Andolana originals

ಗಣೇಶೋತ್ಸವದಲ್ಲಿ ಭಾವೈಕ್ಯತೆ ಮೆರೆದ ಯುವ ಶಕ್ತಿ

ಮಂಡ್ಯ: ನಗರದ ಶಂಕರನಗರದಲ್ಲಿನ ಶಂಕರನಗರ ಗೆಳೆಯರ ಬಳಗ ಹಾಗೂ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪುಷ್ಪಮಂಟಪೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಮುಸ್ಲಿಂ ಯುವಕರು ರಕ್ತದಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದು ಎಲ್ಲರ ಗಮನ ಸೆಳೆಯಿತು.

ಜಿಲ್ಲೆಯ ನಾಗಮಂಗಲದಲ್ಲಿ ಇತ್ತೀಚೆಗೆ ನಡೆದ ಗಣೇಶ ಉತ್ಸವದ ವೇಳೆ ಉಂಟಾದ ಘರ್ಷಣೆಯಲ್ಲಿ ಕೊಟ್ಯಂತರ ರೂ. ಮೌಲ್ಯದ ದಿನಬಳಕೆಯ ವಸ್ತುಗಳು ಬೆಂಕಿಗಾಹುತಿಯಾಗಿ ಜನಸಾಮಾನ್ಯರು ಪರದಾಡುವಂತಾಗಿದ್ದಲ್ಲದೆ, ಹಲವರು ಪೊಲೀಸ್ ಠಾಣೆಗೆ ಅಲೆಯಬೇಕಾದ ಸಂಕಷ್ಟದಲ್ಲಿ ಸಿಲುಕಿರುವ ಸನ್ನಿವೇಶದಲ್ಲಿ ಮಂಡ್ಯದ ಶಂಕರನಗರದ ಯುವಶಕ್ತಿ ಸೌಹಾರ್ದತೆ ಮೆರೆದಿರುವುದು ವಿಶೇಷವಾಗಿದೆ.

ಗಣೇಶೋತ್ಸವದಲ್ಲಿ ಏರ್ಪಡಿಸಿದ್ದ ರಕ್ತದಾನ ಅಭಿಯಾನದಲ್ಲಿ ಸಂಚಾರ ವಾಹನದಲ್ಲಿ 10ಕ್ಕೂ ಹೆಚ್ಚು ಮುಸ್ಲಿಂ ಯುವಕರು ಸೇರಿದಂತೆ 40ಕ್ಕೂ ಹೆಚ್ಚು ರಕ್ತದಾನಿಗಳಿಂದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ರಕ್ತ ಸಂಗ್ರಹಿಸಿಕೊಂಡರು. ಬಳಿಕ ಮಾತನಾಡಿದ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನದ ವ್ಯವಸ್ಥಾಪಕ ರಾಹುಲ್, ಪ್ರಗತಿಪರ ಹೋರಾಟಗಾರ ಡಾ. ಎಂ. ಬಿ. ಶ್ರೀನಿವಾಸ್ ಸ್ಮರಣಾರ್ಥ ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ, ಗಣೇಶ ಪುಷ್ಪಮಂಟಪದಿಂದ ಸಾಕಷ್ಟು ಗೆಳೆಯರು ಒಗ್ಗೂಡಿ, ಒಮ್ಮತ ಬೆಸೆಯುವ ಕೆಲಸ ಮಾಡಲಾಗುತ್ತಿದೆ ಎಂದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯ ಕೋಮುಗಳ ನಡುವೆ ಗಲಭೆ ನಡೆಯಿತು. ಆದರೆ ಇಲ್ಲಿ ಮುಸ್ಲಿಂ ಯುವಕರು, ಗಣೇಶ ಮಂಟಪದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದರು. ಶಾಸಕ ರವಿಕುಮಾರ್ ಗಣಿಗ ಅವರು ಪುಷ್ಪಮಂಟಪಕ್ಕೆ ಆಗಮಿಸಿ ಯುವಕರ ಸಾಮಾಜಿಕ ಸೇವಾ ಕಾರ್ಯವನ್ನು ಶ್ಲಾಸಿದರಲ್ಲದೆ, ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಜೀವಧಾರ ಟ್ರಸ್ಟ್ ಅಧ್ಯಕ್ಷ ನಟರಾಜು, ಮಿಮ್ಸ್ ರಕ್ತನಿಽ ಕೇಂದ್ರದ ರಫಿ, ರಾಜು, ಶಂಕರನಗರ ಗೆಳೆಯರ ಬಳಗದ ಪ್ರಮೋದ್, ಅಭಿಷೇಕ್, ಮಿತಿಲ್, ಲಖನ್, ತೇಜಸ್, ಶ್ರೀನಿವಾಸ್, ಶಿವರಾಜ್, ಧನುಷ್, ಮನೀಷ್, ಇಮ್ರಾನ್, ಸೋಹ್ರಬ್, ಹುಸೇನ್, ಹಿಮು, ಆಕಾಶ್, ಚರಂಜೀವಿ, ಸೂರ್ಯ, ಸೈಯದ್ ಜುನೈದ್, ಶಿವರಾಜ್, ಸೈಯದ್ ಮೊಯಿನ್, ಮೊಹಮ್ಮದ್ ಫೈಝನ್, ಹರ್ಷವರ್ಧನ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

 

andolana

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

59 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago