Andolana originals

‘ಕುಡಿಯುವ ನೀರಿನ ಕಾಮಗಾರಿಗಳನ್ನು ಬೇಗ ಮುಗಿಸಿ’

‘ಆಂದೋಲನ’ ವರದಿಯ ಪರಿಣಾಮ ಅರಣ್ಯಾಧಿಕಾರಿಗಳ, ಜಿಪಂ ಅಽಕಾರಿಗಳ ಸಭೆ ನಡೆಸಿದ ಶಾಸಕ ಮಂಜುನಾಥ್

ಕೊಳ್ಳೇಗಾಲ: ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲು ಅರಣ್ಯ ಇಲಾಖೆಯು ಸಹಕಾರ ನೀಡದ ಕಾರಣ ಹನೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು ಶಾಸಕರಾದ ಎಂ.ಆರ್.ಮಂಜುನಾಥ್ ತಿಳಿಸಿದರು.

‘ಆಂದೋಲನ’ ದಿನಪತ್ರಿಕೆಯಲ್ಲಿ ಇತ್ತೀಚೆಗೆ ಹನೂರು ತಾಲ್ಲೂಕಿನಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಕಟವಾದ ಸುದೀರ್ಘ ವರದಿಯ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಅರಣ್ಯಾಧಿಕಾರಿಗಳು, ಜಿಪಂ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಯಿತು. ನಂತರ ಶಾಸಕರು ಸುದ್ದಿಗಾರರ ಜೊತೆ ಮಾತನಾಡಿ, ೨೦೨೩ರಲ್ಲೇ ಹನೂರು ತಾಲ್ಲೂಕಿನ ೨೦ಕ್ಕೂ ಹೆಚ್ಚು ಗ್ರಾಮಗಳಿಗೆ ಕಾವೇರಿ ನದಿಯಿಂದ ಕುಡಿಯುವ ನೀರು ಒದಗಿಸಲು ಪೈಪ್‌ಲೈನ್ ಅಳವಡಿಸುವ ಕಾಮಗಾರಿನಡೆದಿತ್ತು. ಆದರೆ, ಅರಣ್ಯ ಇಲಾಖೆಯವರು ಅನುಮೋದನೆ ನೀಡದ ಕಾರಣ ನೀರು ಒದಗಿಸಲು ವಿಳಂಬವಾಯಿತು ಎಂದರು.

ಹನೂರು ತಾಲ್ಲೂಕಿನ ಹಲವು ಗ್ರಾಮಗಳು ಮಲೆ ಮಹದೇಶ್ವರ ವನ್ಯಧಾಮ ಮತ್ತು ಕಾವೇರಿ ವನ್ಯಧಾಮಗಳ ವ್ಯಾಪ್ತಿಯಲ್ಲಿ ಬರುತ್ತವೆ. ನೀರಿನ ಪೈಪ್‌ಲೈನ್ ಅಳವಡಿಸಲು ಅರಣ್ಯ ಇಲಾಖೆಯು ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಪ್ರಯತ್ನಿಸಬೇಕು. ಸಮನ್ವಯತೆಯಿಂದ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಂಡು ನೀರು ಒದಗಿಸಲು ಕ್ರಮ ವಹಿಸಲಿದೆ. ಅಧಿಕಾರಿಗಳು ಸಮನ್ವತೆಯಿಂದ ಗ್ರಾಮಗಳ ಜನರಿಗೆ ನೀರು ಒದಗಿಸಲು ಮುಂದಾಗಬೇಕು. ಈ ನೀರಿನ ಯೋಜನೆ ಕಾಮಗಾರಿಗಳು ೬-೭ ತಿಂಗಳಲ್ಲಿ ಮುಕ್ತಾಯವಾಗಲಿವೆ ಎಂದು ತಿಳಿಸಿದರು.

ಹನೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕಾವೇರಿ ನದಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸಲು ರೂಪಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇನ್ನೂ ೩ ಕಡೆ ಪೂರ್ಣಗೊಳ್ಳಬೇಕಿದೆ. ಇದನ್ನು ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.

ಜಿಪಂ ಸಿಇಒ ಮೋನಾ ರೋತ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕ್ಷಕ ಇಂಜಿನಿಯರ್ ವೀರಪ್ಪ, ಚಾ.ನಗರ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರ ಜಗದೀಶ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಎಫ್‌ಒ ಭಾಸ್ಕರ್, ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

” ಬಾಕಿಯಿರುವ ನೀರಿನ ಕಾಮಗಾರಿಗಳನ್ನು ಬೇಗ ಪೂರೈಸಬೇಕು. ಅಗತ್ಯವಿರುವ ಕಡೆ ಬೋರ್‌ವೆಲ್ಗಳನ್ನು ಕೊರೆಸಬೇಕು. ಖಾಸಗಿಯಾಗಿ ನೀರು ಪಡೆದು ಟ್ಯಾಂಕರ್ ಮೂಲಕ ಪೂರೈಸಬೇಕು. ಮತ್ತೊಮ್ಮೆ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.”

ಎಂ.ಆರ್.ಮಂಜುನಾಥ್, ಶಾಸಕರು

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago