿಸಲಾಗುವುದು.”

-ಹರಿಪ್ರಸಾದ್, ವಲಯ ಅರಣ್ಯಾಧಿಕಾರಿ, ಕೆ.ಆರ್.ನಗರ.

” ಸರ್ಕಾರಿ ಶಾಲೆ ಎಂದರೆ ಅಧಿಕಾರಿಗಳಿಗೆ ಮತ್ತುಸರ್ಕಾರಕ್ಕೆ ಉದಾಸೀನತ ಇದೆ ಎಂಬುದಕ್ಕೆ ಇಲ್ಲಿನ ಶಾಲೆಯ ಸ್ಥಿತಿ ಉದಾಹರಣೆಯಾಗಿದೆ. ಶಾಲೆಯ ಯಾವುದೇ ಮಗುವಿನ ಮೇಲೆ ಒಣ ಮರಗಳಿಂದ ಹಾನಿಯಾದರೆ ಶಿಕ್ಷಣಾಧಿಕಾರಿಗಳೇ ಅದರ ಹೊಣೆ ಹೊರಬೇಕಾಗುತ್ತದೆ.”

-ಸ್ವಾಮಿ, ಪೋಷಕರು, ಹೊಸೂರು

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

16 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

48 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago