ಓದುಗರ ಪತ್ರ
ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.
ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ ಗುಂಡಿಗೆ ಮಣ್ಣುತುಂಬಿದ್ದರು. ಆದರೆ, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಣ್ಣು ಸಂಪೂರ್ಣವಾಗಿ ಕೊಚ್ಚಿ ಹೋಗಿ ಗುಂಡಿ ನಿರ್ಮಾಣವಾಗಿ ಅನಾಹುತಕ್ಕೆ ಆಹ್ವಾನ ನೀಡುತ್ತಿದೆ. ಈ ಅಡ್ಡರಸ್ತೆ ಕಿರಿದಾದ ಕಾರಣ ಪಾದಚಾರಿಗಳು, ದಾರಿಹೋಕರು ಮತ್ತು ದ್ವಿಚಕ್ರ ವಾಹನ ಸವಾರರು ತಿರುವಿನಲ್ಲಿರುವ ಈ ಗುಂಡಿಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಗುಂಡಿಯನ್ನು ಮುಚ್ಚುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
– ಆರ್. ಯಶಸ್, ಮೈಸೂರು
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…