Andolana originals

ಬರೋಬ್ಬರಿ 75 ರೂ ಮುಟ್ಟಿದ ಕೆಜಿ ತೆಂಗಿನಕಾಯಿ ಬೆಲೆ

ಸಣ್ಣ ಕಾಯಿಗೂ ೨೫ ರೂ.ನಿಂದ ೩೦ ರೂ. ಬೆಲೆ; ಕಾಯಿ ಖರೀದಿಸಲು ಗ್ರಾಹಕರು ಹಿಂದೇಟು

ಎಚ್.ಎಸ್.ದಿನೇಶ್ ಕುಮಾರ್

ಮೈಸೂರು: ತಿಂಗಳ ಹಿಂದೆ ಗ್ರಾಹಕರ ಕೈಗೆಟುಕುವಂತಿದ್ದ ತೆಂಗಿನಕಾಯಿ ಬೆಲೆ ಇದ್ದಕ್ಕಿದ್ದಂತೆ ಗಗನಕ್ಕೇರಿದ್ದು, ಅಡುಗೆಗೆ ಅಗತ್ಯವಾದ ತೆಂಗಿನ ಕಾಯಿ ಖರೀದಿಸಲು ಜನರು ಹಿಂದೆ ಮುಂದೆ ನೋಡುವಂತಾಗಿದೆ.

ಒಂದು ತಿಂಗಳ ಹಿಂದೆ ರಾಜ್ಯಾದ್ಯಂತ ತೆಂಗಿನಕಾಯಿ ಬೆಲೆ ಸಾಮಾನ್ಯವಾಗಿತ್ತು. ಆದರೀಗ ಸಣ್ಣ ಗಾತ್ರದ ಕಾಯಿಯೂ ೨೫ ರೂ.ನಿಂದ ೩೦ ರೂ.ವರೆಗೆ ಮಾರಾಟವಾಗುತ್ತಿದೆ. ಕಾಯಿಯ ಬೆಲೆ ಹೆಚ್ಚಳವಾದ್ದರಿಂದ ಗ್ರಾಹಕನ ಜೇಬಿಗೂ ಕತ್ತರಿ ಬೀಳುವಂತಾಗಿದ್ದರೂ ತೆಂಗು ಬೆಳೆಗಾರರಿಗೆ ಮಾತ್ರ ಆರ್ಥಿಕವಾಗಿ ಅನುಕೂಲವಾಗಿದೆ.

ಸಾಮಾನ್ಯವಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಯಥೇಚ್ಛವಾಗಿ ತೆಂಗು ಬೆಳೆಯುವುದರಿಂದ ಒಂದು ತಿಂಗಳ ಹಿಂದೆ ತೆಂಗಿನಕಾಯಿ ಬೆಲೆ ಪ್ರತಿ ಕೆಜಿಗೆ ೨೫ ರೂ.ನಿಂದ ೩೦ ರೂ.ವರೆಗೆ ಇತ್ತು. ಬೇಸಿಗೆ ಹಿನ್ನೆಲೆಯಲ್ಲಿ ಜನವರಿ ತಿಂಗಳಿನಿಂದ ಏಪ್ರಿಲ್ ವರೆಗೆ ತೆಂಗು ಇಳುವರಿ ಕಡಿಮೆ ಇರುವುದರಿಂದ ತೆಂಗಿನಕಾಯಿ ಬೆಲೆ ಹೆಚ್ಚಳವಾಗುವುದು ಸಾಮಾನ್ಯ ಸಂಗತಿ. ಆದರೆ, ಈ ಬಾರಿ ಒಂದು ಕೆಜಿ ತೆಂಗಿನಕಾಯಿ ಬೆಲೆ ಬರೋಬ್ಬರಿ ೭೫ ರೂ.ಗೆ ಮುಟ್ಟಿದೆ. ಮಾರುಕಟ್ಟೆಯ ಇತಿಹಾಸದಲ್ಲಿ ಈ ಮಟ್ಟದ ಬೆಲೆ ಹೆಚ್ಚಳವಾಗಿದ್ದ ಉದಾಹರಣೆಯೇ ಇಲ್ಲ.  ಇದರಿಂದಾಗಿ ಸಾರ್ವಜನಿಕರು ತೆಂಗಿನಕಾಯಿ ಖರೀದಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಕೆಲವರಂತೂ ಅಡುಗೆಗೆ ಕಾಯಿ ಬಳಸುವುದೇ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನು ಹೋಟೆಲ್ ಮಾಲೀಕರಿಗಂತೂ ತೆಂಗಿನಕಾಯಿ ಬೆಲೆ ಏರಿಕೆ ಬಿಸಿ ತುಪ್ಪವಾಗಿ ಪರಿಣಮಿ ಸಿದೆ. ಕಾಯಿ ಇಲ್ಲದೇ ಯಾವ ಅಡುಗೆಯೂ ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಇದೆ. ಆದರೀಗ ಬೆಲೆ ನಾಲ್ಕು ಪಟ್ಟು ಹೆಚ್ಚಳವಾಗಿರುವುದರಿಂದ ಚಿಂತೆಗೀಡು ಮಾಡಿದೆ.

ಬಿಸಿಲಿನ ತಾಪ ಕಾರಣ: ತೆಂಗಿನ ತೋಟ ಹೊಂದಿರುವ ರೈತರು ಹೇಳುವ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಈ ಮಟ್ಟದ ಬಿಸಿಲು ಬಂದಿರಲಿಲ್ಲ. ಈ ಬಾರಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಇಳುವರಿ ಕಡಿಮೆಯಾಗಿದೆ.

ಎಳನೀರಿಗೂ ಬೇಡಿಕೆ: ಬಿಸಿಲಿನ ಬೇಗೆ ಹೆಚ್ಚಿರುವ ಕಾರಣ ವಿಶೇಷ ವಾಗಿ ಎಳನೀರಿಗೆ ಹೆಚ್ಚು ಬೇಡಿಕೆ ಬಂದಿದೆ. ರಾಜ್ಯ ಮಾತ್ರವಲ್ಲದೇ ಉತ್ತರ ಭಾರತದ ರಾಜ್ಯಗಳಿಗೂ ರಾಜ್ಯದಿಂದ ಎಳನೀರು ಪ್ರತಿದಿನ ಹೋಗುತ್ತಿದೆ. ರೈತರಿಗೆ ತೆಂಗಿನಕಾಯಿ ಮಾರಾಟದಲ್ಲಿ ಬರುವ ಲಾಭಕ್ಕಿಂತ ಎಳನೀರು ಮಾರಾಟದಲ್ಲಿ ಹೆಚ್ಚಿನ ಲಾಭ ಸಿಗುತ್ತಿದೆ. ಎಳನೀರು ಖರೀದಿಸುವವರೇ ಮರ ಹತ್ತಿ ಎಳನೀರು ಕೀಳುವುದಲ್ಲದೆ, ಸಾಗಣೆಯನ್ನೂ ಅವರೇ ಮಾಡಿಕೊಳ್ಳುತ್ತಾರೆ. ಹೀಗಾಗಿ ರೈತನಿಗೆ ಖರ್ಚಿಲ್ಲದೆ ಲಾಭ ಸಿಗುತ್ತಿದೆ. ತೆಂಗಿನಕಾಯಿ ಬೆಲೆ ಹೆಚ್ಚಳವಾಗಲು ಈ ಅಂಶವೂ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಮುಂದಿನ ಜೂನ್‌ವರೆಗೂ ಹೀಗೆ ಬೆಲೆ ಏರಿಕೆ: 

ರೈತ ಮುಖಂಡರು ಹೇಳುವ ಪ್ರಕಾರ ತೆಂಗಿನಕಾಯಿ ಬೆಲೆಯು ಮುಂದಿನ ಜೂನ್ವರೆಗೂ ಹೀಗೆ ಮುಂದುವರಿಯಲಿದೆ. ಒಮ್ಮೆ ಮಳೆ ಆರಂಭವಾದಲ್ಲಿ ಎಳನೀರು ಬಳಸುವವರ ಸಂಖ್ಯೆಯೂ ಕಡಿಮೆಯಾಗುವುದರಿಂದ ತೆಂಗಿನಕಾಯಿ ಬೆಲೆ ಕಡಿಮೆಯಾಗಬಹುದು.

ಲಾಭ ಪಡೆಯುತ್ತಿರುವ ದಲ್ಲಾಳಿಗಳು:  ತೆಂಗಿನಕಾಯಿ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಳವಾಗಿದ್ದರೂ ಅಷ್ಟು ಮೊತ್ತ ರೈತರನ್ನು ತಲುಪುತ್ತಿಲ್ಲ. ತೋಟಗಳಿಗೆ ತೆರಳುವ ದಲ್ಲಾಳಿಗಳು ರೈತರೊಂದಿಗೆ ಚೌಕಾಸಿಗಿಳಿದು ಕೆಜಿ ಕಾಯಿಯನ್ನು ೩೫ ರೂ. ನಿಂದ ೪೫ ರೂ.ಗೆ ಖರೀದಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

” ಕೊಬ್ಬರಿ ಬೆಲೆ ಸಾಮಾನ್ಯ ತೆಂಗಿನಕಾಯಿ ಬೆಲೆ ಏರಿಕೆ ಆಗುತ್ತಿದೆ. ಆದರೆ, ಕೊಬ್ಬರಿ ಬೆಲೆ ಮಾತ್ರ ಹೆಚ್ಚಳವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಇದೀಗ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ೧೮೦ ರೂ. ಇದೆ. ಹೀಗಾಗಿ ಬಹುತೇಕರು ತೆಂಗಿನಕಾಯಿ ಬದಲಿಗೆ ಅಡುಗೆಗೆ ಕೊಬ್ಬರಿಯನ್ನೇ ಬಳಸುತ್ತಿದ್ದಾರೆ.”

” ಬಿಸಿಲಿನ ತಾಪ ಹೆಚ್ಚಳ, ಅಂತರ್ಜಲ ಕೊರತೆ ಹಾಗೂ ಇನ್ನಿತರೆ ಕಾರಣಗಳಿಂದ ರಾಜ್ಯಾದ್ಯಂತ ತೆಂಗಿನಕಾಯಿ ಬೆಲೆ ಹೆಚ್ಚಳವಾಗಿದೆ. ರೈತರು ಎಳನೀರನ್ನು ಹೆಚ್ಚು ಮಾರಾಟ ಮಾಡುತ್ತಿರುವುದರಿಂದ ಈ ಮಟ್ಟದ ಬೆಲೆ ಹೆಚ್ಚಳವಾಗಿದೆ. ಜೂನ್ ಬಳಿಕ ಬೆಲೆಗಳು ಇಳಿಕೆ ಕಾಣಬಹುದು.”

-ಮಹೇಶ್ ಪ್ರಭು, ರೈತ ಮುಖಂಡರು.

” ಕಳೆದ ಮೂರು ತಿಂಗಳಿನಿಂದಲೇ ತೆಂಗಿನಕಾಯಿ ಬೆಲೆ ಸ್ವಲ್ಪ ಸ್ವಲ್ಪವೇ ಹೆಚ್ಚಳವಾಗುವ ಮೂಲಕ ಇದೀಗ ದಾಖಲೆಯ ರೀತಿ ಬೆಲೆ ಏರಿಕೆ ಕಂಡಿದೆ. ಇದರಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಹೋಟೆಲ್ ಉದ್ಯಮವಿದೆ.”

-ಸಿ.ನಾರಾಯಣಗೌಡ, ಅಧ್ಯಕ್ಷ, ಹೋಟೆಲ್ ಮಾಲೀಕರ ಸಂಘ

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago