Andolana originals

ವಾಣಿಜ್ಯ ಸಿಲಿಂಡರ್‌ | ಒಂದೇ ತಿಂಗಳಲ್ಲಿ 3 ಬಾರಿ ದರ ಹೆಚ್ಚಳ

ಚಿರಂಜೀವಿ ಸಿ ಹುಲ್ಲಹಳ್ಳಿ

ಮೈಸೂರು: ‘ಎತ್ತಿಗೆ ಜ್ವರ, ಎಮ್ಮೆಗೆ ಬರೆ’ ಎಂಬಂತೆ, ಮಧ್ಯ ಪ್ರಾಚ್ಯದಲ್ಲಿ ಸಮರ ನಡೆಯುತ್ತಿದ್ದರೆ ಭಾರತದಲ್ಲಿ ಜನಸಾಮಾನ್ಯರ ಬದುಕು ಸಮಸ್ಯೆಗಳ ಸುಳಿಗೆ ಸಿಲುಕುತ್ತಿದೆ. ವಿದ್ಯುಚ್ಛಕ್ತಿ ಶುಲ್ಕ, ನೀರಿನ ಕರ ಹಾಗೂ ವಾಣಿಜ್ಯ ಸಿಲಿಂಡರ್ ದರ ಏರಿಕೆಯ ಹೊಡೆತಕ್ಕೆ ನಾಗರಿಕರು ಹೈರಾಣಾಗಿದ್ದಾರೆ.

ಯುದ್ಧದಿಂದ ಎಲ್‌ಪಿಜಿ ಅಭಾವ ಸೃಷ್ಟಿಯಾಗಿ ಜನತೆ ತತ್ತರಿಸಿರುವುದರ ನಡುವೆಯೇ ಕೇಂದ್ರ ಸರ್ಕಾರ ಒಂದೇ ತಿಂಗಳಲ್ಲಿ 3 ಬಾರಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಏರಿಕೆ ಮಾಡಿದೆ. 14 ವರ್ಷಗಳ ನಂತರ ರಾಜ್ಯ ಸರ್ಕಾರ ಶೇ.30ರಷ್ಟು ನೀರಿನ ತೆರಿಗೆ ಮತ್ತು ಯುನಿಟ್‌ಗೆ 35ಪೈಸೆ ವಿದ್ಯುಚ್ಛಕ್ತಿ ಶುಲ್ಕವನ್ನು ಹೆಚ್ಚಳ ಮಾಡಿದರೆ, ಕೇಂದ್ರ ಸರ್ಕಾರ ಒಂದೇ ತಿಂಗಳಲ್ಲಿ ಮೂರು ಬಾರಿ (ಒಟ್ಟು 497 ರೂ. ) ವಾಣಿಜ್ಯ ಸಿಲಿಂಡರ್ ದರವನ್ನು ಹೆಚ್ಚಳ ಮಾಡಿದೆ. ಇದರ ಪರಿಣಾಮವಾಗಿ ಜನಸಾಮಾನ್ಯರ ಆರ್ಥಿಕ ಸ್ಥಿತಿ ದುರ್ಬಲವಾಗಿದೆ.

ಪ್ರತಿ ತಿಂಗಳ ಮೊದಲ ದಿನ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂ ಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು, ಅಂತಾರಾಷ್ಟ್ರೀಯ ಮಾನ ದಂಡಗಳು ಹಾಗೂ ವಿನಿಮಯ ದರದ ಆಧಾರದ ಮೇಲೆ ಸಿಲಿಂಡರ್‌ಗಳ ದರಗಳನ್ನು ಪರಿಷ್ಕರಿಸುತ್ತವೆ. ಆದರೆ, ಕಳೆದ ತಿಂಗಳು ಮೂರು ಬಾರಿ ದರ ಹೆಚ್ಚಳ ಮಾಡಲಾಗಿದೆ.

ಗ್ಯಾಸ್ ಸಿಲಿಂಡರ್ ಮಾರ್ಚ್ 1ರಂದು 130 ರೂ. , ಮಾರ್ಚ್7ರಂದು 115 ರೂ. ಹಾಗೂ ಇತ್ತೀಚಿನ ಪರಿಷ್ಕರಣೆ ಯಲ್ಲಿ202 ರೂ. ದರ ಹೆಚ್ಚಳ ಕಂಡುಬಂದಿದೆ. ಇದರ ಜೊತೆಗೆ ಹಿಂದೆ ನೀಡಲಾಗುತ್ತಿದ್ದ 150 ರೂ. ರಿಯಾಯಿತಿ ಯನ್ನು ಮಾರ್ಚ್ 7ರಿಂದ ಹಿಂಪಡೆಯಲಾಗಿದೆ. ಈ ಕ್ರಮವು ವ್ಯಾಪಾರಿಗಳ ಮೇಲೆ ಹೆಚ್ಚುವರಿ ಆರ್ಥಿಕ ಒತ್ತಡವನ್ನು ಉಂಟು ಮಾಡಿದೆ. ಈ ಪ್ರಕ್ರಿಯೆಗಳು ಆಹಾರ ವಲಯವನ್ನು ತಲ್ಲಣಗೊಳಿಸಿದ್ದು, ಹಲವಾರು ಹೋಟೆಲ್‌ಗಳು ಈಗಾಗಲೇ ತಿಂಡಿ-ತಿನಿಸುಗಳ ಬೆಲೆಯಲ್ಲಿ ೫ ರೂ. ಗಳಷ್ಟು ಹೆಚ್ಚಳವಾಗಿದೆ.

ಮತ್ತಷ್ಟು ಏರಿಕೆಯಾ ಗುವುದು ನಿಶ್ಚಿತವಾಗಿದೆ. ವ್ಯಾಪಾರಿಗಳ ಪ್ರಕಾರ ಮುಂದಿನ ದಿನಗಳಲ್ಲಿ ಶೇ. ೫ರಿಂದ ೧೦ರವರೆಗೆ ದರ ಏರಿಕೆ ಅನಿವಾರ್ಯ ವಾಗಲಿದೆ. ಸಣ್ಣ ಪ್ರಮಾಣದ ಟೀ ಅಂಗಡಿಗಳ ಮಾಲೀಕರು ಮತ್ತು ಬೀದಿ ವ್ಯಾಪಾರಿಗಳು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೋಟೆಲ್ ಊಟ, ಟೀ ಹಾಗೂ ಇತರೆ ತಿಂಡಿ-ತಿನಿಸುಗಳ ದರ ಏರಿಕೆಯಿಂದ ನಿತ್ಯಜೀವನದ ಖರ್ಚು ಹೆಚ್ಚಾಗುತ್ತಿದ್ದು, ಮಧ್ಯಮ ವರ್ಗದ ಕುಟುಂಬಗಳು ಹೆಚ್ಚಿನ ಆರ್ಥಿಕ ಒತ್ತಡವನ್ನು ಅನುಭವಿಸುವಂತಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದಿಂದ ಈಗಾಗಲೇ ಹೋಟೆಲ್‌ಗಳಲ್ಲಿ 40 ರೂ. ಇದ್ದ ಅನ್ನ-ಸಾಂಬಾರ್ 45 ರೂ. ಆಗಿತ್ತು. ಈಗ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯು ಮತ್ತಷ್ಟು ಹೆಚ್ಚಳವಾಗಲಿದ್ದು, ನೇರ ಪರಿಣಾಮ ಶ್ರೀ ಸಾಮಾನ್ಯರಿಗೆ ಬೀಳಲಿದೆ. ಇದರ ನಡುವೆ ನೀರಿನ ಕರ, ವಿದ್ಯುಚ್ಛಕ್ತಿ ಶುಲ್ಕ ಮತ್ತು ಆಹಾರ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳ ಬೆಲೆ ಏರಿಕೆಯೂ ವ್ಯಾಪಾರಿಗಳಿಗೆ ಮತ್ತೊಂದು ಹೊರೆ ಆಗಿದೆ.

ಮೈಸೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಣ್ಣ ಟೀ ಅಂಗಡಿಗಳು ಮತ್ತು ಬೀದಿಬದಿ ಫಾಸ್ಟ್ ಫುಡ್ ವ್ಯಾಪಾರಿಗಳು ಈಗ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಬೆಲೆ ಹೆಚ್ಚಿಸಿದರೆ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿ, ಹೆಚ್ಚಿಸದಿದ್ದರೆ ನಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ದರ ಒಂದು ತಿಂಗಳ ಅವಧಿಯಲ್ಲಿ 497 ರೂ. ಹೆಚ್ಚಳವಾಗಿರುವ ಕಾರಣ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಮಾಡುವುದು ಅನಿವಾರ್ಯ. ಈಗಾಗಲೇ ಹೋಟೆಲ್ ಉದ್ಯಮ ಬಾರಿ ಸಂಕಷ್ಟಕ್ಕೆ ಸಿಲುಕಿದೆ. ನಷ್ಟದ ಹೊರೆ ತಪ್ಪಿಸಲು ಬೆಲೆ ಏರಿಕೆ ಮಾಡಬೇಕಾಗುತ್ತದೆ. -ಸಿ. ನಾರಾಯಣ ಗೌಡ, ಅಧ್ಯಕ್ಷ, ಮೈಸೂರು ಹೋಟೆಲ್ ಮಾಲೀಕರ ಸಂಘ

ಆರ್ಥಿಕ ವರ್ಷದ ಆರಂಭವೂ ಸಾರ್ವಜನಿಕರ ಜೀವನದ ಮೇಲೆ ಭಾರಿ ಸಂಕಷ್ಟವನ್ನು ತಂದೊಡ್ಡಿದೆ. ಯುದ್ಧದ ಪರಿಣಾಮದಿಂದ ಈಗಾಗಲೇ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡಿರುವುದು ಜನರು ಜೀವನ ನಡೆಸಲು ಹೆಣಗಾಡುವಂತೆ ಮಾಡಿದೆ. ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬದುಕು ನಡೆಸಲು ಕಷ್ಟವಾಗಲಿದೆ. -ಶಿವು, ಮೈಸೂರು

ವಾಣಿಜ್ಯ ಬಳಕೆ ಸಿಲಿಂಡರ್ ದರ ಏರಿಕೆ ಹಿನ್ನೆಲೆಯಲ್ಲಿ ಟೀ-ಕಾಫಿಯ ಬೆಲೆ ಹೆಚ್ಚಳ ಮಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ದರ ಹೆಚ್ಚಿಸದಿದ್ದರೆ ನಮಗೆ ನಷ್ಟವಾಗಲಿದೆ. ಕೆಲ ತಿಂಗಳ ಹಿಂದೆ ಟೀ-ಕಾಫಿ ಬೆಲೆಗಳು ಪರಿಷ್ಕರಣೆಯಾಗಿವೆ. ಗ್ರಾಹಕರು ಹೇಗೆ ಸ್ವೀಕರಿಸುತ್ತಾರೋ! -ಶ್ರೀಕಾಂತ್, ಟೀ ಅಂಗಡಿ ಮಾಲೀಕ

 

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

6 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

6 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

7 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago