Andolana originals

ಸಿಎಂ ನಿವಾಸದ ಬಳಿಯ ನಿವಾಸಿಗಳಿಗೆ ದೊರೆಯದ ‘ಅನ್ನಭಾಗ್ಯ’

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಿಂದ ಕೂಗಳತೆ ದೂರದಲ್ಲಿರುವ ಜನತಾನಗರ ಹಾಗೂ ರಾಮಕೃಷ್ಣ ನಗರ ‘ಐ’ ಬ್ಲಾಕ್ ನಿವಾಸಿಗಳು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ದೊರೆಯದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ. ಪಡಿತರ ಚೀಟಿ ಇಲ್ಲದ ಪರಿಣಾಮ ಈ ಬಡಾವಣೆಗಳ ನೂರಾರು ಕುಟುಂಬಗಳಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗಳ ‘ಭಾಗ್ಯ’ ದೊರೆತಿಲ್ಲ.

ಅದಕ್ಕಿಂತಲೂ ಪ್ರಮುಖವಾಗಿ ಆರೋಗ್ಯ ಸಮಸ್ಯೆ ಎದುರಾದರೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಳಿಗೆ ಶುಲ್ಕರಿಯಾಯಿತಿ ಪಡೆಯಲು ಬಿಪಿಎಲ್ ಪಡಿತರ ಚೀಟಿ ಅತ್ಯಗತ್ಯ. ಆದರೆ, ಇಲ್ಲಿನ ನಿವಾಸಿಗಳಿಗೆ ಆ ಭಾಗ್ಯವೂ ಇಲ್ಲದಂತಾಗಿ ರೋಗ ರುಜಿನ ಬಂದರೆ ಆಸ್ಪತ್ರೆಗಳಿಗೆ ಶುಲ್ಕ ಪಾವತಿಸಲು ಹೆಣಗಾಡಬೇಕಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ಪಡಿತರ ಚೀಟಿಗಳಿಗಾಗಿ ಅರ್ಜಿ ಆಹ್ವಾನಿಸಿದ್ದಾಗ ಇಲ್ಲಿನ ಜನರು ಸೈಬರ್ ಕೇಂದ್ರಗಳ ಮುಂದೆ ದಿನವಿಡೀ ನಿಂತು, ಕೇಳಿದ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಿ ಬರೋಬ್ಬರಿ ಎರಡು ವರ್ಷಗಳೇ ಕಳೆದಿವೆ. ದರೆ, ರಾಜ್ಯ ಸರ್ಕಾರ ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆಗೆ ಅನುಮೋದನೆ ನೀಡದಿರುವುದರಿಂದ ಅರ್ಜಿ ಹಾಕಿದವರು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.

ಕಾಟಾಚಾರದ ಸರ್ವರ್!: ಕೇಂದ್ರ ಸರ್ಕಾರ ‘ಒಂದು ದೇಶ ಒಂದು ಪಡಿತರ ಚೀಟಿ’ ಯೋಜನೆ ಜಾರಿಗೆ ತಂದ ಮೇಲೆ ಈಗಾಗಲೇ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಯಜಮಾನಿಯಾಗಿ ಆ ಕುಟುಂಬದ ಮಹಿಳೆಯನ್ನು ತಂದು ಕೂರಿಸಲಾಗಿದೆ. ಈ ರೀತಿ ಸಹಜ ಪ್ರಕ್ರಿಯೆಯಲ್ಲಿ ಪಡಿತರ ಚೀಟಿ ಮಾರ್ಪಾಡಾದ ಕುಟುಂಬಗಳು ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಅಡ್ಡಿಯಿಲ್ಲ. ಆದರೆ, ಕುಟುಂಬದ ಮುಖ್ಯಸ್ಥ ತೀರಿಕೊಂಡಿದ್ದರೆ, ಹೊಸದಾಗಿ ಮದುವೆಯಾಗಿ ಆ ಕುಟುಂಬಕ್ಕೆ ಬಂದವರು, ಇತ್ತೀಚಿಗೆ ಜನಿಸಿದ ಮಕ್ಕಳನ್ನು ಪಡಿತರ ಚೀಟಿಗೆ ಸೇರ್ಪಡೆ ಮಾಡುವಲ್ಲಿ ಬಹುದೊಡ್ಡ ಸಮಸ್ಯೆ ಎದುರಾಗಿದೆ.

ಚುನಾವಣೆ ನೀತಿ ಸಂಹಿತೆ ನಡುವೆಯೂ ಆಗೊಮ್ಮೆ ಹೀಗೊಮ್ಮೆ ಆಹಾರ ಇಲಾಖೆ ಕೆಲವೇ ಗಂಟೆಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿತ್ತಾದರೂ ಸರ್ವರ್ ಸಮಸ್ಯೆಯಿಂದಾಗಿ ಕೆಲಸ-ಕಾರ್ಯ ಬಿಟ್ಟು ಜನರು ಸೈಬರ್ ಕೇಂದ್ರಗಳ ಮುಂದೆ ದಿನ ಕಳೆದಿದ್ದು ಬಿಟ್ಟರೆ ತಿದ್ದುಪಡಿ ಮಾಡಿಸಲು ಸಾಧ್ಯವಾಗಲೇ ಇಲ್ಲ.

ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಕೊಟ್ಟರೆ, ತಿದ್ದುಪಡಿಗೆ ಅವಕಾಶ ನೀಡಿದರೆ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂಬ ಕಾರಣಕ್ಕೆ ಸರ್ಕಾರ ಈ ರೀತಿ ಕಾಟಾಚಾರಕ್ಕೆ ತಿದ್ದುಪಡಿಗೆ ಅವಕಾಶ ನೀಡಿದಂತೆ ಮಾಡಿ ಸರ್ವರ್ ಸಮಸ್ಯೆ ನೆಪದಲ್ಲಿ ಜನರನ್ನು ಸತಾಯಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

5 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

5 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

5 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

5 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

5 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

5 hours ago