Andolana originals

ಮಳೆಗೆ ಕಾಫಿ ಬೆಳೆ ಹಾನಿ; ಸರ್ವೇ ಕಾರ್ಯ ಶುರು

ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು; ಕಾಫಿ ಮಂಡಳಿಯಿಂದ ಅಗತ್ಯ ಸಲಹೆ 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಮಳೆಯಾಗಿರುವುದರಿಂದ ತೋಟಗಾರಿಕಾ ಬೆಳೆಗಳಿಗೆ ಹಾನಿವುಂಟಾಗಿದ್ದು, ಕಾಫಿ ಎಲೆ ಉದುರಿರುವುದು ಹಾಗೂ ಎಲೆಗಳು ಕೊಳೆತಿರುವುದರಿಂದ ಉತ್ಪಾದನೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ಈ ಬಾರಿ ಮೇ ಅಂತ್ಯದಿಂದಲೇ ಮಳೆ-ಶೀತಗಾಳಿ ವಾತಾವರಣ ಕಂಡುಬಂದಿದೆ. ಇದು ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ಪರಿಣಾಮವನ್ನು ಉಂಟುಮಾಡಿದ್ದು, ಮುಖ್ಯವಾಗಿ ಕಾಫಿ ಬೆಳೆಗಾರರಿಗೆ ಬೆಳೆ ನಷ್ಟದ ಭೀತಿ ಎದುರಾಗಿದೆ. ಇದಲ್ಲದೇ ಕಾಳು ಮೆಣಸು, ಅಡಕೆ, ತೋಟಗಾರಿಕಾ ಬೆಳೆಗಳಿಗೆ ಸಮಸ್ಯೆ ಉಂಟಾಗಿದೆ. ಅತಿಯಾದ ಮಳೆ, ತೇವಾಂಶದ ಪರಿಣಾಮದಿಂದಾಗಿ ಶಿಲೀಂಧ್ರಗಳು ನಾಶವಾಗಿ ಕೊಳೆರೋಗ ಕಂಡುಬಂದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಸೂರ್ಲಬ್ಬಿ, ಶಾಂತಹಳ್ಳಿ, ಬಿರು ನಾಣಿ, ಗರ್ವಾಲೆ ಮತ್ತು ಮುಕ್ಕೋಡ್ಲು ಇನ್ನಿತರೆಡೆ ಶೇ.೧೫೬ರಷ್ಟು ಮಳೆಯಾಗಿದೆ. ಆದರೆ ಭಾಗಮಂಡಲ ವ್ಯಾಪ್ತಿಯ ಕೆಲವು ಕಡೆ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದೆ. ಈಗ ಹೆಚ್ಚು ಮಳೆಯಾಗಿರುವ ಪ್ರದೇಶಗಳಲ್ಲಿ ಕಾಫಿಗೆ ಕೊಳೆರೋಗ ಬಾಧಿಸಿದ್ದು, ಇಲ್ಲೆಲ್ಲ ಶೇ.೧೫ರಷ್ಟು ಕಾಫಿ ಉದುರಿದೆ ಎಂದು ಕಾಫಿ ಮಂಡಳಿ ಅಂದಾಜಿಸಿದೆ. ಕೆಲ ದಿನಗಳಿಂದ ಈ ಭಾಗದಲ್ಲಿ ಕಾಫಿ ಮಂಡಳಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಬೆಳೆ ನಷ್ಟ ಸಂಭವಿಸಿರುವುದನ್ನು ಖಚಿತಪಡಿಸಿದ್ದಾರೆ.

ಜಿಲ್ಲೆಯ ಉಳಿದ ಕಡೆಗಳಲ್ಲಿಯೂ ಇಂತಹದ್ದೇ ಸಮಸ್ಯೆ ಎದುರಾಗಿರಬಹುದಾಗಿದ್ದು, ಜಿಲ್ಲೆಯ ಕಾಫಿ ಉತ್ಪಾದನೆಯಲ್ಲಿ ಕುಂಠಿತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಕಾಫಿ ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಈಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಹೆಚ್ಚು ನಷ್ಟದಿಂದ ಪಾರಾಗುವಂತೆ ಅವರು ಸಲಹೆ ನೀಡಿದ್ದಾರೆ.

ಜಂಟಿ ಸರ್ವೇಗೆ ಸಮಿತಿ ರಚನೆ:  ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಕಾಫಿ ಮಂಡಳಿ ಈಗಾಗಲೇ ಜಿಲ್ಲಾಡಳಿತದ ಗಮನಕ್ಕೆ ತಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಮತ್ತು ಕಾಫಿ ಮಂಡಳಿಯ ಅಧಿಕಾರಿಗಳನ್ನೊಳಗೊಂಡಂತೆ ಜಂಟಿ ಸರ್ವೇ ನಡೆಸಲು ಜಿಲ್ಲಾಧಿಕಾರಿ ಸಮಿತಿ ರಚನೆ ಮಾಡಲಿದ್ದಾರೆ. ಸಮಿತಿ ನೀಡುವ ವರದಿಯ ಆಧಾರದ ಮೇಲೆ ಬೆಳೆ ಹಾನಿಗೆ ಸಂಬಂಽಸಿದಂತೆ ಪರಿಹಾರ ವಿತರಣೆಗೆ ಕ್ರಮವಾಗಲಿದೆ.

” ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬಿದ್ದಿರುವ ಪ್ರದೇಶದಲ್ಲಿ ಈಗಾಗಲೇ ಶೇ.೧೫ರಷ್ಟು ಬೆಳೆ ಹಾನಿಯಾಗಿದೆ. ಉಳಿದ ಕಡೆಗಳಲ್ಲಿಯೂ ಸರ್ವೇ  ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬೆಳೆಗಾರರಿಗೆ ಕೊಳೆರೋಗದಿಂದ ಗಿಡಗಳನ್ನು ರಕ್ಷಿಸಲು ಈಗಾಗಲೇ ಕಾಫಿ ಮಂಡಳಿಯಿಂದ ಅಗತ್ಯ ಸಲಹೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಂಟಿ ಸರ್ವೇ ಮೂಲಕ ಒಟ್ಟಾರೆ ನಷ್ಟದ ಕುರಿತು ಮಾಹಿತಿ ಸಂಗ್ರಹಿಸಬೇಕಿದೆ.”

ಚಂದ್ರಶೇಖರ್, ಕಾಫಿ ಮಂಡಳಿ ಉಪನಿರ್ದೇಶಕ 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago