Andolana originals

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ

ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಫಿಕೊಯ್ಲು ಬಹುತೇಕ ಮುಕ್ತಾಯಗೊಂಡಿದ್ದು, ಬೆಳೆಗಾರರೀಗ ಹೂ ಮಳೆಗಾಗಿ ಆಕಾಶ ನೋಡುತ್ತಿದ್ದಾರೆ. ಕೆಲವೆಡೆ ಮಳೆಯಾಗಿರುವುದರಿಂದ ಬೆಳೆಗಾರರು ಸಂತಸಗೊಂಡಿದ್ದರೆ, ಮಳೆಯಾಗದ ಪ್ರದೇಶಗಳಲ್ಲಿ ಸ್ಪ್ರಿಂಕ್ಲರ್ ಮೂಲಕ ನೀರು ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಕಾಫಿ ಕೊಯ್ಲು ಬಹುತೇಕ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಹೂ ಮಳೆಯಾದರೆ ಮುಂದಿನ ವರ್ಷದ ಫಸಲಿಗೆ ಅನುಕೂಲವಾಗುತ್ತದೆ. ಇಲ್ಲವಾದರೆ ಸ್ಪ್ರಿಂಕ್ಲರ್ಗಳ ಮೂಲಕ ನೀರು ಒದಗಿಸುವುದು ಅನಿವಾರ್ಯವಾಗಲಿದೆ. ದಕ್ಷಿಣ ಕೊಡಗಿನ ಕೆಲ ಭಾಗಗಳಲ್ಲಿ ಜನವರಿ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ಮೊಗ್ಗು ಕಾಣಿಸಿಕೊಂಡಿದ್ದು, ಈಗಾಗಲೇ ಬ್ಯಾಕಿಂಗ್‌ಗಾಗಿ ಬೆಳೆಗಾರರು ಸ್ಪ್ರಿಂಕ್ಲರ್ ಮೊರೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಮಳೆ ಬಿದ್ದರೇ ಬೆಳೆಗಾರರಿಗೆ ಭಾರೀ ಅನುಕೂಲವಾಗಲಿದ್ದು, ಎಲ್ಲರೂ ಈಗ ಮಳೆಗಾಗಿ ಆಕಾಶವನ್ನು ನೋಡುತ್ತಿದ್ದಾರೆ.

ಕಾಫಿ ಗಿಡಗಳಲ್ಲಿ ಜನವರಿ-ಫೆಬ್ರವರಿಯಲ್ಲಿ ಮೊಗ್ಗುಗಳು ಬಿಡುತ್ತವೆ. ಆದರೆ ಅವು ಅರಳಿ ಹೂ ಬಿಡಲು ಮಳೆಯ ಅವಶ್ಯವಿದೆ. ಈಮಳೆಯನ್ನು ಬ್ಲಾಸಮ್ ಶವರ್ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ವಾರದಿಂದ ಏಪ್ರಿಲ್ ಮೊದಲಾರ್ಧದೊಳಗೆ ೨೫- ೪೦ ಮಿ.ಮೀ. ಮಳೆ ಬಿದ್ದರೆ ಹೂವು ಸಮಾನವಾಗಿ ಅರಳುತ್ತದೆ. ಮಳೆ ತಡವಾದರೆ ಅಥವಾ ಸರಿಯಾಗಿ ಆಗದಿದ್ದರೆ ಹೂ ಬಿಡುವಿಕೆ ಅಸಮತೋಲನವಾಗುತ್ತದೆ. ಇದರಿಂದ ಕಾಯಿ ಕಟ್ಟುವ ಪ್ರಮಾಣ ಕಡಿಮೆಯಾಗುತ್ತದೆ.

ಬ್ಲಾಸಮ್ ಮಳೆಯ ನಂತರ ೧೦ – ೧೫ ದಿನಗಳಲ್ಲಿ ಮತ್ತೊಂದು ಸಮರ್ಪಕ ಮಳೆ ಅಗತ್ಯವಿದೆ. ಇದನ್ನು ಬ್ಯಾಕಿಂಗ್ ಶವರ್ ಎನ್ನುತ್ತಾರೆ. ಇದು ಹೂವು ಕಾಯಿ ಆಗಿ ಪರಿವರ್ತನೆಗೊಳ್ಳಲು ಸಹಾಯ ಮಾಡುತ್ತದೆ. ಮೊದಲ ಮಳೆಯ ಬಳಿಕ ಬಿಸಿಲು ಹೆಚ್ಚಾಗಿ, ಎರಡನೇ ಮಳೆ ಬಾರದಿದ್ದರೆ ಹೂಗಳು ಒಣಗಿ ಬೀಳುವ ಸಾಧ್ಯತೆ ಇರುತ್ತದೆ. ಇದರಿಂದ ಉತ್ಪಾದನೆ ಶೇ.೨೦ ರಿಂದ ೩೦ ರಷ್ಟು ಕುಸಿಯುವ ಸಾಧ್ಯತೆ ಇರುತ್ತದೆ. ನೀರಿನ ಮೂಲ ಇಲ್ಲದ ಸಣ್ಣ ರೈತರಿಗೆ ಇದು ಕಷ್ಟ. ಹೀಗಾಗಿ ಮಳೆ ಮೇಲಿನ ಅವಲಂಬನೆ ಇನ್ನೂ ಮುಂದುವರಿದಿದೆ.

ಮಳೆ ಮುನ್ಸೂಚನೆ…

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಭಾಗಗಳಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸೆಕೆಯ ವಾತಾವರಣ ಮುಂದುವರಿಯಲಿದೆ. ಮಲೆನಾಡಿನ ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಇದೇ ವಾತಾವರಣವು ಫೆ.೨೭ರ ತನಕವೂ ಮುಂದುವರಿಯುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

” ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಇದೇ ವಾತಾವರಣವು ಫೆ.೨೭ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡಿನ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿ ಕ್ರಮೇಣ ವಾತಾವರಣದ ಉಷ್ಣತೆ ಹೆಚ್ಚಾಗಬಹುದು.”

-ಡಾ.ಸುಮಂತ್ ಕುಮಾರ್, ತಾಂತ್ರಿಕ ಅಧಿಕಾರಿ, ಕೃಷಿ ಹವಾಮಾನ ಘಟಕ, ನಾಗನಹಳ್ಳಿ, ಮೈಸೂರು

” ಕಳೆದ ತಿಂಗಳು ಸುರಿದ ಮಳೆಯಿಂದ ಕೆಲವೆಡೆ ಕಾಫಿ ಗಿಡಗಳು ಹೂಬಿಟ್ಟಿವೆ. ಈಗಾಗಲೇ ಬ್ಯಾಕಿಂಗ್ ನೀಡಲಾಗುತ್ತಿದೆ. ಆದರೆ ಬಹುತೇಕ ಕಡೆ ಬ್ಲಾಸಂ ಶವರ್ ಆಗಬೇಕಾಗಿದೆ. ಇದಕ್ಕಾಗಿ ಬೆಳೆಗಾರರು ಸ್ಪ್ರಿಂಕ್ಲರ್ ಮೊರೆ ಹೋಗಿದ್ದು, ಇದು ಬಹು ವೆಚ್ಚದ ಕೆಲಸವಾಗಿರುವುದರಿಂದ ಈಗ ಮಳೆ ಬಂದರೆ ಭಾರೀ ಅನುಕೂಲ.”

-ಮನು ಸೋಮಯ್ಯ, ಬೆಳೆಗಾರ, ಜಿಲ್ಲಾ ರೈತ ಸಂಘದ ಅಧ್ಯಕ್ಷ

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

54 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago