Andolana originals

ಬರೋಬ್ಬರಿ 75 ರೂ ಮುಟ್ಟಿದ ಕೆಜಿ ತೆಂಗಿನಕಾಯಿ ಬೆಲೆ

ಸಣ್ಣ ಕಾಯಿಗೂ ೨೫ ರೂ.ನಿಂದ ೩೦ ರೂ. ಬೆಲೆ; ಕಾಯಿ ಖರೀದಿಸಲು ಗ್ರಾಹಕರು ಹಿಂದೇಟು

ಎಚ್.ಎಸ್.ದಿನೇಶ್ ಕುಮಾರ್

ಮೈಸೂರು: ತಿಂಗಳ ಹಿಂದೆ ಗ್ರಾಹಕರ ಕೈಗೆಟುಕುವಂತಿದ್ದ ತೆಂಗಿನಕಾಯಿ ಬೆಲೆ ಇದ್ದಕ್ಕಿದ್ದಂತೆ ಗಗನಕ್ಕೇರಿದ್ದು, ಅಡುಗೆಗೆ ಅಗತ್ಯವಾದ ತೆಂಗಿನ ಕಾಯಿ ಖರೀದಿಸಲು ಜನರು ಹಿಂದೆ ಮುಂದೆ ನೋಡುವಂತಾಗಿದೆ.

ಒಂದು ತಿಂಗಳ ಹಿಂದೆ ರಾಜ್ಯಾದ್ಯಂತ ತೆಂಗಿನಕಾಯಿ ಬೆಲೆ ಸಾಮಾನ್ಯವಾಗಿತ್ತು. ಆದರೀಗ ಸಣ್ಣ ಗಾತ್ರದ ಕಾಯಿಯೂ ೨೫ ರೂ.ನಿಂದ ೩೦ ರೂ.ವರೆಗೆ ಮಾರಾಟವಾಗುತ್ತಿದೆ. ಕಾಯಿಯ ಬೆಲೆ ಹೆಚ್ಚಳವಾದ್ದರಿಂದ ಗ್ರಾಹಕನ ಜೇಬಿಗೂ ಕತ್ತರಿ ಬೀಳುವಂತಾಗಿದ್ದರೂ ತೆಂಗು ಬೆಳೆಗಾರರಿಗೆ ಮಾತ್ರ ಆರ್ಥಿಕವಾಗಿ ಅನುಕೂಲವಾಗಿದೆ.

ಸಾಮಾನ್ಯವಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಯಥೇಚ್ಛವಾಗಿ ತೆಂಗು ಬೆಳೆಯುವುದರಿಂದ ಒಂದು ತಿಂಗಳ ಹಿಂದೆ ತೆಂಗಿನಕಾಯಿ ಬೆಲೆ ಪ್ರತಿ ಕೆಜಿಗೆ ೨೫ ರೂ.ನಿಂದ ೩೦ ರೂ.ವರೆಗೆ ಇತ್ತು. ಬೇಸಿಗೆ ಹಿನ್ನೆಲೆಯಲ್ಲಿ ಜನವರಿ ತಿಂಗಳಿನಿಂದ ಏಪ್ರಿಲ್ ವರೆಗೆ ತೆಂಗು ಇಳುವರಿ ಕಡಿಮೆ ಇರುವುದರಿಂದ ತೆಂಗಿನಕಾಯಿ ಬೆಲೆ ಹೆಚ್ಚಳವಾಗುವುದು ಸಾಮಾನ್ಯ ಸಂಗತಿ. ಆದರೆ, ಈ ಬಾರಿ ಒಂದು ಕೆಜಿ ತೆಂಗಿನಕಾಯಿ ಬೆಲೆ ಬರೋಬ್ಬರಿ ೭೫ ರೂ.ಗೆ ಮುಟ್ಟಿದೆ. ಮಾರುಕಟ್ಟೆಯ ಇತಿಹಾಸದಲ್ಲಿ ಈ ಮಟ್ಟದ ಬೆಲೆ ಹೆಚ್ಚಳವಾಗಿದ್ದ ಉದಾಹರಣೆಯೇ ಇಲ್ಲ.  ಇದರಿಂದಾಗಿ ಸಾರ್ವಜನಿಕರು ತೆಂಗಿನಕಾಯಿ ಖರೀದಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಕೆಲವರಂತೂ ಅಡುಗೆಗೆ ಕಾಯಿ ಬಳಸುವುದೇ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನು ಹೋಟೆಲ್ ಮಾಲೀಕರಿಗಂತೂ ತೆಂಗಿನಕಾಯಿ ಬೆಲೆ ಏರಿಕೆ ಬಿಸಿ ತುಪ್ಪವಾಗಿ ಪರಿಣಮಿ ಸಿದೆ. ಕಾಯಿ ಇಲ್ಲದೇ ಯಾವ ಅಡುಗೆಯೂ ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಇದೆ. ಆದರೀಗ ಬೆಲೆ ನಾಲ್ಕು ಪಟ್ಟು ಹೆಚ್ಚಳವಾಗಿರುವುದರಿಂದ ಚಿಂತೆಗೀಡು ಮಾಡಿದೆ.

ಬಿಸಿಲಿನ ತಾಪ ಕಾರಣ: ತೆಂಗಿನ ತೋಟ ಹೊಂದಿರುವ ರೈತರು ಹೇಳುವ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಈ ಮಟ್ಟದ ಬಿಸಿಲು ಬಂದಿರಲಿಲ್ಲ. ಈ ಬಾರಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಇಳುವರಿ ಕಡಿಮೆಯಾಗಿದೆ.

ಎಳನೀರಿಗೂ ಬೇಡಿಕೆ: ಬಿಸಿಲಿನ ಬೇಗೆ ಹೆಚ್ಚಿರುವ ಕಾರಣ ವಿಶೇಷ ವಾಗಿ ಎಳನೀರಿಗೆ ಹೆಚ್ಚು ಬೇಡಿಕೆ ಬಂದಿದೆ. ರಾಜ್ಯ ಮಾತ್ರವಲ್ಲದೇ ಉತ್ತರ ಭಾರತದ ರಾಜ್ಯಗಳಿಗೂ ರಾಜ್ಯದಿಂದ ಎಳನೀರು ಪ್ರತಿದಿನ ಹೋಗುತ್ತಿದೆ. ರೈತರಿಗೆ ತೆಂಗಿನಕಾಯಿ ಮಾರಾಟದಲ್ಲಿ ಬರುವ ಲಾಭಕ್ಕಿಂತ ಎಳನೀರು ಮಾರಾಟದಲ್ಲಿ ಹೆಚ್ಚಿನ ಲಾಭ ಸಿಗುತ್ತಿದೆ. ಎಳನೀರು ಖರೀದಿಸುವವರೇ ಮರ ಹತ್ತಿ ಎಳನೀರು ಕೀಳುವುದಲ್ಲದೆ, ಸಾಗಣೆಯನ್ನೂ ಅವರೇ ಮಾಡಿಕೊಳ್ಳುತ್ತಾರೆ. ಹೀಗಾಗಿ ರೈತನಿಗೆ ಖರ್ಚಿಲ್ಲದೆ ಲಾಭ ಸಿಗುತ್ತಿದೆ. ತೆಂಗಿನಕಾಯಿ ಬೆಲೆ ಹೆಚ್ಚಳವಾಗಲು ಈ ಅಂಶವೂ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಮುಂದಿನ ಜೂನ್‌ವರೆಗೂ ಹೀಗೆ ಬೆಲೆ ಏರಿಕೆ: 

ರೈತ ಮುಖಂಡರು ಹೇಳುವ ಪ್ರಕಾರ ತೆಂಗಿನಕಾಯಿ ಬೆಲೆಯು ಮುಂದಿನ ಜೂನ್ವರೆಗೂ ಹೀಗೆ ಮುಂದುವರಿಯಲಿದೆ. ಒಮ್ಮೆ ಮಳೆ ಆರಂಭವಾದಲ್ಲಿ ಎಳನೀರು ಬಳಸುವವರ ಸಂಖ್ಯೆಯೂ ಕಡಿಮೆಯಾಗುವುದರಿಂದ ತೆಂಗಿನಕಾಯಿ ಬೆಲೆ ಕಡಿಮೆಯಾಗಬಹುದು.

ಲಾಭ ಪಡೆಯುತ್ತಿರುವ ದಲ್ಲಾಳಿಗಳು:  ತೆಂಗಿನಕಾಯಿ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಳವಾಗಿದ್ದರೂ ಅಷ್ಟು ಮೊತ್ತ ರೈತರನ್ನು ತಲುಪುತ್ತಿಲ್ಲ. ತೋಟಗಳಿಗೆ ತೆರಳುವ ದಲ್ಲಾಳಿಗಳು ರೈತರೊಂದಿಗೆ ಚೌಕಾಸಿಗಿಳಿದು ಕೆಜಿ ಕಾಯಿಯನ್ನು ೩೫ ರೂ. ನಿಂದ ೪೫ ರೂ.ಗೆ ಖರೀದಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

” ಕೊಬ್ಬರಿ ಬೆಲೆ ಸಾಮಾನ್ಯ ತೆಂಗಿನಕಾಯಿ ಬೆಲೆ ಏರಿಕೆ ಆಗುತ್ತಿದೆ. ಆದರೆ, ಕೊಬ್ಬರಿ ಬೆಲೆ ಮಾತ್ರ ಹೆಚ್ಚಳವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಇದೀಗ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ೧೮೦ ರೂ. ಇದೆ. ಹೀಗಾಗಿ ಬಹುತೇಕರು ತೆಂಗಿನಕಾಯಿ ಬದಲಿಗೆ ಅಡುಗೆಗೆ ಕೊಬ್ಬರಿಯನ್ನೇ ಬಳಸುತ್ತಿದ್ದಾರೆ.”

” ಬಿಸಿಲಿನ ತಾಪ ಹೆಚ್ಚಳ, ಅಂತರ್ಜಲ ಕೊರತೆ ಹಾಗೂ ಇನ್ನಿತರೆ ಕಾರಣಗಳಿಂದ ರಾಜ್ಯಾದ್ಯಂತ ತೆಂಗಿನಕಾಯಿ ಬೆಲೆ ಹೆಚ್ಚಳವಾಗಿದೆ. ರೈತರು ಎಳನೀರನ್ನು ಹೆಚ್ಚು ಮಾರಾಟ ಮಾಡುತ್ತಿರುವುದರಿಂದ ಈ ಮಟ್ಟದ ಬೆಲೆ ಹೆಚ್ಚಳವಾಗಿದೆ. ಜೂನ್ ಬಳಿಕ ಬೆಲೆಗಳು ಇಳಿಕೆ ಕಾಣಬಹುದು.”

-ಮಹೇಶ್ ಪ್ರಭು, ರೈತ ಮುಖಂಡರು.

” ಕಳೆದ ಮೂರು ತಿಂಗಳಿನಿಂದಲೇ ತೆಂಗಿನಕಾಯಿ ಬೆಲೆ ಸ್ವಲ್ಪ ಸ್ವಲ್ಪವೇ ಹೆಚ್ಚಳವಾಗುವ ಮೂಲಕ ಇದೀಗ ದಾಖಲೆಯ ರೀತಿ ಬೆಲೆ ಏರಿಕೆ ಕಂಡಿದೆ. ಇದರಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಹೋಟೆಲ್ ಉದ್ಯಮವಿದೆ.”

-ಸಿ.ನಾರಾಯಣಗೌಡ, ಅಧ್ಯಕ್ಷ, ಹೋಟೆಲ್ ಮಾಲೀಕರ ಸಂಘ

ಆಂದೋಲನ ಡೆಸ್ಕ್

Recent Posts

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

1 min ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

36 mins ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

2 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

2 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

2 hours ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

5 hours ago