Andolana originals

ಓದುಗರ ಪತ್ರ:  ಓದುಗರಿಗೆ ಓಗೊಟ್ಟ ಪಾಲಿಕೆ ‘ಆಂದೋಲನ’ಕ್ಕೆ ಅಭಿನಂದನೆ

ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ ಪ್ರಕಟವಾಗಿತ್ತು.ಜೊತೆಗೆ ನಗರ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಒಮ್ಮೊಮ್ಮೆ ಸ್ವೀಕರಿಸಿದರೂ ದೂರು ನೋಂದಣಿ ಮಾಡಿಕೊಳ್ಳುವುದಿಲ್ಲ. ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಕೂಡ ಬರೆದಿದ್ದೆ.

ಇದೀಗ ನಮ್ಮ ಬಡಾವಣೆಯಲ್ಲಿ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೋರಿದೆ. ಈ ಸಂಬಂಧ ವಾಣಿವಿಲಾಸ ನೀರು ಸರಬರಾಜು ಕಚೇರಿಗೆ ದೂರು ನೀಡಲು, ನೀರಿನ ಬಿಲ್ಲಿನ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ದೂರವಾಣಿ ಸಂಖ್ಯೆ ೦೮೨೧-೨೪೧೧೩೬೬ ಎಂದಿತ್ತು. ಅದಕ್ಕೆ ಕರೆ ಮಾಡಿದಾಗ ಇದು ಅಸ್ತಿತ್ವದಲ್ಲಿ ಇಲ್ಲ ಎಂದು ತಿಳಿಸಿತು. ಗೂಗಲ್‌ನಲ್ಲಿ ಹುಡುಕಿದಾಗ ಇನ್ನೊಂದು ಸಂಖ್ಯೆ ಇತ್ತು ಅದಕ್ಕೆ ಕರೆ ಮಾಡಿದಾಗ ಅದು ಮಹಾನಗರ ಪಾಲಿಕೆಯ ದೂರು ಕೋಶದ ಸಂಖ್ಯೆಯೇ ಆಗಿದ್ದು, ಅವರು ತಕ್ಷಣ ಕರೆ ಸ್ವೀಕರಿಸಿದರು. ನಾನು ವಾಣಿವಿಲಾಸ ನೀರು ಸರಬರಾಜು ಕಚೇರಿಯೇ ಎಂದು ಕೇಳಿದಾಗ, ಇಲ್ಲ ಇದು ಪಾಲಿಕೆ ಕಚೇರಿ, ನಿಮ್ಮ ಸಮಸ್ಯೆ ಏನು ಹೇಳಿ ಎಂದರು.

ನಾನು ಒಂದು ತಿಂಗಳಿಂದ ನೀರು ಸರಿಯಾಗಿ ಬರದ ಬಗ್ಗೆ ಹೇಳಿದೆ. ಅವರು, ಸರಿ ನಿಮ್ಮ ಸಮಸ್ಯೆಯನ್ನು ಸಂಬಽಸಿದವರಿಗೆ ತಿಳಿಸುತ್ತೇವೆ ಎಂದು ಹೇಳಿ ನನ್ನ ಪೂರ್ಣ ವಿಳಾಸವನ್ನು ಕೇಳಿ ಪಡೆದು, ನಿಮ್ಮ ಕಂಪ್ಲೆಂಟ್ ನಂಬರ್ ೪೬೪೫೯ ಎಂದು ತಿಳಿಸಿದರು. ನನಗೆ ಆಶ್ಚರ್ಯವಾಯಿತು.

ಇದುವರೆಗೆ ಕರೆಯನ್ನೇ ಸ್ವೀಕರಿಸದಿದ್ದವರು, ಸಹಾಯವಾಣಿ ನಂಬರ್ ಅನ್ನೂ ನೀಡದಿದ್ದವರು ಈಗ ಕರೆ ಸ್ವೀಕರಿಸಿ ನೋಂದಣಿ ಸಂಖ್ಯೆ ನೀಡುತ್ತಿದ್ದಾರೆ ಎಂದರೆ ಈ ಹಿಂದಿನ ಪತ್ರದಲ್ಲಿ ನಾನು ಕರೆ ಸ್ವೀಕರಿಸದಿರುವ ಬಗ್ಗೆ ಬರೆದಿದ್ದು! ಬಹುಶಃ ಈಗ ಪಾಲಿಕೆ ಆಯುಕ್ತರ ಗಮನಕ್ಕೆ ಬಂದಿರುವ ಪರಿಣಾಮವಾಗಿ ದೂರು ಕೋಶ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರ ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಹಾಗೂ ಕ್ರಮ ಕೈಗೊಂಡ ಅಧಿಕಾರಿಗಳಿಗೆ ಧನ್ಯವಾದಗಳು.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago