Andolana originals

ಓದುಗರ ಪತ್ರ:  ಓದುಗರಿಗೆ ಓಗೊಟ್ಟ ಪಾಲಿಕೆ ‘ಆಂದೋಲನ’ಕ್ಕೆ ಅಭಿನಂದನೆ

ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ ಪ್ರಕಟವಾಗಿತ್ತು.ಜೊತೆಗೆ ನಗರ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಒಮ್ಮೊಮ್ಮೆ ಸ್ವೀಕರಿಸಿದರೂ ದೂರು ನೋಂದಣಿ ಮಾಡಿಕೊಳ್ಳುವುದಿಲ್ಲ. ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಕೂಡ ಬರೆದಿದ್ದೆ.

ಇದೀಗ ನಮ್ಮ ಬಡಾವಣೆಯಲ್ಲಿ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೋರಿದೆ. ಈ ಸಂಬಂಧ ವಾಣಿವಿಲಾಸ ನೀರು ಸರಬರಾಜು ಕಚೇರಿಗೆ ದೂರು ನೀಡಲು, ನೀರಿನ ಬಿಲ್ಲಿನ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ದೂರವಾಣಿ ಸಂಖ್ಯೆ ೦೮೨೧-೨೪೧೧೩೬೬ ಎಂದಿತ್ತು. ಅದಕ್ಕೆ ಕರೆ ಮಾಡಿದಾಗ ಇದು ಅಸ್ತಿತ್ವದಲ್ಲಿ ಇಲ್ಲ ಎಂದು ತಿಳಿಸಿತು. ಗೂಗಲ್‌ನಲ್ಲಿ ಹುಡುಕಿದಾಗ ಇನ್ನೊಂದು ಸಂಖ್ಯೆ ಇತ್ತು ಅದಕ್ಕೆ ಕರೆ ಮಾಡಿದಾಗ ಅದು ಮಹಾನಗರ ಪಾಲಿಕೆಯ ದೂರು ಕೋಶದ ಸಂಖ್ಯೆಯೇ ಆಗಿದ್ದು, ಅವರು ತಕ್ಷಣ ಕರೆ ಸ್ವೀಕರಿಸಿದರು. ನಾನು ವಾಣಿವಿಲಾಸ ನೀರು ಸರಬರಾಜು ಕಚೇರಿಯೇ ಎಂದು ಕೇಳಿದಾಗ, ಇಲ್ಲ ಇದು ಪಾಲಿಕೆ ಕಚೇರಿ, ನಿಮ್ಮ ಸಮಸ್ಯೆ ಏನು ಹೇಳಿ ಎಂದರು.

ನಾನು ಒಂದು ತಿಂಗಳಿಂದ ನೀರು ಸರಿಯಾಗಿ ಬರದ ಬಗ್ಗೆ ಹೇಳಿದೆ. ಅವರು, ಸರಿ ನಿಮ್ಮ ಸಮಸ್ಯೆಯನ್ನು ಸಂಬಽಸಿದವರಿಗೆ ತಿಳಿಸುತ್ತೇವೆ ಎಂದು ಹೇಳಿ ನನ್ನ ಪೂರ್ಣ ವಿಳಾಸವನ್ನು ಕೇಳಿ ಪಡೆದು, ನಿಮ್ಮ ಕಂಪ್ಲೆಂಟ್ ನಂಬರ್ ೪೬೪೫೯ ಎಂದು ತಿಳಿಸಿದರು. ನನಗೆ ಆಶ್ಚರ್ಯವಾಯಿತು.

ಇದುವರೆಗೆ ಕರೆಯನ್ನೇ ಸ್ವೀಕರಿಸದಿದ್ದವರು, ಸಹಾಯವಾಣಿ ನಂಬರ್ ಅನ್ನೂ ನೀಡದಿದ್ದವರು ಈಗ ಕರೆ ಸ್ವೀಕರಿಸಿ ನೋಂದಣಿ ಸಂಖ್ಯೆ ನೀಡುತ್ತಿದ್ದಾರೆ ಎಂದರೆ ಈ ಹಿಂದಿನ ಪತ್ರದಲ್ಲಿ ನಾನು ಕರೆ ಸ್ವೀಕರಿಸದಿರುವ ಬಗ್ಗೆ ಬರೆದಿದ್ದು! ಬಹುಶಃ ಈಗ ಪಾಲಿಕೆ ಆಯುಕ್ತರ ಗಮನಕ್ಕೆ ಬಂದಿರುವ ಪರಿಣಾಮವಾಗಿ ದೂರು ಕೋಶ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರ ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಹಾಗೂ ಕ್ರಮ ಕೈಗೊಂಡ ಅಧಿಕಾರಿಗಳಿಗೆ ಧನ್ಯವಾದಗಳು.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

10 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago