Andolana originals

ಗಣೇಶೋತ್ಸವದಲ್ಲಿ ಭಾವೈಕ್ಯತೆ ಮೆರೆದ ಯುವ ಶಕ್ತಿ

ಮಂಡ್ಯ: ನಗರದ ಶಂಕರನಗರದಲ್ಲಿನ ಶಂಕರನಗರ ಗೆಳೆಯರ ಬಳಗ ಹಾಗೂ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪುಷ್ಪಮಂಟಪೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಮುಸ್ಲಿಂ ಯುವಕರು ರಕ್ತದಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದು ಎಲ್ಲರ ಗಮನ ಸೆಳೆಯಿತು.

ಜಿಲ್ಲೆಯ ನಾಗಮಂಗಲದಲ್ಲಿ ಇತ್ತೀಚೆಗೆ ನಡೆದ ಗಣೇಶ ಉತ್ಸವದ ವೇಳೆ ಉಂಟಾದ ಘರ್ಷಣೆಯಲ್ಲಿ ಕೊಟ್ಯಂತರ ರೂ. ಮೌಲ್ಯದ ದಿನಬಳಕೆಯ ವಸ್ತುಗಳು ಬೆಂಕಿಗಾಹುತಿಯಾಗಿ ಜನಸಾಮಾನ್ಯರು ಪರದಾಡುವಂತಾಗಿದ್ದಲ್ಲದೆ, ಹಲವರು ಪೊಲೀಸ್ ಠಾಣೆಗೆ ಅಲೆಯಬೇಕಾದ ಸಂಕಷ್ಟದಲ್ಲಿ ಸಿಲುಕಿರುವ ಸನ್ನಿವೇಶದಲ್ಲಿ ಮಂಡ್ಯದ ಶಂಕರನಗರದ ಯುವಶಕ್ತಿ ಸೌಹಾರ್ದತೆ ಮೆರೆದಿರುವುದು ವಿಶೇಷವಾಗಿದೆ.

ಗಣೇಶೋತ್ಸವದಲ್ಲಿ ಏರ್ಪಡಿಸಿದ್ದ ರಕ್ತದಾನ ಅಭಿಯಾನದಲ್ಲಿ ಸಂಚಾರ ವಾಹನದಲ್ಲಿ 10ಕ್ಕೂ ಹೆಚ್ಚು ಮುಸ್ಲಿಂ ಯುವಕರು ಸೇರಿದಂತೆ 40ಕ್ಕೂ ಹೆಚ್ಚು ರಕ್ತದಾನಿಗಳಿಂದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ರಕ್ತ ಸಂಗ್ರಹಿಸಿಕೊಂಡರು. ಬಳಿಕ ಮಾತನಾಡಿದ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನದ ವ್ಯವಸ್ಥಾಪಕ ರಾಹುಲ್, ಪ್ರಗತಿಪರ ಹೋರಾಟಗಾರ ಡಾ. ಎಂ. ಬಿ. ಶ್ರೀನಿವಾಸ್ ಸ್ಮರಣಾರ್ಥ ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ, ಗಣೇಶ ಪುಷ್ಪಮಂಟಪದಿಂದ ಸಾಕಷ್ಟು ಗೆಳೆಯರು ಒಗ್ಗೂಡಿ, ಒಮ್ಮತ ಬೆಸೆಯುವ ಕೆಲಸ ಮಾಡಲಾಗುತ್ತಿದೆ ಎಂದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯ ಕೋಮುಗಳ ನಡುವೆ ಗಲಭೆ ನಡೆಯಿತು. ಆದರೆ ಇಲ್ಲಿ ಮುಸ್ಲಿಂ ಯುವಕರು, ಗಣೇಶ ಮಂಟಪದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದರು. ಶಾಸಕ ರವಿಕುಮಾರ್ ಗಣಿಗ ಅವರು ಪುಷ್ಪಮಂಟಪಕ್ಕೆ ಆಗಮಿಸಿ ಯುವಕರ ಸಾಮಾಜಿಕ ಸೇವಾ ಕಾರ್ಯವನ್ನು ಶ್ಲಾಸಿದರಲ್ಲದೆ, ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಜೀವಧಾರ ಟ್ರಸ್ಟ್ ಅಧ್ಯಕ್ಷ ನಟರಾಜು, ಮಿಮ್ಸ್ ರಕ್ತನಿಽ ಕೇಂದ್ರದ ರಫಿ, ರಾಜು, ಶಂಕರನಗರ ಗೆಳೆಯರ ಬಳಗದ ಪ್ರಮೋದ್, ಅಭಿಷೇಕ್, ಮಿತಿಲ್, ಲಖನ್, ತೇಜಸ್, ಶ್ರೀನಿವಾಸ್, ಶಿವರಾಜ್, ಧನುಷ್, ಮನೀಷ್, ಇಮ್ರಾನ್, ಸೋಹ್ರಬ್, ಹುಸೇನ್, ಹಿಮು, ಆಕಾಶ್, ಚರಂಜೀವಿ, ಸೂರ್ಯ, ಸೈಯದ್ ಜುನೈದ್, ಶಿವರಾಜ್, ಸೈಯದ್ ಮೊಯಿನ್, ಮೊಹಮ್ಮದ್ ಫೈಝನ್, ಹರ್ಷವರ್ಧನ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

 

andolana

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

8 hours ago