Andolana originals

ಓದುಗರ ಪತ್ರ: ಹಳೆಯ ಪಿನ್‌ಕೋಡನ್ನೇ ಮುಂದುವರಿಸಿ

ಕಳೆದ ವರ್ಷ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ನೂತನವಾಗಿ ಅಂಚೆ ಕಚೇರಿಯನ್ನು ತೆರೆದು, ನೂತನ ಪಿನ್‌ಕೋಡ್ (570 034) ಅನ್ನು ಈ ಹೊಸ ಅಂಚೆ ಕಚೇರಿಗೆ ನೀಡಲಾಗಿತ್ತು.

ಈ ಅಂಚೆ ಕಚೇರಿಗೆ ಕುವೆಂಪುನಗರದ ಎನ್-ಬ್ಲಾಕ್, ಅರವಿಂದ ನಗರ, ಐಶ್ವರ್ಯಾ ನಗರ, ವಿವೇಕಾನಂದ ನಗರದ ಸ್ವಲ್ಪ ಭಾಗವನ್ನು ಸೇರಿಸಲಾಗಿತ್ತು.

ಈ ಹಿಂದೆ ಕುವೆಂಪುನಗರದ ಎನ್-ಬ್ಲಾಕ್ ಸೇರಿದಂತೆ ಹಲವು ಬಡಾವಣೆಗಳು ಕುವೆಂಪುನಗರದ ಅಂಚೆಕಚೇರಿಯ ವ್ಯಾಪ್ತಿಗೆ ಸೇರಿದ್ದು, ಪಿನ್‌ಕೋಡ್ ಸಂಖ್ಯೆ 570023 ಆಗಿತ್ತು. ಇದರಿಂದಾಗಿ ಕುವೆಂಪುನಗರದ ನಿವಾಸಿಗಳಿಗೆ ತಲುಪಬೇಕಿದ್ದ ಪತ್ರಗಳು ನಿಗದಿತ ಸಮಯಕ್ಕೆ ತಲುಪುತ್ತಿದ್ದವು. ಆದರೆ ಈಗ ಶ್ರೀರಾಂಪುರದ ನೂತನ ಅಂಚೆಕಚೇರಿಯ ವ್ಯಾಪ್ತಿಗೆ ಕುವೆಂಪುನಗರವನ್ನು ಸೇರಿಸಿರುವುದರಿಂದ ಪಿನ್‌ಕೋಡ್ ಕೂಡ ಬದಲಾಗಿದ್ದು, ಹಳೆಯ ಪಿನ್ ಕೋಡ್ ಬಳಸಿ ಬರೆದ ಪತ್ರಗಳು ಮೊದಲು ಕುವೆಂಪುನಗರದ ಅಂಚೆಕಚೇರಿಗೆ ಹೋಗಿ ಅಲ್ಲಿಂದ ಶ್ರೀರಾಂಪುರ ಅಂಚೆಕಚೇರಿಗೆ ಬಂದು ನಂತರ ಸಂಬಂಧಪಟ್ಟವರ ಕೈ ಸೇರುತ್ತಿವೆ. ಇನ್ನು ಸ್ಪೀಡ್ ಪೋಸ್ಟ್ ಪತ್ರಗಳೂ 2-3 ದಿನಗಳು ತಡವಾಗಿ ಸಂಬಂಧಪಟ್ಟವರ ಕೈ ಸೇರುತ್ತಿವೆ. ಈ ಬಗ್ಗೆ ಅಂಚೆಕಚೇರಿಯಲ್ಲಿ ವಿಚಾರಿಸಿದಾಗ ಪಿನ್‌ಕೋಡ್ ಬದಲಾಗಿರುವುದರಿಂದ ಪತ್ರಗಳು ತಡವಾಗಿ ಬರುತ್ತಿವೆ ಎನ್ನುತ್ತಿದ್ದಾರೆ.

ಕುವೆಂಪುನಗರದ ಜನರು ಕಳೆದ 20 ವರ್ಷಗಳಿಂದಲೂ ಹಳೆಯ ಪಿನ್ ಕೋಡನ್ನೇ ಬಳಸುತ್ತಿದ್ದು, ಕುವೆಂಪುನಗರದಲ್ಲಿರುವವರಿಗೆ ಪತ್ರ ಬರೆಯುವವರೂ ಹಳೆಯ ಪಿನ್‌ಕೋಡ್ ಬಳಸಿಯೇ ಪತ್ರ ಬರೆಯುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕುವೆಂಪುನಗರಕ್ಕೆ ಈ ಹಿಂದೆ ಇದ್ದ ಹಳೆಯ ಪಿನ್‌ಕೋಡನ್ನೇ ಮುಂದುವರಿಸಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

2 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

2 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

2 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

4 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

5 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

6 hours ago