Andolana originals

ವಿರಾಜಪೇಟೆ ಅಂಬೇಡ್ಕರ್‌ ಭವನದ ತಡೆಗೋಡೆ ಕುಸಿತ

ಮಳೆಗಾಲದಲ್ಲಿ ಮತ್ತಷ್ಟು ಕುಸಿಯುವ ಭೀತಿ ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಕಾಂಗೀರ ಬೋಪಣ್ಣ

ವಿರಾಜಪೇಟೆ: ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಭವನದ ತಡೆಗೋಡೆ ಅಲ್ಪ ಮಳೆಗೇ ಕುಸಿದಿದ್ದು, ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ.

ಹಿಂದಿನ ಸಂಸದರು ಹಾಗೂ ಹಾಲಿ ವಿಧಾನಪರಿಷತ್ ಸದಸ್ಯರ ಅನುದಾನದಲ್ಲಿ ಅಂಬೇಡ್ಕರ್ ಭವನ ಕಾರ್ಯನಿರ್ಹಣಾ ಸಮಿತಿ ನೇತೃತ್ವದಲ್ಲಿ ಅಂಬೇಡ್ಕರ್ ಭವನದ ಪಕ್ಕದ ಖಾಲಿ ಜಾಗಕ್ಕೆ ತಡೆಗೋಡೆ, ಇಂಟರ್ ಲಾಕ್ ಹಾಕಿ ಆಗತ್ಯ ಬಳಕೆಗೆ ಸಿದ್ಧಪಡಿಸಲಾಗಿತ್ತು. ಆದರೆ ಮುಂಗಾರು ಆರಂಭಕ್ಕೂ ಮುನ್ನವೇ ಸುರಿದ ಅಲ್ಪ ಮಳೆಗೆ ತಡೆಗೋಡೆ ಕುಸಿದಿದೆ. ಇದರಿಂದ ಇತರ ಕಾಮಗಾರಿಯೂ ಕಳಪೆ ಆಗಿರುವ ಅನುಮಾನ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಏ. ೧೪ರಂದು ಅಂಬೇಡ್ಕರ್ ಭವನದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ನೆರವೇರಿಸಿದ್ದರು. ೨೦೦೫ರಿಂದ ಈ ಭವನದ ಕಾಮಗಾರಿ ಒಂದಲ್ಲ ಒಂದು ವಿಳಂಬವಾಗಿ ಮಂದಗತಿಯಿಂದ ನಡೆಯುತ್ತಿತ್ತು. ೧. ೮೦ ಕೋಟಿ ರೂ. ಗೂ ಅಽಕ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಭವನ ನಿರ್ಮಾಣ ಮಾಡಲಾಗಿತ್ತಾದರೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಹೀಗೆ ನಿರ್ಮಾಣಗೊಂಡಿದ್ದ ಕಟ್ಟಡ ಅಽಕಾರಿ ವರ್ಗದ ನಿರ್ಲಕ್ಷ ದಿಂದ ಅನೈತಿಕ ಚಟುವಟಿಕೆಗಳ ತಾಣವಾಗಿತ್ತು. ಪತ್ರಿಕೆಗಳಲ್ಲಿ ಈ ಬಗ್ಗೆ ಬಂದ ನಿರಂತರ ವರದಿಗಳಿಂದ ಇದಕ್ಕೆ ಬೀಗ ಹಾಕುವ ಕೆಲಸ ಆಗಿತ್ತು. ನಂತರ ಈಗಿನ ಶಾಸಕರ ಅವಽಯಲ್ಲಿ ಅಪೂರ್ಣಗೊಂಡಿರುವ ಕೆಲಸ ಮಾಡಲು ಹೆಚ್ಚುವರಿಯಾಗಿ ೨೫ ಲಕ್ಷ ರೂ. ಗಳ ವೆಚ್ಚದಲ್ಲಿ ಕಾಮಗಾರಿ ನಡೆದು ಉದ್ಘಾಟನೆಯೂ ಆಯಿತು.

ಇದೇ ಸಂದರ್ಭದಲ್ಲಿ ಇದಕ್ಕೆ ಹೊಂದಿಕೊಂಡಿದ್ದ ಖಾಲಿ ಜಾಗವನ್ನು ಭವನದ ಕೆಲವು ಉದ್ದೇಶಗಳಿಗೆ ಬಳಸಲು ನಿರ್ಧರಿಸಿ ಅದಕ್ಕೆ ಈ ಹಿಂದಿನ ಸಂಸದರ ೫ ಲಕ್ಷ ರೂ. ಮತ್ತು ವಿಧಾನಪರಿಷತ್ ಸದಸ್ಯರ ೫ ಲಕ್ಷ ರೂ. ಅನುದಾನದಲ್ಲಿ ಭೂ ತಡೆಗೋಡೆ ಮತ್ತಿತರ ಕಾಮಗಾರಿ ನಡೆಸಲಾಯಿತು. ಆದರೆ, ಇದೀಗ ಈ ಕಾಮಗಾರಿಯ ಭಾಗವಾದ ತಡೆಗೋಡೆ ಜನಬಳಕೆಗೂ ಮುಂಚೆಯೇ ಮಳೆಗೆ ಕುಸಿದಿದೆ.

ಮೇ ೧೯ರಂದು ಸಂಜೆ ಸುರಿದ ಮಳೆಗೆ ತಡೆಗೋಡೆ ಕುಸಿದಿದ್ದು, ಈ ಗೋಡೆಯ ಅವಶೇಷಗಳನ್ನು ಅಂದು ರಾತ್ರಿಯೇ ತರಾತುರಿಯಲ್ಲಿ ತೆಗೆದು ಟಾರ್ಪಾಲ್‌ನಿಂದ ಮುಚ್ಚಲಾಗಿತ್ತು. ಆದರೆ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ಹರಡಿ ಚರ್ಚೆಗೆ ಗ್ರಾಸವಾಗಿತ್ತು. ಇದು ಕಾಮಗಾರಿಯ ಗುಣಮಟ್ಟವನ್ನು ಸಾರಿ ಹೇಳುತ್ತಿದ್ದು, ಇದಕ್ಕೆ ನಿರ್ವಾಹಣಾ ಸಮಿತಿಯೇ ಹೊಣೆ ಎಂದು ಸ್ಥಳೀಯರು ದೂರಿದ್ದಾರೆ.

ಲಕ್ಷಾಂತರ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕಾಗುತ್ತದೆ. ಕಾಮಗಾರಿ ಮಾಡುವವರು, ಮಾಡಿಸುವವರು, ಮೇಲುಸ್ತುವಾರಿ ನೋಡಿಕೊಳ್ಳುವವರು ಎಲ್ಲರೂ ಇದಕ್ಕೆ ಜವಾಬ್ದಾರರಾಗುತ್ತಾರೆ. ಆದರೆ ಇಲ್ಲಿ ಬಳಕೆಗೂ ಮುನ್ನವೇ ತಡೆಗೋಡೆ ಕುಸಿದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಸಂಬಂಧಪಟ್ಟವರು ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯವಿದೆ.

ಇದು ಈ ಹಿಂದೆಯೇ ನಿರ್ಮಿಸಿದ ತಡೆಗೋಡೆಯಾಗಿತ್ತು. ಇದರ ಮೇಲಿನ ಖಾಲಿ ಜಾಗಕ್ಕೆ ನಾವು ಇಂಟರ್‌ಲಾಕ್ ಹಾಕುವ ಕೆಲಸ ಉದ್ಘಾಟನೆಗೂ ಮುಂಚೆ ಮಾಡಿದ್ದೆವು. ಇದು ಬೇರೆಡೆಯಿಂದ ತಂದು ಹಾಕಿದ ಮಣ್ಣಾಗಿರುವುದರಿಂದ
ಒತ್ತಡ ತಡೆಯದೆ ತಡೆಗೋಡೆ ಕುಸಿದಿದೆ. ಇಂದಿನಿಂದ ಮತ್ತೆ ಆ ತಡೆಗೋಡೆಯ ಮರು ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಸೂಕ್ತ ರೀತಿಯ ಕಾಮಗಾರಿ ನಡೆಸಲಾಗುತ್ತದೆ.

-ವಿ.ಕೆ.ಸತೀಶ್, ಅಂಬೇಡ್ಕರ್ ಭವನ ಕಾರ್ಯನಿರ್ವಹಣಾ ಸಮಿತಿ ಸದಸ್ಯರು

ಆಂದೋಲನ ಡೆಸ್ಕ್

Recent Posts

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

15 mins ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

27 mins ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

2 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

3 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

8 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

8 hours ago