Andolana originals

‘ಒತ್ತುವರಿಯಾಗಿರುವ ಕೆರೆ ಜಾಗ ತೆರವುಗೊಳಿಸಿ’

ಸಂಬಂಧಪಟ್ಟ ಅಧಿಕಾರಿಗಳಿಗೆ ಲೊಕ್ಕನಹಳ್ಳಿ ಗ್ರಾಮಸ್ಥರ ಆಗ್ರಹ

ಹನೂರು: ಖಾಸಗಿ ವ್ಯಕ್ತಿಗಳು ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿ ಹಲವು ದಿನಗಳು ಕಳೆದಿದ್ದರೂ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ಸರ್ವೆ ನಂ.೧೦೭/ ಎ. ರಲ್ಲಿ ೧.೨೬ ಕೆರೆ ಪರಂಪೋಕು, ೧೦೭/ಬಿಯಲ್ಲಿ ೫೭ ಸೆಂಟ್, ೨೦೭/ಸಿಯಲ್ಲಿ ೧೬ ಸೆಂಟ್, ೧೦೮ ಬಿ ೭ ಸೆಂಟ್ ಸೇರಿ ಒಟ್ಟು ೧.೯೮ ಸೆಂಟ್ ಕೆರೆಯಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳು ೧ ಎಕರೆಗೂ ಹೆಚ್ಚು ಪ್ರದೇಶವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ತಿಯನ್ನು ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಲೊಕ್ಕನಹಳ್ಳಿ ಗ್ರಾಮದ ಚಿಕ್ಕ ಕೆರೆಯನ್ನು ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಳ್ಳುತ್ತಿರುವುದರಿಂದ ಕೆರೆ ದಿನದಿಂದ ದಿನಕ್ಕೆ ಕಿರಿದಾಗುತ್ತಿದೆ. ಜೊತೆಗೆ ನೀರು ನಿಲ್ಲದ ಪರಿಣಾಮ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ.

ಇದರಿಂದ ಕುಡಿಯುವ ನೀರಿಗೂ ಮುಂದಿನ ದಿನಗಳಲ್ಲಿ ತೊಂದರೆ ಉಂಟಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ. ಕೆರೆ ಒತ್ತುವರಿಯಾಗಿರುವ ಪರಿಣಾಮ ಸ್ಥಳೀಯ ನಿವಾಸಿಗಳಿಗೆ ತಿರುಗಾಡಲು ರಸ್ತೆ ಸಹ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪವೂ ಇದೆ.

” ತುಂಬಾ ವರ್ಷಗಳಿಂದ ತಿರುಗಾಡಲು ರಸ್ತೆ ಇಲ್ಲದೆ ಪರಿತಪಿಸುತ್ತಿದ್ದೇವೆ. ರಸ್ತೆ ವ್ಯವಸ್ಥೆ ಕಲ್ಪಿಸಿ, ಜೊತೆಗೆ ಒತ್ತುವರಿಯಾಗಿರುವ ಕೆರೆಯನ್ನು ಅಧಿಕಾರಿಗಳು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.”

ವಿಜಯ್, ಲೊಕ್ಕನಹಳ್ಳಿ ಗ್ರಾಮಸ್ಥರು

” ಚಿಕ್ಕ ಕೆರೆ ಒತ್ತುವರಿಯಾಗಿರುವ ಬಗ್ಗೆ ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಸದ್ಯದಲ್ಲೇ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸುತ್ತೇವೆ. ಸ್ಥಳೀಯ ನಿವಾಸಿಗಳು ತಿರುಗಾಡಲು ರಸ್ತೆ ಇಲ್ಲದಿರುವುದು ಗಮನಕ್ಕೆ ಬಂದಿದ್ದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸ್ಥಳೀಯರಿಗೆ ಅನುಕೂಲ ಕಲ್ಪಿಸಲಾಗುವುದು.”

ರಘುನಾಥನ್, ಪಿಡಿಒ, ಲೊಕ್ಕನಹಳ್ಳಿ ಗ್ರಾಪಂ

ಆಂದೋಲನ ಡೆಸ್ಕ್

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

44 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

22 hours ago