Andolana originals

ಬರೋಬ್ಬರಿ 75 ರೂ ಮುಟ್ಟಿದ ಕೆಜಿ ತೆಂಗಿನಕಾಯಿ ಬೆಲೆ

ಸಣ್ಣ ಕಾಯಿಗೂ ೨೫ ರೂ.ನಿಂದ ೩೦ ರೂ. ಬೆಲೆ; ಕಾಯಿ ಖರೀದಿಸಲು ಗ್ರಾಹಕರು ಹಿಂದೇಟು

ಎಚ್.ಎಸ್.ದಿನೇಶ್ ಕುಮಾರ್

ಮೈಸೂರು: ತಿಂಗಳ ಹಿಂದೆ ಗ್ರಾಹಕರ ಕೈಗೆಟುಕುವಂತಿದ್ದ ತೆಂಗಿನಕಾಯಿ ಬೆಲೆ ಇದ್ದಕ್ಕಿದ್ದಂತೆ ಗಗನಕ್ಕೇರಿದ್ದು, ಅಡುಗೆಗೆ ಅಗತ್ಯವಾದ ತೆಂಗಿನ ಕಾಯಿ ಖರೀದಿಸಲು ಜನರು ಹಿಂದೆ ಮುಂದೆ ನೋಡುವಂತಾಗಿದೆ.

ಒಂದು ತಿಂಗಳ ಹಿಂದೆ ರಾಜ್ಯಾದ್ಯಂತ ತೆಂಗಿನಕಾಯಿ ಬೆಲೆ ಸಾಮಾನ್ಯವಾಗಿತ್ತು. ಆದರೀಗ ಸಣ್ಣ ಗಾತ್ರದ ಕಾಯಿಯೂ ೨೫ ರೂ.ನಿಂದ ೩೦ ರೂ.ವರೆಗೆ ಮಾರಾಟವಾಗುತ್ತಿದೆ. ಕಾಯಿಯ ಬೆಲೆ ಹೆಚ್ಚಳವಾದ್ದರಿಂದ ಗ್ರಾಹಕನ ಜೇಬಿಗೂ ಕತ್ತರಿ ಬೀಳುವಂತಾಗಿದ್ದರೂ ತೆಂಗು ಬೆಳೆಗಾರರಿಗೆ ಮಾತ್ರ ಆರ್ಥಿಕವಾಗಿ ಅನುಕೂಲವಾಗಿದೆ.

ಸಾಮಾನ್ಯವಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಯಥೇಚ್ಛವಾಗಿ ತೆಂಗು ಬೆಳೆಯುವುದರಿಂದ ಒಂದು ತಿಂಗಳ ಹಿಂದೆ ತೆಂಗಿನಕಾಯಿ ಬೆಲೆ ಪ್ರತಿ ಕೆಜಿಗೆ ೨೫ ರೂ.ನಿಂದ ೩೦ ರೂ.ವರೆಗೆ ಇತ್ತು. ಬೇಸಿಗೆ ಹಿನ್ನೆಲೆಯಲ್ಲಿ ಜನವರಿ ತಿಂಗಳಿನಿಂದ ಏಪ್ರಿಲ್ ವರೆಗೆ ತೆಂಗು ಇಳುವರಿ ಕಡಿಮೆ ಇರುವುದರಿಂದ ತೆಂಗಿನಕಾಯಿ ಬೆಲೆ ಹೆಚ್ಚಳವಾಗುವುದು ಸಾಮಾನ್ಯ ಸಂಗತಿ. ಆದರೆ, ಈ ಬಾರಿ ಒಂದು ಕೆಜಿ ತೆಂಗಿನಕಾಯಿ ಬೆಲೆ ಬರೋಬ್ಬರಿ ೭೫ ರೂ.ಗೆ ಮುಟ್ಟಿದೆ. ಮಾರುಕಟ್ಟೆಯ ಇತಿಹಾಸದಲ್ಲಿ ಈ ಮಟ್ಟದ ಬೆಲೆ ಹೆಚ್ಚಳವಾಗಿದ್ದ ಉದಾಹರಣೆಯೇ ಇಲ್ಲ.  ಇದರಿಂದಾಗಿ ಸಾರ್ವಜನಿಕರು ತೆಂಗಿನಕಾಯಿ ಖರೀದಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಕೆಲವರಂತೂ ಅಡುಗೆಗೆ ಕಾಯಿ ಬಳಸುವುದೇ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನು ಹೋಟೆಲ್ ಮಾಲೀಕರಿಗಂತೂ ತೆಂಗಿನಕಾಯಿ ಬೆಲೆ ಏರಿಕೆ ಬಿಸಿ ತುಪ್ಪವಾಗಿ ಪರಿಣಮಿ ಸಿದೆ. ಕಾಯಿ ಇಲ್ಲದೇ ಯಾವ ಅಡುಗೆಯೂ ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಇದೆ. ಆದರೀಗ ಬೆಲೆ ನಾಲ್ಕು ಪಟ್ಟು ಹೆಚ್ಚಳವಾಗಿರುವುದರಿಂದ ಚಿಂತೆಗೀಡು ಮಾಡಿದೆ.

ಬಿಸಿಲಿನ ತಾಪ ಕಾರಣ: ತೆಂಗಿನ ತೋಟ ಹೊಂದಿರುವ ರೈತರು ಹೇಳುವ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಈ ಮಟ್ಟದ ಬಿಸಿಲು ಬಂದಿರಲಿಲ್ಲ. ಈ ಬಾರಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಇಳುವರಿ ಕಡಿಮೆಯಾಗಿದೆ.

ಎಳನೀರಿಗೂ ಬೇಡಿಕೆ: ಬಿಸಿಲಿನ ಬೇಗೆ ಹೆಚ್ಚಿರುವ ಕಾರಣ ವಿಶೇಷ ವಾಗಿ ಎಳನೀರಿಗೆ ಹೆಚ್ಚು ಬೇಡಿಕೆ ಬಂದಿದೆ. ರಾಜ್ಯ ಮಾತ್ರವಲ್ಲದೇ ಉತ್ತರ ಭಾರತದ ರಾಜ್ಯಗಳಿಗೂ ರಾಜ್ಯದಿಂದ ಎಳನೀರು ಪ್ರತಿದಿನ ಹೋಗುತ್ತಿದೆ. ರೈತರಿಗೆ ತೆಂಗಿನಕಾಯಿ ಮಾರಾಟದಲ್ಲಿ ಬರುವ ಲಾಭಕ್ಕಿಂತ ಎಳನೀರು ಮಾರಾಟದಲ್ಲಿ ಹೆಚ್ಚಿನ ಲಾಭ ಸಿಗುತ್ತಿದೆ. ಎಳನೀರು ಖರೀದಿಸುವವರೇ ಮರ ಹತ್ತಿ ಎಳನೀರು ಕೀಳುವುದಲ್ಲದೆ, ಸಾಗಣೆಯನ್ನೂ ಅವರೇ ಮಾಡಿಕೊಳ್ಳುತ್ತಾರೆ. ಹೀಗಾಗಿ ರೈತನಿಗೆ ಖರ್ಚಿಲ್ಲದೆ ಲಾಭ ಸಿಗುತ್ತಿದೆ. ತೆಂಗಿನಕಾಯಿ ಬೆಲೆ ಹೆಚ್ಚಳವಾಗಲು ಈ ಅಂಶವೂ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಮುಂದಿನ ಜೂನ್‌ವರೆಗೂ ಹೀಗೆ ಬೆಲೆ ಏರಿಕೆ: 

ರೈತ ಮುಖಂಡರು ಹೇಳುವ ಪ್ರಕಾರ ತೆಂಗಿನಕಾಯಿ ಬೆಲೆಯು ಮುಂದಿನ ಜೂನ್ವರೆಗೂ ಹೀಗೆ ಮುಂದುವರಿಯಲಿದೆ. ಒಮ್ಮೆ ಮಳೆ ಆರಂಭವಾದಲ್ಲಿ ಎಳನೀರು ಬಳಸುವವರ ಸಂಖ್ಯೆಯೂ ಕಡಿಮೆಯಾಗುವುದರಿಂದ ತೆಂಗಿನಕಾಯಿ ಬೆಲೆ ಕಡಿಮೆಯಾಗಬಹುದು.

ಲಾಭ ಪಡೆಯುತ್ತಿರುವ ದಲ್ಲಾಳಿಗಳು:  ತೆಂಗಿನಕಾಯಿ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಳವಾಗಿದ್ದರೂ ಅಷ್ಟು ಮೊತ್ತ ರೈತರನ್ನು ತಲುಪುತ್ತಿಲ್ಲ. ತೋಟಗಳಿಗೆ ತೆರಳುವ ದಲ್ಲಾಳಿಗಳು ರೈತರೊಂದಿಗೆ ಚೌಕಾಸಿಗಿಳಿದು ಕೆಜಿ ಕಾಯಿಯನ್ನು ೩೫ ರೂ. ನಿಂದ ೪೫ ರೂ.ಗೆ ಖರೀದಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

” ಕೊಬ್ಬರಿ ಬೆಲೆ ಸಾಮಾನ್ಯ ತೆಂಗಿನಕಾಯಿ ಬೆಲೆ ಏರಿಕೆ ಆಗುತ್ತಿದೆ. ಆದರೆ, ಕೊಬ್ಬರಿ ಬೆಲೆ ಮಾತ್ರ ಹೆಚ್ಚಳವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಇದೀಗ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ೧೮೦ ರೂ. ಇದೆ. ಹೀಗಾಗಿ ಬಹುತೇಕರು ತೆಂಗಿನಕಾಯಿ ಬದಲಿಗೆ ಅಡುಗೆಗೆ ಕೊಬ್ಬರಿಯನ್ನೇ ಬಳಸುತ್ತಿದ್ದಾರೆ.”

” ಬಿಸಿಲಿನ ತಾಪ ಹೆಚ್ಚಳ, ಅಂತರ್ಜಲ ಕೊರತೆ ಹಾಗೂ ಇನ್ನಿತರೆ ಕಾರಣಗಳಿಂದ ರಾಜ್ಯಾದ್ಯಂತ ತೆಂಗಿನಕಾಯಿ ಬೆಲೆ ಹೆಚ್ಚಳವಾಗಿದೆ. ರೈತರು ಎಳನೀರನ್ನು ಹೆಚ್ಚು ಮಾರಾಟ ಮಾಡುತ್ತಿರುವುದರಿಂದ ಈ ಮಟ್ಟದ ಬೆಲೆ ಹೆಚ್ಚಳವಾಗಿದೆ. ಜೂನ್ ಬಳಿಕ ಬೆಲೆಗಳು ಇಳಿಕೆ ಕಾಣಬಹುದು.”

-ಮಹೇಶ್ ಪ್ರಭು, ರೈತ ಮುಖಂಡರು.

” ಕಳೆದ ಮೂರು ತಿಂಗಳಿನಿಂದಲೇ ತೆಂಗಿನಕಾಯಿ ಬೆಲೆ ಸ್ವಲ್ಪ ಸ್ವಲ್ಪವೇ ಹೆಚ್ಚಳವಾಗುವ ಮೂಲಕ ಇದೀಗ ದಾಖಲೆಯ ರೀತಿ ಬೆಲೆ ಏರಿಕೆ ಕಂಡಿದೆ. ಇದರಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಹೋಟೆಲ್ ಉದ್ಯಮವಿದೆ.”

-ಸಿ.ನಾರಾಯಣಗೌಡ, ಅಧ್ಯಕ್ಷ, ಹೋಟೆಲ್ ಮಾಲೀಕರ ಸಂಘ

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

7 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

8 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

8 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

9 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

9 hours ago