Andolana originals

ಎಂಸಿಡಿಸಿಸಿಬಿ ನಿರ್ದೇಶಕ ಸ್ಥಾನಕ್ಕೆ ಮತ ಹಾಕಲು ಪ್ರತಿನಿಧಿಗಳ ಆಯ್ಕೆಗೆ ಪೈಪೋಟಿ

ಮಂಜು ಕೋಟೆ

ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಿಂದ ಕಾರ್ಯತಂತ್ರ; ಮೂಡಿದ ಕುತೂಹಲ

ಎಚ್.ಡಿ.ಕೋಟೆ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಎಚ್.ಡಿ.ಕೋಟೆ ನಿರ್ದೇಶಕ ಸ್ಥಾನಕ್ಕೆ ಮತ ಚಲಾಯಿಸಲು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ತಾಲ್ಲೂಕಿನ ಕಾಂಗ್ರೆಸ್, ಜಾ.ದಳ, ಬಿಜೆಪಿ ಮುಖಂಡರ ನಡುವೆ ತೀವ್ರ ಸೆಣಸಾಟ ನಡೆಯುತ್ತಿದೆ.

ತಾಲ್ಲೂಕಿನಲ್ಲಿ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಟಿಎಪಿಸಿಎಂಎಸ್ ಮತ್ತು ತೋಟಗಾರಿಕೆ ಸಹಕಾರ ಸಂಘ ಹಾಗೂ ೧೫ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ತಲಾ ಒಬ್ಬರಿಗೆ ಮತದಾನ ಮಾಡಲು ಮತ್ತು ಸ್ಪರ್ಧಿಸಲು ಅವಕಾಶ ಇರುವುದರಿಂದ ಪ್ರತಿನಿಧಿ ಆಯ್ಕೆ ಮಾಡಲು ಈ ಮೂರೂ ಪಕ್ಷಗಳ ಮುಖಂಡರ ನಡುವೆ ಜಿದ್ದಾಜಿದ್ದಿ ಉಂಟಾಗಿದೆ.

ಏ.೫ರಿಂದ ೨೦ರವರೆಗೆ ಮತದಾನದ ಅವಕಾಶ ಪಡೆದಿರುವ ೧೭ ಬ್ಯಾಂಕುಗಳಲ್ಲಿ ಪ್ರತಿನಿಧಿಗಳ ಆಯ್ಕೆ ಪೂರ್ಣಗೊಳಿಸಿ, ಜಿಲ್ಲಾ ಬ್ಯಾಂಕಿನ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕಾಗಿದೆ. ಈ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿ ಗೆಲುವು ಸಾಧಿಸಬೇಕಾದರೆ ೮ ಜನ ಪ್ರತಿನಿಧಿಗಳ ಮತಗಳನ್ನು ಪಡೆಯಬೇಕಾಗಿರುವುದರಿಂದ ಮೂರೂ ಪಕ್ಷಗಳ ಮುಖಂಡರು ತಮ್ಮ ಬೆಂಬಲಿಗರನ್ನು ಪ್ರತಿನಿಧಿಯಾಗಿ ಮಾಡಿಕೊಳ್ಳಲು ಕಾರ್ಯತಂತ್ರ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಶಾಸಕ ಅನಿಲ್ ಚಿಕ್ಕಮಾದು ಇದೇ ಪ್ರಪ್ರಥಮವಾಗಿ ಸಹಕಾರ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಲು ಮುಂದಾಗಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಆ ಭಾಗದ ಮುಖಂಡರ ಜೊತೆ ಸಭೆ ನಡೆಸಿ ಕಾರ್ಯತಂತ್ರಗಳನ್ನು ನಡೆಸುತ್ತಿದ್ದಾರೆ. ಇವರ ಜೊತೆಯಲ್ಲಿ ನಾಗನಹಳ್ಳಿ ಪ್ರದೀಪ, ಈರೇಗೌಡ, ನರಸೀಪುರ ರವಿ, ಹಿರೇಹಳ್ಳಿ ಸೋಮೇಶ್, ನರಸಿಂಹಮೂರ್ತಿ, ಸತೀಶ್ ಗೌಡ, ಕ್ಯಾತನಹಳ್ಳಿ ನಾಗರಾಜು, ಜಿನ್ನಹಳ್ಳಿ ರಾಜನಾಯಕ, ಬೈಪಾಸ್ ಮಂಜು, ಭಾಸ್ಕರ್, ಗಿರಿಗೌಡ, ರಾಜು ವಿಶ್ವಕರ್ಮ, ಶಿವಮಲ್ಲಪ್ಪ, ಚಂದ್ರು, ಪರಶಿವ ಮತ್ತಿತರರು ಸಾಥ್ ನೀಡುತ್ತಿದ್ದಾರೆ.

ಜಾ.ದಳ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷದ ಶಾಸಕರ ಮತ್ತು ಮುಖಂಡರ ಆರ್ಭಟಕ್ಕೆ ಕಡಿವಾಣ ಹಾಕಲು ಕಾರ್ಯತಂತ್ರ ರೂಪಿಸುತ್ತಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರ ಪ್ರತಿಸ್ಪರ್ಧಿ  ಯಾರೆಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ. ತಾಲ್ಲೂಕಿನಲ್ಲಿ ಮತದಾನದ ಹಕ್ಕು ಪಡೆದಿರುವ ೧೭ ಸಹಕಾರ ಸಂಘಗಳಲ್ಲಿ ಈಗಾಗಲೇ ೮ ಸಂಘಗಳಲ್ಲಿ ಪ್ರತಿನಿಧಿ ಆಯ್ಕೆ ನಡೆಸಲಾಗಿದೆ. ಇನ್ನು ೯ ಸಂಘಗಳಲ್ಲಿ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿದೆ.

ಒಟ್ಟಿನಲ್ಲಿ ಈ ಬಾರಿಯ ಎಂಸಿಡಿಸಿಸಿ ಬ್ಯಾಂಕಿನ ಕ್ಷೇತ್ರದ ನಿರ್ದೇಶಕರ ಚುನಾವಣೆ ಪೈಪೋಟಿ ಮತ್ತು ಕುತೂಹಲದಿಂದ ಕೂಡಿದೆ.

” ಶಾಸಕ ಅನಿಲ್ ಚಿಕ್ಕಮಾದು ಅವರು ನಿರ್ದೇಶಕರ ಸ್ಥಾನಕ್ಕೆ ಬಹುಮತದಿಂದ ಗೆಲ್ಲಲು ಪಕ್ಷದ ಮುಖಂಡರು ಸಹಕಾರ ಸಂಘದವರು,ಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕರಾದವರು ಸಹಕಾರ ಕ್ಷೇತ್ರಕ್ಕೆ ಚುನಾಯಿತರಾದರೆ ತಾಲ್ಲೂಕಿಗೆ ಮತ್ತು ರೈತ ಕುಟುಂಬಗಳಿಗೆ ಬಹಳಷ್ಟು ನೆರವಾಗಲಿದೆ.”

-ಸತೀಶ್ ಗೌಡ, ಮತದಾನದ ಪ್ರತಿನಿಧಿ, ಕೆ.ಬೆಳತೂರು ವಿಎಸ್‌ಎಸ್‌ಎನ್ ಬ್ಯಾಂಕ್

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago