Andolana originals

ಸಿಎಂ ತವರಿನಲ್ಲಿ ಸಂವಿಧಾನ ಶಿಲ್ಪಿ ಗ್ಯಾಲರಿ

ಪ್ರಶಾಂತ್ ಎಸ್.

ಅಂಬೇಡ್ಕರ್ ಪುಸ್ತಕ, ಛಾಯಾಚಿತ್ರಗಳ ಪ್ರದರ್ಶನ

ಎಚ್.ಸಿ.ಮಹದೇವಪ್ಪ ಪರಿಕಲ್ಪನೆಯಲ್ಲಿ ಹೊಸ ರೂಪ

೬೦ಕ್ಕೂ ಹೆಚ್ಚು ಪುಸ್ತಕ ಹಾಗೂ ೮೦ಕ್ಕೂ ಹೆಚ್ಚು ಛಾಯಾಚಿತ್ರ ಅಳವಡಿಕೆ 

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಡೆದು ಬಂದ ಹಾದಿ ಸೇರಿದಂತೆ ಸಂವಿಧಾನದ ಮಹತ್ವವನ್ನು ತಿಳಿಸಿ ಕೊಡುವಂತಹ ಅಂಬೇಡ್ಕರ್ ಪುಸ್ತಕ, ಛಾಯಾ ಚಿತ್ರಗಳ ಪ್ರದರ್ಶನ ಗ್ಯಾಲರಿಯನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಮಾಡಲಾಗಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಘಟ್ಟಗಳನ್ನು ಬಿಂಬಿಸುವ ಮಾಹಿತಿ: ಈ ಪ್ರದರ್ಶನ ಗ್ಯಾಲರಿಯಲ್ಲಿ ಪುಸ್ತಕಗಳು ಹಾಗೂ ಫೋಟೊಗಳ ಮೂಲಕ ಅವರ ಸಾಧನೆಯನ್ನು ತಿಳಿಸಿಕೊಡುವ ಪ್ರಯತ್ನವನ್ನು ಮಾಡಲಾಗಿದೆ. ಅವರ ಜೀವನದ ಪ್ರಮುಖ ಘಟ್ಟಗಳನ್ನು ಬಿಂಬಿಸುವ ಫೋಟೊಗಳು ಇಲ್ಲಿನ ಗೋಡೆಗಳ ಮೇಲೆ ತೂಗುತ್ತಿವೆ. ಧರ್ಮ ಇರುವುದು ಮನುಷ್ಯರಿಗಾಗಿ, ಧರ್ಮಕ್ಕಾಗಿ ಮನು ಷ್ಯರು ಅಲ್ಲ ಎಂಬಿತ್ಯಾದಿ ಅವರ ಹೇಳಿಕೆಗಳನ್ನು ಕೂಡ ಅಂಬೇಡ್ಕರ್ ಅವರ ಫೋಟೊಸಹಿತ ಪ್ರೇಮ್ ಮಾಡಿ ಅಳವಡಿಸಲಾಗಿದೆ.

ಅಂಬೇಡ್ಕರ್ ಹೆಸರಿನಲ್ಲಿ ಪುಸ್ತಕಗಳು: ವಿವಿಧ ಕೆಲಸಗಳಿಗಾಗಿ ಜಿಲ್ಲೆಯ ವಿವಿಧೆಡೆಯಿಂದ ಸಾರ್ವಜನಿಕರು ಜಂಟಿ ನಿರ್ದೇಶಕರ ಕಚೇರಿಗೆ ಬರುತ್ತಾರೆ. ಹೀಗೆ ಬಂದವರಿಗೆ ಅಂಬೇಡ್ಕರ್‌ರನ್ನು ಪರಿಚಯಿಸಲು ಆಕರ್ಷಣೀಯವಾಗಿ ಗ್ರಂಥಾಲಯ ರಚನೆ ಮಾಡಲಾಗಿದ್ದು ಸಮಯ ಇರುವವರು ಓದಿ ಕೊಳ್ಳಲೆಂದು ಪುಸ್ತಕಗಳನ್ನು ಇರಿಸಲಾಗಿದೆ. ಕಚೇರಿ ಒಳಾವರಣದಲ್ಲಿರುವ ಪುಸ್ತಕಗಳಲ್ಲಿ ‘ಅಂಬೇಡ್ಕರ್’ ಎಂಬ ಶೀರ್ಷಿಕೆಯಲ್ಲಿ ಎರಡು ಸ್ಟ್ಯಾಂಡ್‌ಗಳನ್ನು ಇಡಲಾಗಿದ್ದು ಅವು ಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಹಲವು ಲೇಖಕರು ಬರೆದಿರುವ ಪುಸ್ತಕಗಳನ್ನು ಪರಾಮರ್ಶನಕ್ಕೆ ಇಡಲಾಗಿದೆ.

ಸಾರ್ವಜನಿಕರಿಗೆ ಅಂಬೇಡ್ಕರ್ ಗ್ಯಾಲರಿ : ೬೦ಕ್ಕೂ ಹೆಚ್ಚು ಪುಸ್ತಕ ಹಾಗೂ ೮೦ಕ್ಕೂ ಹೆಚ್ಚು ಫೋಟೊಗಳನ್ನು ಇಡಲಾಗಿದ್ದು, ಒಂದು ರೀತಿಯಲ್ಲಿ ಅಂಬೇಡ್ಕರ್ ಗ್ಯಾಲರಿಯನ್ನೇ ಮಾಡಿದ್ದೇವೆ. ಪುಸ್ತಕಗಳನ್ನು ಓದುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಯಾವುದಾದರೂ ಪುಸ್ತಕ ಇಷ್ಟವಾದರೆ ಆಸಕ್ತರು ಮನೆಗೆ ಕೊಂಡೊಯ್ದು ಓದಲು ಎರವಲು ಕೊಡಲಾಗುವುದು. ಅಂಥವರು ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಫೋನ್ ಸಂಖ್ಯೆ ನೀಡಿ, ಪುಸ್ತಕವನ್ನು ಕೊಂಡೊಯ್ದು ಓದಿ ವಾಪಸ್ ತಂದುಕೊಡಬಹುದು.

” ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊಗಳು, ಪುಸ್ತಕಗಳನ್ನು ಇಲಾಖೆಯ ವೆಚ್ಚದಲ್ಲಿ ಖರೀದಿಸಲಾಗಿದೆ. ಕೆಲವು ಪುಸ್ತಕಗಳನ್ನು ಕೆಲ ವಾರ್ಡನ್‌ಗಳು ನೀಡಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಹಲವು ಲೇಖಕರು ಬರೆದಿರುವ ಪುಸ್ತಕಗಳು ಹಾಗೂ ಸಂವಿಧಾನ ಪೀಠಿಕೆಯನ್ನು ಪ್ರದರ್ಶನಕ್ಕೆ ಇಡಲಾಗಿದ್ದು ಅವುಗಳನ್ನು ಯಾರು ಬೇಕಾದರೂ ತೆಗೆದುಕೊಂಡು ಓದಬಹುದಾಗಿದೆ.”

-ಬಿ. ರಂಗೇಗೌಡ, ಜಂಟಿ ನಿರ್ದೇಶಕ, ಸಮಾಜಕಲ್ಯಾಣ ಇಲಾಖೆ.

” ಸಂವಿಧಾನ ಪೀಠಿಕೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರು ನಡೆದು ಬಂದ ದಾರಿ ಆಧಾರಿತವಾದ ಪುಸ್ತಕಗಳು ಹಾಗೂ ಫೋಟೋಗಳನ್ನು ಪ್ರದರ್ಶನ ಮಾಡಿರುವುದು ತುಂಬಾ ವಿಶೇಷವಾಗಿದೆ. ಕಚೇರಿಗೆ ಬಂದ ಸಂದರ್ಶಕರಿಗೆ ಅವರ ಬಗ್ಗೆ ತಿಳಿದುಕೊಳ್ಳುವಂತಹ ನೂತನ ಚಿಂತನೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆಯ ಕೆಲಸ ನಿಜಕ್ಕೂ ಶ್ಲಾಘನೀಯ.”

-ವನಸಿರಿ ಉಮೇಶ್, ಕೆ.ಎಂ.ಹಳ್ಳಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago