ಡಾ.ನಾಗರಾಜ ಬೈರಿ ಅವರ ನೇತೃತ್ವದಲ್ಲಿ ಮೈಸೂರಿನ ಸುಗಮ ಸಂಗೀತ ಪರಿಷತ್ ಸಮಾಜ ಸೇವೆಯ ಸದುದ್ದೇಶದಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ.
ಆದರೆ, ಈ ಕಾರ್ಯಕ್ರಮಗಳಲ್ಲಿ ಗಾಯಕರಿಗೆ ಹೆಚ್ಚಿನ ಪ್ರಾಧಾ ನ್ಯತೆಯನ್ನು ನೀಡಲಾಗುತ್ತಿದ್ದು, ಸಂಗೀತ ವಾದಕರನ್ನು ಕಡೆಗಣಿಸಲಾಗುತ್ತಿದೆ ಯೇನೋ ಅನಿಸುತ್ತಿದೆ. ಯಾವುದೇ ಸಂಗೀತ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಗಾಯನದಷ್ಟೇ ಹಿನ್ನೆಲೆ ಸಂಗೀತವೂ ಅಷ್ಟೇ ಮುಖ್ಯ. ಅದನ್ನು ಸುಗಮವಾಗಿ ನುಡಿಸುವ ವಾದಕರಿಗೂ ಗಾಯಕರಿಗೆ ಸಿಗುವಂತಹ ಸ್ಥಾನಮಾನಗಳು ಸಿಗಬೇಕು.
ಆದರೆ, ಈಗ ಸುಗಮ ಸಂಗೀತ ಪರಿಷತ್ 10ರಿಂದ 15 ಗಾಯಕರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿಕೊಂಡು ಅವರಿಗೆ ಮುಖ್ಯ ಕಾರ್ಯಕ್ರಮಗಳಲ್ಲಿ ಹಾಡಲು ಅವಕಾಶ ನೀಡುವುದಾಗಿ ಹೇಳಿದೆ. ಆದರೆ ಎಲ್ಲಿಯೂ ವಾದ್ಯ ನುಡಿಸುವ ಕಲಾವಿದರನ್ನು ಆಯ್ಕೆ ಮಾಡುವುದಾಗಿ ಹೇಳಿಲ್ಲ. ಇದು ವಾದ್ಯಗಾರರಿಗೆ ಆದ ವಂಚನೆಯಲ್ಲವೇ? ಆದ್ದರಿಂದ ಪರಿಷತ್ ಈ ಬಗ್ಗೆ ಗಮನಹರಿಸಿ ವಾದ್ಯಗಾರರಿಗೂ ಗಾಯಕರಷ್ಟೇ ಪ್ರಾತಿನಿಧ್ಯ ನೀಡಿ ಅವರನ್ನೂ ಆಯ್ಕೆ ಮಾಡಿ ಮುಖ್ಯವಾಹಿನಿಗೆ ತರಬೇಕಿದೆ.
-ಎಲ್.ಎನ್.ದಯಾನಂದ, ತಬಲಾ ವಾದಕ, ಕೃಷ್ಣಮೂರ್ತಿಪುರಂ,
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…
ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…