Andolana originals

ವಿರಾಜಪೇಟೆ ಅಂಬೇಡ್ಕರ್‌ ಭವನದ ತಡೆಗೋಡೆ ಕುಸಿತ

ಮಳೆಗಾಲದಲ್ಲಿ ಮತ್ತಷ್ಟು ಕುಸಿಯುವ ಭೀತಿ ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಕಾಂಗೀರ ಬೋಪಣ್ಣ

ವಿರಾಜಪೇಟೆ: ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಭವನದ ತಡೆಗೋಡೆ ಅಲ್ಪ ಮಳೆಗೇ ಕುಸಿದಿದ್ದು, ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ.

ಹಿಂದಿನ ಸಂಸದರು ಹಾಗೂ ಹಾಲಿ ವಿಧಾನಪರಿಷತ್ ಸದಸ್ಯರ ಅನುದಾನದಲ್ಲಿ ಅಂಬೇಡ್ಕರ್ ಭವನ ಕಾರ್ಯನಿರ್ಹಣಾ ಸಮಿತಿ ನೇತೃತ್ವದಲ್ಲಿ ಅಂಬೇಡ್ಕರ್ ಭವನದ ಪಕ್ಕದ ಖಾಲಿ ಜಾಗಕ್ಕೆ ತಡೆಗೋಡೆ, ಇಂಟರ್ ಲಾಕ್ ಹಾಕಿ ಆಗತ್ಯ ಬಳಕೆಗೆ ಸಿದ್ಧಪಡಿಸಲಾಗಿತ್ತು. ಆದರೆ ಮುಂಗಾರು ಆರಂಭಕ್ಕೂ ಮುನ್ನವೇ ಸುರಿದ ಅಲ್ಪ ಮಳೆಗೆ ತಡೆಗೋಡೆ ಕುಸಿದಿದೆ. ಇದರಿಂದ ಇತರ ಕಾಮಗಾರಿಯೂ ಕಳಪೆ ಆಗಿರುವ ಅನುಮಾನ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಏ. ೧೪ರಂದು ಅಂಬೇಡ್ಕರ್ ಭವನದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ನೆರವೇರಿಸಿದ್ದರು. ೨೦೦೫ರಿಂದ ಈ ಭವನದ ಕಾಮಗಾರಿ ಒಂದಲ್ಲ ಒಂದು ವಿಳಂಬವಾಗಿ ಮಂದಗತಿಯಿಂದ ನಡೆಯುತ್ತಿತ್ತು. ೧. ೮೦ ಕೋಟಿ ರೂ. ಗೂ ಅಽಕ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಭವನ ನಿರ್ಮಾಣ ಮಾಡಲಾಗಿತ್ತಾದರೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಹೀಗೆ ನಿರ್ಮಾಣಗೊಂಡಿದ್ದ ಕಟ್ಟಡ ಅಽಕಾರಿ ವರ್ಗದ ನಿರ್ಲಕ್ಷ ದಿಂದ ಅನೈತಿಕ ಚಟುವಟಿಕೆಗಳ ತಾಣವಾಗಿತ್ತು. ಪತ್ರಿಕೆಗಳಲ್ಲಿ ಈ ಬಗ್ಗೆ ಬಂದ ನಿರಂತರ ವರದಿಗಳಿಂದ ಇದಕ್ಕೆ ಬೀಗ ಹಾಕುವ ಕೆಲಸ ಆಗಿತ್ತು. ನಂತರ ಈಗಿನ ಶಾಸಕರ ಅವಽಯಲ್ಲಿ ಅಪೂರ್ಣಗೊಂಡಿರುವ ಕೆಲಸ ಮಾಡಲು ಹೆಚ್ಚುವರಿಯಾಗಿ ೨೫ ಲಕ್ಷ ರೂ. ಗಳ ವೆಚ್ಚದಲ್ಲಿ ಕಾಮಗಾರಿ ನಡೆದು ಉದ್ಘಾಟನೆಯೂ ಆಯಿತು.

ಇದೇ ಸಂದರ್ಭದಲ್ಲಿ ಇದಕ್ಕೆ ಹೊಂದಿಕೊಂಡಿದ್ದ ಖಾಲಿ ಜಾಗವನ್ನು ಭವನದ ಕೆಲವು ಉದ್ದೇಶಗಳಿಗೆ ಬಳಸಲು ನಿರ್ಧರಿಸಿ ಅದಕ್ಕೆ ಈ ಹಿಂದಿನ ಸಂಸದರ ೫ ಲಕ್ಷ ರೂ. ಮತ್ತು ವಿಧಾನಪರಿಷತ್ ಸದಸ್ಯರ ೫ ಲಕ್ಷ ರೂ. ಅನುದಾನದಲ್ಲಿ ಭೂ ತಡೆಗೋಡೆ ಮತ್ತಿತರ ಕಾಮಗಾರಿ ನಡೆಸಲಾಯಿತು. ಆದರೆ, ಇದೀಗ ಈ ಕಾಮಗಾರಿಯ ಭಾಗವಾದ ತಡೆಗೋಡೆ ಜನಬಳಕೆಗೂ ಮುಂಚೆಯೇ ಮಳೆಗೆ ಕುಸಿದಿದೆ.

ಮೇ ೧೯ರಂದು ಸಂಜೆ ಸುರಿದ ಮಳೆಗೆ ತಡೆಗೋಡೆ ಕುಸಿದಿದ್ದು, ಈ ಗೋಡೆಯ ಅವಶೇಷಗಳನ್ನು ಅಂದು ರಾತ್ರಿಯೇ ತರಾತುರಿಯಲ್ಲಿ ತೆಗೆದು ಟಾರ್ಪಾಲ್‌ನಿಂದ ಮುಚ್ಚಲಾಗಿತ್ತು. ಆದರೆ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ಹರಡಿ ಚರ್ಚೆಗೆ ಗ್ರಾಸವಾಗಿತ್ತು. ಇದು ಕಾಮಗಾರಿಯ ಗುಣಮಟ್ಟವನ್ನು ಸಾರಿ ಹೇಳುತ್ತಿದ್ದು, ಇದಕ್ಕೆ ನಿರ್ವಾಹಣಾ ಸಮಿತಿಯೇ ಹೊಣೆ ಎಂದು ಸ್ಥಳೀಯರು ದೂರಿದ್ದಾರೆ.

ಲಕ್ಷಾಂತರ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕಾಗುತ್ತದೆ. ಕಾಮಗಾರಿ ಮಾಡುವವರು, ಮಾಡಿಸುವವರು, ಮೇಲುಸ್ತುವಾರಿ ನೋಡಿಕೊಳ್ಳುವವರು ಎಲ್ಲರೂ ಇದಕ್ಕೆ ಜವಾಬ್ದಾರರಾಗುತ್ತಾರೆ. ಆದರೆ ಇಲ್ಲಿ ಬಳಕೆಗೂ ಮುನ್ನವೇ ತಡೆಗೋಡೆ ಕುಸಿದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಸಂಬಂಧಪಟ್ಟವರು ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯವಿದೆ.

ಇದು ಈ ಹಿಂದೆಯೇ ನಿರ್ಮಿಸಿದ ತಡೆಗೋಡೆಯಾಗಿತ್ತು. ಇದರ ಮೇಲಿನ ಖಾಲಿ ಜಾಗಕ್ಕೆ ನಾವು ಇಂಟರ್‌ಲಾಕ್ ಹಾಕುವ ಕೆಲಸ ಉದ್ಘಾಟನೆಗೂ ಮುಂಚೆ ಮಾಡಿದ್ದೆವು. ಇದು ಬೇರೆಡೆಯಿಂದ ತಂದು ಹಾಕಿದ ಮಣ್ಣಾಗಿರುವುದರಿಂದ
ಒತ್ತಡ ತಡೆಯದೆ ತಡೆಗೋಡೆ ಕುಸಿದಿದೆ. ಇಂದಿನಿಂದ ಮತ್ತೆ ಆ ತಡೆಗೋಡೆಯ ಮರು ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಸೂಕ್ತ ರೀತಿಯ ಕಾಮಗಾರಿ ನಡೆಸಲಾಗುತ್ತದೆ.

-ವಿ.ಕೆ.ಸತೀಶ್, ಅಂಬೇಡ್ಕರ್ ಭವನ ಕಾರ್ಯನಿರ್ವಹಣಾ ಸಮಿತಿ ಸದಸ್ಯರು

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

4 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

4 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

5 hours ago