Categories: Andolana originals

ಕೋಟೆಗೆ ೨ ವರ್ಷಗಳಲ್ಲಿ ೪ನೇ ಬಾರಿ ಸಿಎಂ ಸಿದ್ದರಾಮಯ್ಯ ಭೇಟಿ

ಮಂಜು ಕೋಟೆ

ಹಿಂದುಳಿದ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹಲವು ಘೋಷಣೆಗಳ ನಿರೀಕ್ಷೆ 

ಎಚ್.ಡಿ.ಕೋಟೆ: ಹಿಂದುಳಿದ ತಾಲ್ಲೂಕು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಸಾಗಬೇಕಾದರೆ ಮುಖ್ಯಮಂತ್ರಿಗಳು, ಸಚಿವರು, ಶಾಸಕರ ಪರಿಶ್ರಮ, ಕಾಳಜಿ ಅಗತ್ಯ ವಾಗಿದ್ದು, ಜಿಲ್ಲೆಯವರೇ ಆದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಾಲ್ಲೂಕಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕಳೆದ ಎರಡು ವರ್ಷಗಳಲ್ಲಿ ೪ ಬಾರಿ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಲು ಕಳೆದ ಬಾರಿ ೫೭೫ ಕೋಟಿ ರೂ. ಈ ಬಾರಿ ೧೭೫ ಕೋಟಿ ರೂ. ಸೇರಿ ಒಟ್ಟು ೭೫೦ ಕೋಟಿ ರೂ. ಅನುದಾನವನ್ನು ನೀಡಿದ್ದಾರೆ. ಅಲ್ಲದೆ ಕೆಲವು ಕಾಮಗಾರಿಗಳಿಗೆ ಚಾಲನೆಯನ್ನೂ ನೀಡಿದ್ದಾರೆ.

ಕೋಟೆ ಕ್ಷೇತ್ರ ವಿಸ್ತೀರ್ಣದಲ್ಲಿ ದೊಡ್ಡದಾಗಿದ್ದು, ಅಭಯಾರಣ್ಯ, ಜಲಾಶಯಗಳನ್ನು, ಉತ್ತಮ ಪರಿಸರವನ್ನು  ಹೊಂದಿದ್ದು ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಬೇಕಾಗಿದೆ. ರೈತಾಪಿ ವರ್ಗದವರು, ಕೂಲಿ ಕಾರ್ಮಿಕರು, ನಿರುದ್ಯೋಗಿಗಳು, ದಲಿತರು, ಗಿರಿಜನರು, ಬಡವರು ಕ್ಷೇತ್ರದಲ್ಲಿ ಅತಿ ಹೆಚ್ಚಾಗಿ ವಾಸಿಸುತ್ತಿದ್ದರೂ ಯಾವುದೇ ಒಂದು ಕಾರ್ಖಾನೆ ನಿರ್ಮಾಣವಾಗದೇ ಇರುವುದು ವಿಪರ್ಯಾಸ.

ಹಿಂದೆಲ್ಲ ತಾಲ್ಲೂಕಿಗೆ ಸಚಿವರು, ಸಂಸದರು, ಮುಖ್ಯಮಂತ್ರಿಗಳು ಭೇಟಿ ನೀಡಿ ಅಭಿವೃದ್ಧಿ ಕೆಲಸಗಳು, ಜಯಂತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದುದು ವಿರಳವಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಪ್ರಮುಖ ನಾಯಕರು ತಾಲ್ಲೂಕಿಗೆ ಭೇಟಿ ನೀಡುತ್ತಿರುವುದರಿಂದ ಜನಸಾಮಾನ್ಯರಲ್ಲಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂಬ ಆಶಾಭಾವನೆ ಮೂಡಿಸಿದೆ.

ಕ್ಷೇತ್ರದಲ್ಲಿ ಎರಡು ತಾಲ್ಲೂಕುಗಳಿರುವುದರಿಂದ ಹೊಸ ಯೋಜನೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನಗಳು ಭಾರೀ ಪ್ರಮಾಣದಲ್ಲಿ ಬೇಕಾಗುತ್ತವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ವಿಧಾನಸಭೆ ಅಧಿವೇಶನಗಳಲ್ಲಿ ಕ್ಷೇತ್ರದ ಸಮಸ್ಯೆಗಳು ಮತ್ತು ಅನುದಾನಗಳ ಬಗ್ಗೆ ಪ್ರಸ್ತಾಪಿಸುತ್ತಿದ್ದ ಹಿನ್ನೆಲೆಯಲ್ಲಿ ಸಚಿವರು ಕ್ಷೇತ್ರದ ಕೆಲವೊಂದು ಅಭಿವೃದ್ಧಿ ವಿಚಾರವಾಗಿ ಗಮನ ಹರಿಸುತ್ತಿದ್ದರು.

ಆದರೆ, ವಿವಿಧ ಕಾರ್ಯಕ್ರಮಗಳು, ಮಹನೀಯರ ಜಯಂತಿ ಕಾರ್ಯ ಕ್ರಮಗಳು, ಅಭಿವೃದ್ಧಿ ಕೆಲಸಗಳ ವಿಚಾರವಾಗಿ ತಾಲ್ಲೂಕಿಗೆ ಮುಖ್ಯಮಂತ್ರಿ, ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ವೇದಿಕೆಯಲ್ಲಿ ಅಭಿವೃದ್ಧಿ ಕೆಲಸಗಳ ಕುರಿತು ಘೋಷಣೆಗಳನ್ನು ಮಾಡುವುದರಿಂದ ಕ್ಷೇತ್ರದ ಅಭಿವೃದ್ಧಿ ಆಗಲಿದೆಯೇ ಎಂಬುದು ಗೊತ್ತಾಗಲಿದೆ. ಸೋಮವಾರ ನಡೆಯುವ ವಿವಿಧ ಕಾಮಗಾರಿಗಳ ಭೂಮಿಪೂಜೆ ಮತ್ತು ಅಂಬೇಡ್ಕರ್ ಜಯಂತಿ, ಅಂಬೇಡ್ಕರ್ ಪ್ರತಿಮೆಯ ಅನಾವರಣ ಕಾರ್ಯ ಕ್ರಮವು ಜನಸಾಮಾನ್ಯರಲ್ಲಿ ಹಲವು ನಿರೀಕ್ಷೆಗಳನ್ನು ಮೂಡಿಸಿದೆ.

” ಮುಖ್ಯಮಂತ್ರಿಗಳು ಮತ್ತು ಸಚಿವರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಮತ್ತು ಮಹನೀಯರ ಜಯಂತಿಯ ಕಾರ್ಯಕ್ರಮಗಳು ನಡೆದಾಗ ತಾಲ್ಲೂಕು ಅಭಿವೃದ್ಧಿಗೆ ಪೂರಕವಾಗಲಿದೆ. ಸಿದ್ದರಾಮಯ್ಯ ಅವರು ಈ ಬಾರಿ ಮುಖ್ಯಮಂತ್ರಿಯಾದ ಬಳಿಕ ನಾಲ್ಕು ಬಾರಿ, ಕಳೆದ ಬಾರಿ ವಿರೋಧಪಕ್ಷದ ನಾಯಕರಾಗಿದ್ದಾಗ ೧೨ ಬಾರಿ ತಾಲ್ಲೂಕಿಗೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿ, ನನ್ನ ಬಗ್ಗೆಯೂ ಕಾಳಜಿ ವಹಿಸಿದ್ದಾರೆ. ಕಳೆದ ಬಾರಿ ಭೇಟಿ ನೀಡಿದ್ದಾಗ ೫೭೫ ಕೋಟಿ ರೂ., ಈ ಬಾರಿ ೧೭೫ ಕೋಟಿ ರೂ. ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ನೀಡಿ ವಿರೋಧ ಪಕ್ಷದವರಿಗೆ ಪ್ರತ್ಯುತ್ತರ ನೀಡಿದ್ದಾರೆ.”

-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago