Andolana originals

ಸಿಎಂ ತವರಿನಲ್ಲಿ ಸಂವಿಧಾನ ಶಿಲ್ಪಿ ಗ್ಯಾಲರಿ

ಪ್ರಶಾಂತ್ ಎಸ್.

ಅಂಬೇಡ್ಕರ್ ಪುಸ್ತಕ, ಛಾಯಾಚಿತ್ರಗಳ ಪ್ರದರ್ಶನ

ಎಚ್.ಸಿ.ಮಹದೇವಪ್ಪ ಪರಿಕಲ್ಪನೆಯಲ್ಲಿ ಹೊಸ ರೂಪ

೬೦ಕ್ಕೂ ಹೆಚ್ಚು ಪುಸ್ತಕ ಹಾಗೂ ೮೦ಕ್ಕೂ ಹೆಚ್ಚು ಛಾಯಾಚಿತ್ರ ಅಳವಡಿಕೆ 

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಡೆದು ಬಂದ ಹಾದಿ ಸೇರಿದಂತೆ ಸಂವಿಧಾನದ ಮಹತ್ವವನ್ನು ತಿಳಿಸಿ ಕೊಡುವಂತಹ ಅಂಬೇಡ್ಕರ್ ಪುಸ್ತಕ, ಛಾಯಾ ಚಿತ್ರಗಳ ಪ್ರದರ್ಶನ ಗ್ಯಾಲರಿಯನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಮಾಡಲಾಗಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಘಟ್ಟಗಳನ್ನು ಬಿಂಬಿಸುವ ಮಾಹಿತಿ: ಈ ಪ್ರದರ್ಶನ ಗ್ಯಾಲರಿಯಲ್ಲಿ ಪುಸ್ತಕಗಳು ಹಾಗೂ ಫೋಟೊಗಳ ಮೂಲಕ ಅವರ ಸಾಧನೆಯನ್ನು ತಿಳಿಸಿಕೊಡುವ ಪ್ರಯತ್ನವನ್ನು ಮಾಡಲಾಗಿದೆ. ಅವರ ಜೀವನದ ಪ್ರಮುಖ ಘಟ್ಟಗಳನ್ನು ಬಿಂಬಿಸುವ ಫೋಟೊಗಳು ಇಲ್ಲಿನ ಗೋಡೆಗಳ ಮೇಲೆ ತೂಗುತ್ತಿವೆ. ಧರ್ಮ ಇರುವುದು ಮನುಷ್ಯರಿಗಾಗಿ, ಧರ್ಮಕ್ಕಾಗಿ ಮನು ಷ್ಯರು ಅಲ್ಲ ಎಂಬಿತ್ಯಾದಿ ಅವರ ಹೇಳಿಕೆಗಳನ್ನು ಕೂಡ ಅಂಬೇಡ್ಕರ್ ಅವರ ಫೋಟೊಸಹಿತ ಪ್ರೇಮ್ ಮಾಡಿ ಅಳವಡಿಸಲಾಗಿದೆ.

ಅಂಬೇಡ್ಕರ್ ಹೆಸರಿನಲ್ಲಿ ಪುಸ್ತಕಗಳು: ವಿವಿಧ ಕೆಲಸಗಳಿಗಾಗಿ ಜಿಲ್ಲೆಯ ವಿವಿಧೆಡೆಯಿಂದ ಸಾರ್ವಜನಿಕರು ಜಂಟಿ ನಿರ್ದೇಶಕರ ಕಚೇರಿಗೆ ಬರುತ್ತಾರೆ. ಹೀಗೆ ಬಂದವರಿಗೆ ಅಂಬೇಡ್ಕರ್‌ರನ್ನು ಪರಿಚಯಿಸಲು ಆಕರ್ಷಣೀಯವಾಗಿ ಗ್ರಂಥಾಲಯ ರಚನೆ ಮಾಡಲಾಗಿದ್ದು ಸಮಯ ಇರುವವರು ಓದಿ ಕೊಳ್ಳಲೆಂದು ಪುಸ್ತಕಗಳನ್ನು ಇರಿಸಲಾಗಿದೆ. ಕಚೇರಿ ಒಳಾವರಣದಲ್ಲಿರುವ ಪುಸ್ತಕಗಳಲ್ಲಿ ‘ಅಂಬೇಡ್ಕರ್’ ಎಂಬ ಶೀರ್ಷಿಕೆಯಲ್ಲಿ ಎರಡು ಸ್ಟ್ಯಾಂಡ್‌ಗಳನ್ನು ಇಡಲಾಗಿದ್ದು ಅವು ಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಹಲವು ಲೇಖಕರು ಬರೆದಿರುವ ಪುಸ್ತಕಗಳನ್ನು ಪರಾಮರ್ಶನಕ್ಕೆ ಇಡಲಾಗಿದೆ.

ಸಾರ್ವಜನಿಕರಿಗೆ ಅಂಬೇಡ್ಕರ್ ಗ್ಯಾಲರಿ : ೬೦ಕ್ಕೂ ಹೆಚ್ಚು ಪುಸ್ತಕ ಹಾಗೂ ೮೦ಕ್ಕೂ ಹೆಚ್ಚು ಫೋಟೊಗಳನ್ನು ಇಡಲಾಗಿದ್ದು, ಒಂದು ರೀತಿಯಲ್ಲಿ ಅಂಬೇಡ್ಕರ್ ಗ್ಯಾಲರಿಯನ್ನೇ ಮಾಡಿದ್ದೇವೆ. ಪುಸ್ತಕಗಳನ್ನು ಓದುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಯಾವುದಾದರೂ ಪುಸ್ತಕ ಇಷ್ಟವಾದರೆ ಆಸಕ್ತರು ಮನೆಗೆ ಕೊಂಡೊಯ್ದು ಓದಲು ಎರವಲು ಕೊಡಲಾಗುವುದು. ಅಂಥವರು ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಫೋನ್ ಸಂಖ್ಯೆ ನೀಡಿ, ಪುಸ್ತಕವನ್ನು ಕೊಂಡೊಯ್ದು ಓದಿ ವಾಪಸ್ ತಂದುಕೊಡಬಹುದು.

” ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊಗಳು, ಪುಸ್ತಕಗಳನ್ನು ಇಲಾಖೆಯ ವೆಚ್ಚದಲ್ಲಿ ಖರೀದಿಸಲಾಗಿದೆ. ಕೆಲವು ಪುಸ್ತಕಗಳನ್ನು ಕೆಲ ವಾರ್ಡನ್‌ಗಳು ನೀಡಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಹಲವು ಲೇಖಕರು ಬರೆದಿರುವ ಪುಸ್ತಕಗಳು ಹಾಗೂ ಸಂವಿಧಾನ ಪೀಠಿಕೆಯನ್ನು ಪ್ರದರ್ಶನಕ್ಕೆ ಇಡಲಾಗಿದ್ದು ಅವುಗಳನ್ನು ಯಾರು ಬೇಕಾದರೂ ತೆಗೆದುಕೊಂಡು ಓದಬಹುದಾಗಿದೆ.”

-ಬಿ. ರಂಗೇಗೌಡ, ಜಂಟಿ ನಿರ್ದೇಶಕ, ಸಮಾಜಕಲ್ಯಾಣ ಇಲಾಖೆ.

” ಸಂವಿಧಾನ ಪೀಠಿಕೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರು ನಡೆದು ಬಂದ ದಾರಿ ಆಧಾರಿತವಾದ ಪುಸ್ತಕಗಳು ಹಾಗೂ ಫೋಟೋಗಳನ್ನು ಪ್ರದರ್ಶನ ಮಾಡಿರುವುದು ತುಂಬಾ ವಿಶೇಷವಾಗಿದೆ. ಕಚೇರಿಗೆ ಬಂದ ಸಂದರ್ಶಕರಿಗೆ ಅವರ ಬಗ್ಗೆ ತಿಳಿದುಕೊಳ್ಳುವಂತಹ ನೂತನ ಚಿಂತನೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆಯ ಕೆಲಸ ನಿಜಕ್ಕೂ ಶ್ಲಾಘನೀಯ.”

-ವನಸಿರಿ ಉಮೇಶ್, ಕೆ.ಎಂ.ಹಳ್ಳಿ

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago