Andolana originals

ಗಣೇಶೋತ್ಸವದಲ್ಲಿ ಭಾವೈಕ್ಯತೆ ಮೆರೆದ ಯುವ ಶಕ್ತಿ

ಮಂಡ್ಯ: ನಗರದ ಶಂಕರನಗರದಲ್ಲಿನ ಶಂಕರನಗರ ಗೆಳೆಯರ ಬಳಗ ಹಾಗೂ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪುಷ್ಪಮಂಟಪೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಮುಸ್ಲಿಂ ಯುವಕರು ರಕ್ತದಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದು ಎಲ್ಲರ ಗಮನ ಸೆಳೆಯಿತು.

ಜಿಲ್ಲೆಯ ನಾಗಮಂಗಲದಲ್ಲಿ ಇತ್ತೀಚೆಗೆ ನಡೆದ ಗಣೇಶ ಉತ್ಸವದ ವೇಳೆ ಉಂಟಾದ ಘರ್ಷಣೆಯಲ್ಲಿ ಕೊಟ್ಯಂತರ ರೂ. ಮೌಲ್ಯದ ದಿನಬಳಕೆಯ ವಸ್ತುಗಳು ಬೆಂಕಿಗಾಹುತಿಯಾಗಿ ಜನಸಾಮಾನ್ಯರು ಪರದಾಡುವಂತಾಗಿದ್ದಲ್ಲದೆ, ಹಲವರು ಪೊಲೀಸ್ ಠಾಣೆಗೆ ಅಲೆಯಬೇಕಾದ ಸಂಕಷ್ಟದಲ್ಲಿ ಸಿಲುಕಿರುವ ಸನ್ನಿವೇಶದಲ್ಲಿ ಮಂಡ್ಯದ ಶಂಕರನಗರದ ಯುವಶಕ್ತಿ ಸೌಹಾರ್ದತೆ ಮೆರೆದಿರುವುದು ವಿಶೇಷವಾಗಿದೆ.

ಗಣೇಶೋತ್ಸವದಲ್ಲಿ ಏರ್ಪಡಿಸಿದ್ದ ರಕ್ತದಾನ ಅಭಿಯಾನದಲ್ಲಿ ಸಂಚಾರ ವಾಹನದಲ್ಲಿ 10ಕ್ಕೂ ಹೆಚ್ಚು ಮುಸ್ಲಿಂ ಯುವಕರು ಸೇರಿದಂತೆ 40ಕ್ಕೂ ಹೆಚ್ಚು ರಕ್ತದಾನಿಗಳಿಂದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ರಕ್ತ ಸಂಗ್ರಹಿಸಿಕೊಂಡರು. ಬಳಿಕ ಮಾತನಾಡಿದ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನದ ವ್ಯವಸ್ಥಾಪಕ ರಾಹುಲ್, ಪ್ರಗತಿಪರ ಹೋರಾಟಗಾರ ಡಾ. ಎಂ. ಬಿ. ಶ್ರೀನಿವಾಸ್ ಸ್ಮರಣಾರ್ಥ ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ, ಗಣೇಶ ಪುಷ್ಪಮಂಟಪದಿಂದ ಸಾಕಷ್ಟು ಗೆಳೆಯರು ಒಗ್ಗೂಡಿ, ಒಮ್ಮತ ಬೆಸೆಯುವ ಕೆಲಸ ಮಾಡಲಾಗುತ್ತಿದೆ ಎಂದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯ ಕೋಮುಗಳ ನಡುವೆ ಗಲಭೆ ನಡೆಯಿತು. ಆದರೆ ಇಲ್ಲಿ ಮುಸ್ಲಿಂ ಯುವಕರು, ಗಣೇಶ ಮಂಟಪದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದರು. ಶಾಸಕ ರವಿಕುಮಾರ್ ಗಣಿಗ ಅವರು ಪುಷ್ಪಮಂಟಪಕ್ಕೆ ಆಗಮಿಸಿ ಯುವಕರ ಸಾಮಾಜಿಕ ಸೇವಾ ಕಾರ್ಯವನ್ನು ಶ್ಲಾಸಿದರಲ್ಲದೆ, ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಜೀವಧಾರ ಟ್ರಸ್ಟ್ ಅಧ್ಯಕ್ಷ ನಟರಾಜು, ಮಿಮ್ಸ್ ರಕ್ತನಿಽ ಕೇಂದ್ರದ ರಫಿ, ರಾಜು, ಶಂಕರನಗರ ಗೆಳೆಯರ ಬಳಗದ ಪ್ರಮೋದ್, ಅಭಿಷೇಕ್, ಮಿತಿಲ್, ಲಖನ್, ತೇಜಸ್, ಶ್ರೀನಿವಾಸ್, ಶಿವರಾಜ್, ಧನುಷ್, ಮನೀಷ್, ಇಮ್ರಾನ್, ಸೋಹ್ರಬ್, ಹುಸೇನ್, ಹಿಮು, ಆಕಾಶ್, ಚರಂಜೀವಿ, ಸೂರ್ಯ, ಸೈಯದ್ ಜುನೈದ್, ಶಿವರಾಜ್, ಸೈಯದ್ ಮೊಯಿನ್, ಮೊಹಮ್ಮದ್ ಫೈಝನ್, ಹರ್ಷವರ್ಧನ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

 

andolana

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

11 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

14 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

18 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

21 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

21 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

21 hours ago