Andolana originals

ಓದುಗರ ಪತ್ರ:  ಓದುಗರಿಗೆ ಓಗೊಟ್ಟ ಪಾಲಿಕೆ ‘ಆಂದೋಲನ’ಕ್ಕೆ ಅಭಿನಂದನೆ

ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ ಪ್ರಕಟವಾಗಿತ್ತು.ಜೊತೆಗೆ ನಗರ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಒಮ್ಮೊಮ್ಮೆ ಸ್ವೀಕರಿಸಿದರೂ ದೂರು ನೋಂದಣಿ ಮಾಡಿಕೊಳ್ಳುವುದಿಲ್ಲ. ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಕೂಡ ಬರೆದಿದ್ದೆ.

ಇದೀಗ ನಮ್ಮ ಬಡಾವಣೆಯಲ್ಲಿ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೋರಿದೆ. ಈ ಸಂಬಂಧ ವಾಣಿವಿಲಾಸ ನೀರು ಸರಬರಾಜು ಕಚೇರಿಗೆ ದೂರು ನೀಡಲು, ನೀರಿನ ಬಿಲ್ಲಿನ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ದೂರವಾಣಿ ಸಂಖ್ಯೆ ೦೮೨೧-೨೪೧೧೩೬೬ ಎಂದಿತ್ತು. ಅದಕ್ಕೆ ಕರೆ ಮಾಡಿದಾಗ ಇದು ಅಸ್ತಿತ್ವದಲ್ಲಿ ಇಲ್ಲ ಎಂದು ತಿಳಿಸಿತು. ಗೂಗಲ್‌ನಲ್ಲಿ ಹುಡುಕಿದಾಗ ಇನ್ನೊಂದು ಸಂಖ್ಯೆ ಇತ್ತು ಅದಕ್ಕೆ ಕರೆ ಮಾಡಿದಾಗ ಅದು ಮಹಾನಗರ ಪಾಲಿಕೆಯ ದೂರು ಕೋಶದ ಸಂಖ್ಯೆಯೇ ಆಗಿದ್ದು, ಅವರು ತಕ್ಷಣ ಕರೆ ಸ್ವೀಕರಿಸಿದರು. ನಾನು ವಾಣಿವಿಲಾಸ ನೀರು ಸರಬರಾಜು ಕಚೇರಿಯೇ ಎಂದು ಕೇಳಿದಾಗ, ಇಲ್ಲ ಇದು ಪಾಲಿಕೆ ಕಚೇರಿ, ನಿಮ್ಮ ಸಮಸ್ಯೆ ಏನು ಹೇಳಿ ಎಂದರು.

ನಾನು ಒಂದು ತಿಂಗಳಿಂದ ನೀರು ಸರಿಯಾಗಿ ಬರದ ಬಗ್ಗೆ ಹೇಳಿದೆ. ಅವರು, ಸರಿ ನಿಮ್ಮ ಸಮಸ್ಯೆಯನ್ನು ಸಂಬಽಸಿದವರಿಗೆ ತಿಳಿಸುತ್ತೇವೆ ಎಂದು ಹೇಳಿ ನನ್ನ ಪೂರ್ಣ ವಿಳಾಸವನ್ನು ಕೇಳಿ ಪಡೆದು, ನಿಮ್ಮ ಕಂಪ್ಲೆಂಟ್ ನಂಬರ್ ೪೬೪೫೯ ಎಂದು ತಿಳಿಸಿದರು. ನನಗೆ ಆಶ್ಚರ್ಯವಾಯಿತು.

ಇದುವರೆಗೆ ಕರೆಯನ್ನೇ ಸ್ವೀಕರಿಸದಿದ್ದವರು, ಸಹಾಯವಾಣಿ ನಂಬರ್ ಅನ್ನೂ ನೀಡದಿದ್ದವರು ಈಗ ಕರೆ ಸ್ವೀಕರಿಸಿ ನೋಂದಣಿ ಸಂಖ್ಯೆ ನೀಡುತ್ತಿದ್ದಾರೆ ಎಂದರೆ ಈ ಹಿಂದಿನ ಪತ್ರದಲ್ಲಿ ನಾನು ಕರೆ ಸ್ವೀಕರಿಸದಿರುವ ಬಗ್ಗೆ ಬರೆದಿದ್ದು! ಬಹುಶಃ ಈಗ ಪಾಲಿಕೆ ಆಯುಕ್ತರ ಗಮನಕ್ಕೆ ಬಂದಿರುವ ಪರಿಣಾಮವಾಗಿ ದೂರು ಕೋಶ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರ ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಹಾಗೂ ಕ್ರಮ ಕೈಗೊಂಡ ಅಧಿಕಾರಿಗಳಿಗೆ ಧನ್ಯವಾದಗಳು.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago