Andolana originals

ಓದುಗರ ಪತ್ರ: ಸಂಗೀತ ವಾದಕರನ್ನೂ ಪರಿಗಣಿಸಿ

ಡಾ.ನಾಗರಾಜ ಬೈರಿ ಅವರ ನೇತೃತ್ವದಲ್ಲಿ ಮೈಸೂರಿನ ಸುಗಮ ಸಂಗೀತ ಪರಿಷತ್ ಸಮಾಜ ಸೇವೆಯ ಸದುದ್ದೇಶದಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ.

ಆದರೆ, ಈ ಕಾರ್ಯಕ್ರಮಗಳಲ್ಲಿ ಗಾಯಕರಿಗೆ ಹೆಚ್ಚಿನ ಪ್ರಾಧಾ ನ್ಯತೆಯನ್ನು ನೀಡಲಾಗುತ್ತಿದ್ದು, ಸಂಗೀತ ವಾದಕರನ್ನು ಕಡೆಗಣಿಸಲಾಗುತ್ತಿದೆ ಯೇನೋ ಅನಿಸುತ್ತಿದೆ. ಯಾವುದೇ ಸಂಗೀತ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಗಾಯನದಷ್ಟೇ ಹಿನ್ನೆಲೆ ಸಂಗೀತವೂ ಅಷ್ಟೇ ಮುಖ್ಯ. ಅದನ್ನು ಸುಗಮವಾಗಿ ನುಡಿಸುವ ವಾದಕರಿಗೂ ಗಾಯಕರಿಗೆ ಸಿಗುವಂತಹ ಸ್ಥಾನಮಾನಗಳು ಸಿಗಬೇಕು.

ಆದರೆ, ಈಗ ಸುಗಮ ಸಂಗೀತ ಪರಿಷತ್ 10ರಿಂದ 15 ಗಾಯಕರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿಕೊಂಡು ಅವರಿಗೆ ಮುಖ್ಯ ಕಾರ್ಯಕ್ರಮಗಳಲ್ಲಿ ಹಾಡಲು ಅವಕಾಶ ನೀಡುವುದಾಗಿ ಹೇಳಿದೆ. ಆದರೆ ಎಲ್ಲಿಯೂ ವಾದ್ಯ ನುಡಿಸುವ ಕಲಾವಿದರನ್ನು ಆಯ್ಕೆ ಮಾಡುವುದಾಗಿ ಹೇಳಿಲ್ಲ. ಇದು ವಾದ್ಯಗಾರರಿಗೆ ಆದ ವಂಚನೆಯಲ್ಲವೇ? ಆದ್ದರಿಂದ ಪರಿಷತ್ ಈ ಬಗ್ಗೆ ಗಮನಹರಿಸಿ ವಾದ್ಯಗಾರರಿಗೂ ಗಾಯಕರಷ್ಟೇ ಪ್ರಾತಿನಿಧ್ಯ ನೀಡಿ ಅವರನ್ನೂ ಆಯ್ಕೆ ಮಾಡಿ ಮುಖ್ಯವಾಹಿನಿಗೆ ತರಬೇಕಿದೆ.

-ಎಲ್.ಎನ್.ದಯಾನಂದ, ತಬಲಾ ವಾದಕ, ಕೃಷ್ಣಮೂರ್ತಿಪುರಂ,

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago