Andolana originals

ಮಡಿಕೇರಿ ದಸರಾ ಮಹೋತ್ಸವದಲ್ಲಿ ನಾಳೆ ಕಾಫಿ ಘಮಲು

ನವೀನ್ ಡಿಸೋಜ

ಕಾಫಿ ಕೃಷಿ ಮಾಹಿತಿ, ಸಾಧಕ ಕೃಷಿಕರಿಗೆ ಸನ್ಮಾನ, ಕಾಫಿ ಖಾದ್ಯ ಸ್ಪರ್ಧೆ, ಸಮಿತಿಯಿಂದ ಸಿದ್ಧತೆ

ಮಡಿಕೇರಿ: ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.೨೪ರಂದು ಬುಧವಾರ ಕಾಫಿ ದಸರಾ ಸಂಭ್ರಮ ಮೇಳೈಸಲಿದ್ದು, ಕಾಫಿ ಕೃಷಿಕರಿಗೆ ಸನ್ಮಾನ ಮತ್ತು ಕಾಫಿ ಕೃಷಿ ಸಂಬಂಧಿತ ಮಾಹಿತಿ ದೊರಕಲಿದೆ.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವರ್ಷ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾಕ್ಕೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಈ ವರ್ಷವೂ ಕಾಫಿ ದಸರಾ ಆಯೋಜಿಸಲಾಗಿದೆ. ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜನೆಗೊಂಡಿರುವ ಎರಡನೇ ವರ್ಷದ ಕಾಫಿ ದಸರಾ ಸೆ.೨೪ರಂದು ಬುಧವಾರ ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಕಾಫಿ ದಸರಾ ಅಂಗವಾಗಿ ಕಾಫಿಯಿಂದ ತಯಾರಿಸಲಾದ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ. ಕಾಫಿ ದಸರಾ ಅಂಗವಾಗಿ ಈ ವರ್ಷವೂ ೩೫ ಮಳಿಗೆಗಳು ಇರಲಿದ್ದು, ಕಾಫಿ ಸಂಬಂಧಿತ ಮಾಹಿತಿಯನ್ನು ನೀಡಲಿವೆ. ಕೊಡಗಿನ ಅನೇಕ ಕಾಫಿ ಕೆಫೆಗಳಲ್ಲಿ ಸ್ವಾದಿಷ್ಟ ಕಾಫಿ ಸವಿಯನ್ನೂ ಸವಿಯಬಹುದಾಗಿದೆ. ಭಾರತೀಯ ಕಾಫಿ ಮಂಡಳಿ, ಕೃಷಿ ಇಲಾಖೆ, ಪಶುವೈದ್ಯಕೀಯ ಇಲಾಖೆ, ತೋಟಗಾರಿಕಾ ಇಲಾಖೆ, ಕೈಗಾರಿಕಾ ಇಲಾಖೆ, ಹಾಪ್ ಕಾಮ್ಸ್, ನಂದಿನಿ ಹಾಲಿನ ಉತ್ಪನ್ನಗಳು, ಮೀನುಗಾರಿಕಾ ಇಲಾಖೆ,, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಸೇರಿದಂತೆ ಕಾಫಿ ಸಂಬಂಧಿತ ಅನೇಕ ಸಂಘಸಂಸ್ಥೆಗಳು, ಕಾಫಿ ಕೆಫೆಗಳು ಈ ವರ್ಷದ ದಸರಾದಲ್ಲಿ ಪಾಲ್ಗೊಳ್ಳಲಿವೆ ಎಂದು ಸಂಚಾಲಕ ಹೆಚ್. ಟಿ.ಅನಿಲ್ ಮಾಹಿತಿ ನೀಡಿದ್ದಾರೆ.

“ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರ ಪರಿಕಲ್ಪನೆಯಲ್ಲಿ ಈ ಬಾರಿಯೂ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ಕಾಫಿ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಫಿ ಕೃಷಿಕರಿಗೆ ಸನ್ಮಾನ, ಉಪನ್ಯಾಸ, ಕಾಫಿ ಖಾದ್ಯಗಳ ಸ್ಪರ್ಧೆ ಸೇರಿದಂತೆ ಹಲವು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು.”

-ಹೆಚ್.ಟಿ.ಅನಿಲ್, ಕಾಫಿ ದಸರಾ ಸಂಚಾಲಕ

ಸಾಧಕ ಕೃಷಿಕರಿಗೆ ಸನ್ಮಾನ:  ಕಾಫಿ ದಸರಾ ಅಂಗವಾಗಿ ಜಿಲ್ಲೆಯ ೧೦ ಸಾಧಕ ಕೃಷಿಕರಿಗೆ ಮಧ್ಯಾಹ್ನ ೧ ಗಂಟೆಗೆ ಸನ್ಮಾನ ನೆರವೇರಲಿದೆ. ಸುಂಟಿಕೊಪ್ಪ ಬಳಿಯ ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ, ಕಿರಗಂದೂರು ಹಿರಿಯ ಕೃಷಿಕ ಎಸ್.ಎಂ.ಚಂಗಪ್ಪ, ಪ್ರಗತಿಪರ ಬೆಳೆಗಾರ ಲವ ಎಡದಂಟೆ, ಪೊನ್ನಂಪೇಟೆ ಹುದೂರು ಗ್ರಾಮದ ಕೃಷಿಕ ಬಿ.ಪಿ.ರವಿ ಶಂಕರ್, ಕೊಡ್ಲಿಪೇಟೆಯ ಕಾಫಿ ನರ್ಸರಿ ಮಾಲೀಕ ಡಿ.ವೈ.ರಜಾಕ್, ಕಾಫಿ ಉದ್ಯಮಿ ಮಡಿಕೇರಿಯ ನಿಜಾಮುದ್ದೀನ್ ಸಿದ್ದಿಕಿ, ತಾಕೇರಿಯ ಸಿರಿ ಸ್ವಸಹಾಯ ಮಹಿಳಾ ಸಂಘ, ಪ್ರಗತಿಪರ ಕೃಷಿಕ ಕೊಡಂದೇರ ನರೇನ್ ಕುಟ್ಟಯ್ಯ, ಚೆಟ್ಟಳ್ಳಿ ಪೊನ್ನತ್ತ ಮೊಟ್ಟೆಯ ಮಿಶ್ರಬೆಳೆ ಕೃಷಿಕ ರಾಬರ್ಟ್ ಅವರನ್ನು ಸನ್ಮಾನಿಸಲಾಗುವುದು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

4 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

6 hours ago