Andolana originals

ಎಂಸಿಡಿಸಿಸಿಬಿ ನಿರ್ದೇಶಕ ಸ್ಥಾನಕ್ಕೆ ಮತ ಹಾಕಲು ಪ್ರತಿನಿಧಿಗಳ ಆಯ್ಕೆಗೆ ಪೈಪೋಟಿ

ಮಂಜು ಕೋಟೆ

ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಿಂದ ಕಾರ್ಯತಂತ್ರ; ಮೂಡಿದ ಕುತೂಹಲ

ಎಚ್.ಡಿ.ಕೋಟೆ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಎಚ್.ಡಿ.ಕೋಟೆ ನಿರ್ದೇಶಕ ಸ್ಥಾನಕ್ಕೆ ಮತ ಚಲಾಯಿಸಲು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ತಾಲ್ಲೂಕಿನ ಕಾಂಗ್ರೆಸ್, ಜಾ.ದಳ, ಬಿಜೆಪಿ ಮುಖಂಡರ ನಡುವೆ ತೀವ್ರ ಸೆಣಸಾಟ ನಡೆಯುತ್ತಿದೆ.

ತಾಲ್ಲೂಕಿನಲ್ಲಿ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಟಿಎಪಿಸಿಎಂಎಸ್ ಮತ್ತು ತೋಟಗಾರಿಕೆ ಸಹಕಾರ ಸಂಘ ಹಾಗೂ ೧೫ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ತಲಾ ಒಬ್ಬರಿಗೆ ಮತದಾನ ಮಾಡಲು ಮತ್ತು ಸ್ಪರ್ಧಿಸಲು ಅವಕಾಶ ಇರುವುದರಿಂದ ಪ್ರತಿನಿಧಿ ಆಯ್ಕೆ ಮಾಡಲು ಈ ಮೂರೂ ಪಕ್ಷಗಳ ಮುಖಂಡರ ನಡುವೆ ಜಿದ್ದಾಜಿದ್ದಿ ಉಂಟಾಗಿದೆ.

ಏ.೫ರಿಂದ ೨೦ರವರೆಗೆ ಮತದಾನದ ಅವಕಾಶ ಪಡೆದಿರುವ ೧೭ ಬ್ಯಾಂಕುಗಳಲ್ಲಿ ಪ್ರತಿನಿಧಿಗಳ ಆಯ್ಕೆ ಪೂರ್ಣಗೊಳಿಸಿ, ಜಿಲ್ಲಾ ಬ್ಯಾಂಕಿನ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕಾಗಿದೆ. ಈ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿ ಗೆಲುವು ಸಾಧಿಸಬೇಕಾದರೆ ೮ ಜನ ಪ್ರತಿನಿಧಿಗಳ ಮತಗಳನ್ನು ಪಡೆಯಬೇಕಾಗಿರುವುದರಿಂದ ಮೂರೂ ಪಕ್ಷಗಳ ಮುಖಂಡರು ತಮ್ಮ ಬೆಂಬಲಿಗರನ್ನು ಪ್ರತಿನಿಧಿಯಾಗಿ ಮಾಡಿಕೊಳ್ಳಲು ಕಾರ್ಯತಂತ್ರ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಶಾಸಕ ಅನಿಲ್ ಚಿಕ್ಕಮಾದು ಇದೇ ಪ್ರಪ್ರಥಮವಾಗಿ ಸಹಕಾರ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಲು ಮುಂದಾಗಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಆ ಭಾಗದ ಮುಖಂಡರ ಜೊತೆ ಸಭೆ ನಡೆಸಿ ಕಾರ್ಯತಂತ್ರಗಳನ್ನು ನಡೆಸುತ್ತಿದ್ದಾರೆ. ಇವರ ಜೊತೆಯಲ್ಲಿ ನಾಗನಹಳ್ಳಿ ಪ್ರದೀಪ, ಈರೇಗೌಡ, ನರಸೀಪುರ ರವಿ, ಹಿರೇಹಳ್ಳಿ ಸೋಮೇಶ್, ನರಸಿಂಹಮೂರ್ತಿ, ಸತೀಶ್ ಗೌಡ, ಕ್ಯಾತನಹಳ್ಳಿ ನಾಗರಾಜು, ಜಿನ್ನಹಳ್ಳಿ ರಾಜನಾಯಕ, ಬೈಪಾಸ್ ಮಂಜು, ಭಾಸ್ಕರ್, ಗಿರಿಗೌಡ, ರಾಜು ವಿಶ್ವಕರ್ಮ, ಶಿವಮಲ್ಲಪ್ಪ, ಚಂದ್ರು, ಪರಶಿವ ಮತ್ತಿತರರು ಸಾಥ್ ನೀಡುತ್ತಿದ್ದಾರೆ.

ಜಾ.ದಳ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷದ ಶಾಸಕರ ಮತ್ತು ಮುಖಂಡರ ಆರ್ಭಟಕ್ಕೆ ಕಡಿವಾಣ ಹಾಕಲು ಕಾರ್ಯತಂತ್ರ ರೂಪಿಸುತ್ತಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರ ಪ್ರತಿಸ್ಪರ್ಧಿ  ಯಾರೆಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ. ತಾಲ್ಲೂಕಿನಲ್ಲಿ ಮತದಾನದ ಹಕ್ಕು ಪಡೆದಿರುವ ೧೭ ಸಹಕಾರ ಸಂಘಗಳಲ್ಲಿ ಈಗಾಗಲೇ ೮ ಸಂಘಗಳಲ್ಲಿ ಪ್ರತಿನಿಧಿ ಆಯ್ಕೆ ನಡೆಸಲಾಗಿದೆ. ಇನ್ನು ೯ ಸಂಘಗಳಲ್ಲಿ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿದೆ.

ಒಟ್ಟಿನಲ್ಲಿ ಈ ಬಾರಿಯ ಎಂಸಿಡಿಸಿಸಿ ಬ್ಯಾಂಕಿನ ಕ್ಷೇತ್ರದ ನಿರ್ದೇಶಕರ ಚುನಾವಣೆ ಪೈಪೋಟಿ ಮತ್ತು ಕುತೂಹಲದಿಂದ ಕೂಡಿದೆ.

” ಶಾಸಕ ಅನಿಲ್ ಚಿಕ್ಕಮಾದು ಅವರು ನಿರ್ದೇಶಕರ ಸ್ಥಾನಕ್ಕೆ ಬಹುಮತದಿಂದ ಗೆಲ್ಲಲು ಪಕ್ಷದ ಮುಖಂಡರು ಸಹಕಾರ ಸಂಘದವರು,ಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕರಾದವರು ಸಹಕಾರ ಕ್ಷೇತ್ರಕ್ಕೆ ಚುನಾಯಿತರಾದರೆ ತಾಲ್ಲೂಕಿಗೆ ಮತ್ತು ರೈತ ಕುಟುಂಬಗಳಿಗೆ ಬಹಳಷ್ಟು ನೆರವಾಗಲಿದೆ.”

-ಸತೀಶ್ ಗೌಡ, ಮತದಾನದ ಪ್ರತಿನಿಧಿ, ಕೆ.ಬೆಳತೂರು ವಿಎಸ್‌ಎಸ್‌ಎನ್ ಬ್ಯಾಂಕ್

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

2 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

2 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

2 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

2 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

2 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

10 hours ago