Andolana originals

ನಗರದ ಬಡಾವಣೆಗಳಲ್ಲಿ ಕುಸಿದ ಮ್ಯಾನ್‌ಹೋಲ್‌ಗಳು

ವಾಹನ ಓಡಿಸಲು ಸವಾರರ ಪರದಾಟ; ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ

ಚಾಮರಾಜನಗರ: ನಗರದ ವಿವಿಧ ಬಡಾವಣೆಗಳ ಪ್ರಮುಖ ರಸ್ತೆಗಳಲ್ಲಿ ಮ್ಯಾನ್ ಹೋಲ್‌ಗಳು ಕುಸಿದಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಇದಲ್ಲದೆ ಮ್ಯಾನ್‌ಹೋಲ್‌ಗಳ ದುರ್ವಾಸನೆಯಿಂದ ಸ್ಥಳೀಯರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.

ನಗರದ ಬುದ್ಧನಗರದ ೨ನೇ ತಿರುವು, ಪಚ್ಚಪ್ಪ ಲೇಔಟ್‌ನ ಸಂತ ಜೋಸೆಫ್ ಆಸ್ಪತ್ರೆ ಹಿಂಭಾಗದ ರಸ್ತೆ, ನ್ಯಾಯಾಲಯದ ರಸ್ತೆಗಳಲ್ಲಿ ಮ್ಯಾನ್ ಹೋಲ್‌ಗಳು ಕುಸಿದಿವೆ. ಇದರಿಂದ ವಾಹನಗಳ ಸವಾರರು ಪರದಾಡುವಂತಾಗಿದೆ. ಕುಸಿದಿರುವ ಮ್ಯಾನ್‌ಹೋಲ್‌ಗಳನ್ನು ವಾಹನಗಳ ಸವಾರರು ಬೀಳದಿರಲಿ ಎಂದು ಸ್ಥಳೀಯರು ಕಲ್ಲುಗಳಿಂದ ಮುಚ್ಚಿದ್ದಾರೆ.

ಇದನ್ನು ಓದಿ:9 ತಿಂಗಳೂ ಕಳೆದರೂ ಅಭಿವೃದ್ಧಿ ಕಾಣದ ರಸ್ತೆ

ಬುದ್ಧ ನಗರದ ೨ನೇ ತಿರುವಿನಲ್ಲಿ ಒಂದು ಮ್ಯಾನ್ ಹೋಲ್ ಮುಚ್ಚಳ ಒಡೆದು ಚೂರಾಗಿದೆ. ಸ್ಥಳೀಯರು ಚಪ್ಪಡಿ ಕಲ್ಲು ಹಾಕಿ ಮುಚ್ಚಿದ್ದಾರೆ. ಸಂತ ಜೋಸೆಫ್ ಆಸ್ಪತ್ರೆ ಹಿಂಭಾಗದ ರಸ್ತೆಯಲ್ಲಿ ಮುಚ್ಚಳ ಸಂಪೂರ್ಣವಾಗಿ ಒಡೆದು ಕುಸಿದಿದ್ದು ಬಾಯಿ ತೆರೆದುಕೊಂಡಿದೆ. ನ್ಯಾಯಾಲಯ ರಸ್ತೆಯ ಎರಡೂ ಕಡೆ ಮ್ಯಾನ್‌ಹೋಲ್‌ಗಳು ಶಿಥಿಲಗೊಂಡಿದ್ದು ಇನ್ನೇನು ಕುಸಿದು ಬೀಳುವ ಹಂತದಲ್ಲಿವೆ.

ಮ್ಯಾನ್‌ಹೋಲ್‌ಗಳಿಂದ ದುರ್ವಾಸನೆಹೊರಬರುತ್ತಿದ್ದು ಅಕ್ಕಪಕ್ಕದ ಮನೆಯವರು ಮೂಗು ಮುಚ್ಚಿಕೊಂಡು ಓಡಾಡಬೇಕಿದೆ.ಗಾಳಿ ಜೋರಾಗಿ ಬೀಸಿದರೆ ವಾಸನೆ ಹರಡುತ್ತಿದೆ. ಇದರಿಂದ ಮಾನಸಿಕವಾಗಿ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಡಾವಣೆಗಳಲ್ಲಿ ಹೊಸ ಮನೆ ನಿರ್ಮಾಣ ಮಾಡುವಾಗ ಎಂ.ಸ್ಯಾಂಡ್, ಸಿಮೆಂಟ್ ಇಟ್ಟಿಗೆಗಳಂತಹ ಹೆಚ್ಚು ಭಾರವನ್ನು ಹೊತ್ತು ಲಾರಿ, ಟ್ರಾಕ್ಟರ್, ಟಿಪ್ಪರ್‌ಗಳು ಓಡಾಡುವುದರಿಂದ ಮ್ಯಾನ್‌ಹೋಲ್‌ಗಳು  ಕುಸಿಯುತ್ತಿವೆ.

ಬುದ್ಧನಗರ ೧೦ನೇ ವಾರ್ಡ್‌ಗೆ ಸೇರಿದ್ದು, ಈ ವಾರ್ಡ್ ಪ್ರತಿನಿಽಸುವ ನಗರಸಭೆ ಸದಸ್ಯರಾದ ಮನೋಜ್ ಪಟೇಲ್ ಹಾಗೂ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ದುರಸ್ತಿ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. ಮ್ಯಾನ್ ಹೋಲ್‌ಗಳು ಮತ್ತಷ್ಟು ಕುಸಿದು ಅಧ್ವಾನ ಆಗುವ ಮೊದಲು ದುರಸ್ತಿ ಮಾಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನು ಓದಿ :ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವು: ಸಚಿವ ರಾಮಲಿಂಗಾರೆಡ್ಡಿ

ಬುದ್ಧನಗರ, ಪಚ್ಚಪ್ಪ ಲೇಔಟ್ ಸೇರಿದಂತೆ ಇತರೆ ಬಡಾವಣೆಗಳಲ್ಲಿ ಮ್ಯಾನ್‌ಹೋಲ್ಗಳು ಕುಸಿದಿವೆ. ನಗರಸಭೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಬೇಗ ದುರಸ್ತಿಗೆ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

” ಮ್ಯಾನ್ ಹೋಲ್ ಕುಸಿದಿರುವ ಸ್ಥಳಗಳಿಗೆ ನಗರಸಭೆಯ ಸಿಬ್ಬಂದಿಯನ್ನು ಕೂಡಲೇ ಕಳುಹಿಸಿ ಪರಿಶೀಲಿಸಲಾಗುವುದು. ನಂತರ ದುರಸ್ತಿ ಮಾಡಿಸಲು ಕ್ರಮ ವಹಿಸಲಾಗುತ್ತದೆ.”

-ರೂಪ, ಪ್ರಭಾರ ಪೌರಾಯುಕ್ತರು, ನಗರಸಭೆ, ಚಾ.ನಗರ

” ಮ್ಯಾನ್‌ಹೋಲ್ ಕುಸಿದಿರುವ ಬಗ್ಗೆ ನಾನು ನಗರಸಭೆಯ ಸಹಾಯಕ ಇಂಜಿನಿಯರ್ ಗಮನಕ್ಕೆ ತಂದಿದ್ದೇನೆ. ಮ್ಯಾನ್‌ಹೋಲ್‌ಗಳ ಮುಚ್ಚಳ ನಮ್ಮ ಬಳಿ ದಾಸ್ತಾನಿಲ್ಲ. ಹೊಸದಾಗಿ ಖರೀದಿಸಿ ಹಾಕಬೇಕಿದೆ. ಇದಕ್ಕೆ ಒಂದು ವಾರ ಕಾಲಾವಕಾಶ ಬೇಕೆಂದು ತಿಳಿಸಿದ್ದಾರೆ. ಅಲ್ಲಿಯ ತನಕ ಮತ್ತಷ್ಟು ಕುಸಿಯಲಿವೆ. ಆದಷ್ಟು ಬೇಗ ದುರಸ್ತಿ ಮಾಡಿಸಬೇಕು.”

-ಭಾನುಪ್ರಕಾಶ್, ಸಾಮಾಜಿಕ ಹೋರಾಟಗಾರರು, ಬುದ್ಧನಗರ

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago