ಓದುಗರ ಪತ್ರ
ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.
ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ ಗುಂಡಿಗೆ ಮಣ್ಣುತುಂಬಿದ್ದರು. ಆದರೆ, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಣ್ಣು ಸಂಪೂರ್ಣವಾಗಿ ಕೊಚ್ಚಿ ಹೋಗಿ ಗುಂಡಿ ನಿರ್ಮಾಣವಾಗಿ ಅನಾಹುತಕ್ಕೆ ಆಹ್ವಾನ ನೀಡುತ್ತಿದೆ. ಈ ಅಡ್ಡರಸ್ತೆ ಕಿರಿದಾದ ಕಾರಣ ಪಾದಚಾರಿಗಳು, ದಾರಿಹೋಕರು ಮತ್ತು ದ್ವಿಚಕ್ರ ವಾಹನ ಸವಾರರು ತಿರುವಿನಲ್ಲಿರುವ ಈ ಗುಂಡಿಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಗುಂಡಿಯನ್ನು ಮುಚ್ಚುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
– ಆರ್. ಯಶಸ್, ಮೈಸೂರು
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…