ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ
ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಮಲ್ಲಯ್ಯನಪುರ ಗ್ರಾಮದ ರೈತರ ಜಮೀನುಗಳಿಗೆ ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿರುವುದರಿಂದ ಕಷ್ಟಪಟ್ಟು ಬೆಳೆದ ಫಸಲು ನಾಶವಾಗುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.
ಮಲ್ಲಯ್ಯನಪುರ ಗ್ರಾಮದ ರೈತರಾದ ಮುನಿಯಪ್ಪ, ಗೋವಿಂದಯ್ಯ ಅವರಿಗೆ ಸೇರಿದ ಜಮೀನಿನಲ್ಲಿ ಒಕ್ಕಣೆಗಾಗಿ ಹಾಕಿದ್ದ ಜೋಳದ ತೆನೆ ಫಸಲನ್ನು ತಿಂದು ನಾಶ ಮಾಡಿವೆ. ಜೊತೆಗೆ ಬಾಳೆ, ಕೃಷಿ ಪರಿಕರಗಳು, ಸೋಲಾರ್ ಬೇಲಿ ತುಳಿದು ಲಕ್ಷಾಂತರ ರೂ. ಮೌಲ್ಯದ ಪದಾರ್ಥಗಳನ್ನು ನಾಶಪಡಿಸಿ ಹಾನಿ ಉಂಟುಮಾಡಿವೆ.
ನಿರಂತರ ದಾಳಿ : ಕಳೆದ ೨ ತಿಂಗಳುಗಳಿಂದ ಮಲ್ಲಯ್ಯನಪುರ ಗ್ರಾಮದ ರೈತರ ಜಮೀನುಗಳಿಗೆ ಕಾಡಾನೆಗಳು ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ಮುಸುಕಿನ ಜೋಳ, ಬಾಳೆ, ರಾಗಿ, ಇತರೆ ಫಸಲುಗಳು ಹಾಳಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಬೆಳೆ ನಷ್ಟವಾಗಿದೆ. ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಬೆಳೆ ಸಂರಕ್ಷಣೆಗೆ ರಾತ್ರಿ ಕಾವಲು ಕಾಯಲು ಕೂಡ ಭಯವಾಗುತ್ತಿದೆ. ಆದ್ದರಿಂದ ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು. ಇಲ್ಲದಿದ್ದರೆ ಅರಣ್ಯ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಶಾಶ್ವತ ಪರಿಹಾರಕ್ಕೆ ಆಗ್ರಹ: ಎರಡು ತಿಂಗಳುಗಳಿಂದ ನಿರಂತರವಾಗಿ ಕಾವೇರಿ ವನ್ಯಜೀವಿಧಾಮ ಅರಣ್ಯ ಪ್ರದೇಶದಿಂದ ಕಾಡಾನೆಗಳು ರೈತರ ಜಮೀನಿಗೆ ನುಗ್ಗಿ ಲಕ್ಷಾಂತರ ರೂ. ಬೆಲೆ ಬಾಳುವ ಫಸಲು ಹಾಗೂ ಕೃಷಿ ಪರಿಕರಗಳನ್ನು ನಾಶ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಽಕಾರಿಗಳು ಕಾಡುಪ್ರಾಣಿಗಳ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಹಾಕಿ ಸೂಕ್ತ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
” ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗೆ ಆಗುತ್ತಿರುವ ಬೆಳೆ ನಷ್ಟಕ್ಕೆ ಸಂಬಂಧಪಟ್ಟ ಅರಣ್ಯ ಇಲಾಖೆಯವರು ಶೀಘ್ರವೇ ಸೂಕ್ತ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.”
-ಚಿಕ್ಕರಾಜು, ರೈತ ಮುಖಂಡರು, ಮಲ್ಲಯ್ಯನಪುರ
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…
ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…