Andolana originals

ಜಮೀನು ರಸ್ತೆಗಾಗಿ ಕಾಲೇಜು ಕಾಂಪೌಂಡ್ ನೆಲಸಮ

ಎಚ್.ಡಿ.ಕೋಟೆ ಸರ್ಕಾರಿ ಕಾಲೇಜಿನ ಪಕ್ಕದ ಜಮೀನಿನವರಿಂದ ಕೃತ್ಯ

ರಾತ್ರೋ ರಾತ್ರಿ ಕಾರ್ಯಾಚರಣೆ ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಂಜು ಕೋಟೆ

ಎಚ್.ಡಿ.ಕೋಟೆ: ರಸ್ತೆ ನಿರ್ಮಾಣ ಮಾಡಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೌಂಡ್ ಅನ್ನು ಪಕ್ಕದಜಮೀನಿನ ಕೆಲ ಪ್ರಭಾವಿಗಳು ರಾತ್ರೋರಾತ್ರಿ ನೆಲಸಮ ಗೊಳಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಇತ್ತೀಚಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಭೂಮಾಫಿಯಾ ಹೆಚ್ಚಾಗುತ್ತಿದ್ದು, ಸರ್ಕಾರಿ ಜಮೀನು, ಜಾಗಗಳು ಭೂಗಳ್ಳರ ಪಾಲಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿರುವಸಂದರ್ಭದಲ್ಲಿ ಪಟ್ಟಣದಲ್ಲಿ ಇದೇ ರೀತಿಯ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಗದ್ದಿಗೆ ವೃತ್ತದ ಬಳಿ ೯ ಎಕರೆ ೩೦ ಗುಂಟೆ ಜಾಗದಲ್ಲಿ ೩೦ ವರ್ಷಗಳ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪನೆ ಮಾಡಲಾಯಿತು. ಆದರೆ, ಕಾಲೇಜಿನ ಕಾಂಪೌಂಡಿನ ಕೊನೆ ಭಾಗದಲ್ಲಿ ಸುಮಾರು ೩೦ ಅಡಿಗಳಷ್ಟು ಕಾಂಪೌಂಡ್ ಅನ್ನು ೧೫ ದಿನಗಳ ಹಿಂದೆ ಕಾಲೇಜಿನ ಪಕ್ಕದ ಜಮೀನಿನವರಾದ ರಂಗನಾಥ್ ಹಾಗೂಮತ್ತಿತರರು ತಮ್ಮ ಜಾಗವೆಂದು ಹೇಳಿ, ಕಂದಾಯ ಇಲಾಖೆಯ ಕೆಲ ಅಧಿಕಾರಿಗಳ ಸಹಕಾರದಿಂದ ಕೆಲ ದಾಖಲಾತಿಗಳನ್ನು ಪಡೆದು ರಾತ್ರೋರಾತ್ರಿ ಕಾಂಪೌಂಡ್ ಒಡೆದು ಹಾಕಿದ್ದಾರೆ.

ಈ ವಿಚಾರ ತಿಳಿದ ಕಾಲೇಜಿನ ಪ್ರಾಂಶುಪಾಲರಾದ ಅರುಣ್‌ಕುಮಾರ್ ಅವರು, ತಹಸಿಲ್ದಾರ್ ಶ್ರೀನಿವಾಸ್ ಮತ್ತು ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ ಅವರಿಗೆ ದೂರು ನೀಡಿದ್ದರು.

ಈ ಜಾಗದ ವಿಚಾರವಾಗಿ ಸರ್ವೇ ನಡೆಯದೆ ಅಕ್ರಮವಾಗಿ ಕಾಂಪೌಂಡ್ ಒಡೆದು ಹಾಕಿರುವುದು ತಪ್ಪಾಗಿದ್ದು, ಸರ್ವೆ ಕಾರ್ಯ ನಡೆದು ಸರ್ಕಾರದ ಜಾಗವೋ ಅಥವಾ ಜಮೀನಿನವರ ಜಾಗವೋ ಎಂದು ತಿಳಿಯುವವರೆಗೂ ಕಾಂಪೌಂಡ್ ಜಾಗದಲ್ಲಿ ಕಾಮಗಾರಿ ನಡೆಸಬಾರದೆಂದು ಸೂಚನೆ ನೀಡಿ ದೂರು ದಾಖಲು ಮಾಡಿಕೊಂಡಿದ್ದರು.

ಆದರೂ ಬುಧವಾರ ಜಮೀನಿನವರು ಮತ್ತು ಪ್ರಭಾವಿಗಳು ಹೊಸದಾಗಿ ಕಾಂಪೌಂಡ್ ಮತ್ತು ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತೊಮ್ಮೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ.

ಈ ಭಾಗದಲ್ಲಿ ಜಮೀನು ಮತ್ತು ನಿವೇಶನಗಳಿಗೆ ಭಾರೀ ಬೇಡಿಕೆ ಮತ್ತು ಹೆಚ್ಚು ಮೌಲ್ಯ ಇರುವುದರಿಂದ ದಿನದಿಂದ ದಿನಕ್ಕೆ ಅನೇಕ ಸಮಸ್ಯೆಗಳು ಉಂಟಾಗುತ್ತಿದ್ದು, ಸರ್ಕಾರದ ಜಾಗವೋ ಅಥವಾ ಜಮೀನಿನವರ ಜಾಗವೋ ಎಂಬುದನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿದೆ. ಶಾಸಕ ಅನಿಲ್ ಚಿಕ್ಕಮಾದುರವರು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದು, ಸರ್ಕಾರಿ ಕಾಲೇಜಿನ ಕಾಂಪೌಂಡ್‌ಅನ್ನು ಒಡೆದು ಹಾಕಿರುವ ಬಗ್ಗೆ ಹಾಗೂ ಕಾಲೇಜಿನ ಜಾಗದ ಸಮಗ್ರ ಸರ್ವೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.

ʼ ಪ್ರಥಮ ದರ್ಜೆ ಕಾಲೇಜಿನ ಜಾಗದ ಅಳತೆ ಮತ್ತು ಜಮೀನಿನವರಿಗೆ ಸೇರಿದ ರಸ್ತೆಯ ಜಾಗ ಎಲ್ಲಿದೆ ಎಂಬುದನ್ನು ಕಂದಾಯ ಇಲಾಖೆಯವರು ಸರ್ವೆ ಮಾಡಿ ಜಾಗವನ್ನು ಗುರುತಿಸಿದ ನಂತರ ಅವರವರ ಜಾಗವನ್ನು ಹದ್ದುಬಸ್ತು ಮಾಡಿಕೊಳ್ಳಲು ಸೂಚಿಸಲಾಗಿದೆ. ಅಲ್ಲಿಯವರೆಗೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡದಂತೆ ಸೂಚಿಸಲಾಗಿದೆ.”

-ಗಂಗಾಧರ್, ಸರ್ಕಲ್ ಇನ್‌ಸ್ಪೆಕ್ಟರ್

” ಸರ್ಕಾರಿ ಪದವಿ ಕಾಲೇಜಿನ ಜಾಗದಲ್ಲಿ ರಸ್ತೆ ಬಿಡಿಸಬೇಕೆಂದು ಜಮೀನಿನ ವರು ಕಾಂಪೌಂಡ್ಅನ್ನು ಒಡೆದು ರಸ್ತೆ ನಿರ್ಮಿಸಿ ಕೊಂಡು ತಮ್ಮ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದರು. ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಘಟನೆ ಸಂಬಂಧ ಮೇಲಧಿಕಾರಿಗಳಿಗೆ ಮತ್ತು ಶಾಸಕ ರಿಗೆ ವಿಚಾರ ತಿಳಿಸಲಾಗಿದೆ. ಕಾಲೇಜಿನ ಜಾಗ ವನ್ನು ಸರ್ವೆ ಮಾಡಿಕೊಡಿ ಎಂದು ಕಂದಾಯ ಇಲಾಖೆಗೆ ತಿಂಗಳ ಹಿಂದೆಯೇ ಪತ್ರ ಬರೆದರೂ ಅದರ ಬಗ್ಗೆ ಕ್ರಮ ಕೈಗೊಳ್ಳದೆ ಪಕ್ಕದ ಜಮೀನಿನ ರಸ್ತೆ ವಿಚಾರವಾಗಿ ಗಮನಹರಿಸಿದ್ದಾರೆ.”

-ಅರುಣ್ ಕುಮಾರ್, ಪ್ರಾಂಶುಪಾಲರು, ಸರ್ಕಾರಿ ಕಾಲೇಜು

ಆಂದೋಲನ ಡೆಸ್ಕ್

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

47 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

2 hours ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

3 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago