ಓದುಗರ ಪತ್ರ
ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ ಪ್ರಕಟವಾಗಿತ್ತು.ಜೊತೆಗೆ ನಗರ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಒಮ್ಮೊಮ್ಮೆ ಸ್ವೀಕರಿಸಿದರೂ ದೂರು ನೋಂದಣಿ ಮಾಡಿಕೊಳ್ಳುವುದಿಲ್ಲ. ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಕೂಡ ಬರೆದಿದ್ದೆ.
ಇದೀಗ ನಮ್ಮ ಬಡಾವಣೆಯಲ್ಲಿ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೋರಿದೆ. ಈ ಸಂಬಂಧ ವಾಣಿವಿಲಾಸ ನೀರು ಸರಬರಾಜು ಕಚೇರಿಗೆ ದೂರು ನೀಡಲು, ನೀರಿನ ಬಿಲ್ಲಿನ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ದೂರವಾಣಿ ಸಂಖ್ಯೆ ೦೮೨೧-೨೪೧೧೩೬೬ ಎಂದಿತ್ತು. ಅದಕ್ಕೆ ಕರೆ ಮಾಡಿದಾಗ ಇದು ಅಸ್ತಿತ್ವದಲ್ಲಿ ಇಲ್ಲ ಎಂದು ತಿಳಿಸಿತು. ಗೂಗಲ್ನಲ್ಲಿ ಹುಡುಕಿದಾಗ ಇನ್ನೊಂದು ಸಂಖ್ಯೆ ಇತ್ತು ಅದಕ್ಕೆ ಕರೆ ಮಾಡಿದಾಗ ಅದು ಮಹಾನಗರ ಪಾಲಿಕೆಯ ದೂರು ಕೋಶದ ಸಂಖ್ಯೆಯೇ ಆಗಿದ್ದು, ಅವರು ತಕ್ಷಣ ಕರೆ ಸ್ವೀಕರಿಸಿದರು. ನಾನು ವಾಣಿವಿಲಾಸ ನೀರು ಸರಬರಾಜು ಕಚೇರಿಯೇ ಎಂದು ಕೇಳಿದಾಗ, ಇಲ್ಲ ಇದು ಪಾಲಿಕೆ ಕಚೇರಿ, ನಿಮ್ಮ ಸಮಸ್ಯೆ ಏನು ಹೇಳಿ ಎಂದರು.
ನಾನು ಒಂದು ತಿಂಗಳಿಂದ ನೀರು ಸರಿಯಾಗಿ ಬರದ ಬಗ್ಗೆ ಹೇಳಿದೆ. ಅವರು, ಸರಿ ನಿಮ್ಮ ಸಮಸ್ಯೆಯನ್ನು ಸಂಬಽಸಿದವರಿಗೆ ತಿಳಿಸುತ್ತೇವೆ ಎಂದು ಹೇಳಿ ನನ್ನ ಪೂರ್ಣ ವಿಳಾಸವನ್ನು ಕೇಳಿ ಪಡೆದು, ನಿಮ್ಮ ಕಂಪ್ಲೆಂಟ್ ನಂಬರ್ ೪೬೪೫೯ ಎಂದು ತಿಳಿಸಿದರು. ನನಗೆ ಆಶ್ಚರ್ಯವಾಯಿತು.
ಇದುವರೆಗೆ ಕರೆಯನ್ನೇ ಸ್ವೀಕರಿಸದಿದ್ದವರು, ಸಹಾಯವಾಣಿ ನಂಬರ್ ಅನ್ನೂ ನೀಡದಿದ್ದವರು ಈಗ ಕರೆ ಸ್ವೀಕರಿಸಿ ನೋಂದಣಿ ಸಂಖ್ಯೆ ನೀಡುತ್ತಿದ್ದಾರೆ ಎಂದರೆ ಈ ಹಿಂದಿನ ಪತ್ರದಲ್ಲಿ ನಾನು ಕರೆ ಸ್ವೀಕರಿಸದಿರುವ ಬಗ್ಗೆ ಬರೆದಿದ್ದು! ಬಹುಶಃ ಈಗ ಪಾಲಿಕೆ ಆಯುಕ್ತರ ಗಮನಕ್ಕೆ ಬಂದಿರುವ ಪರಿಣಾಮವಾಗಿ ದೂರು ಕೋಶ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರ ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಹಾಗೂ ಕ್ರಮ ಕೈಗೊಂಡ ಅಧಿಕಾರಿಗಳಿಗೆ ಧನ್ಯವಾದಗಳು.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…