ಓದುಗರ ಪತ್ರ
ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪಾಲು ಹಾಗೂ ರಾಜ್ಯದ ಪಾಲು ಎಂಬ ತರ್ಕದ ಕ್ರೆಡಿಟ್ ಕಲಹ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ನಿರಂತರವಾಗಿ ನಡೆಯುತ್ತಿದ್ದ ಅನುದಾನದ ಸಂಘರ್ಷ ಇದೀಗ ಪ್ರಧಾನಿಯವರು ಬೆಂಗಳೂರಿಗೆ ಬಂದಾಗ ವೇದಿಕೆಯಲ್ಲಿಯೇ ನಡೆದಿರುವುದು ವಿಪರ್ಯಾಸ.
ರಾಷ್ಟ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಿಗೆ ಕೈಜೋಡಿಸಬೇಕೇ ವಿನಾ ಈ ರೀತಿ ಅನುದಾನದ ಜಟಾಪಟಿಗೆ ಇಳಿದು ವೇದಿಕೆಯನ್ನು ಬಳಸಿಕೊಳ್ಳುವುದು ಮುಜುಗರ ತರುವ ವಿಚಾರ. ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ರಾಜ್ಯಕ್ಕೆ ಅನುದಾನದ ಕೊರತೆ ಆಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿ.
ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಾದ ಹಣವನ್ನು ಸಮರ್ಪಕವಾಗಿ ನೀಡಿದರೆ, ಕೇಂದ್ರ ಹಾಗೂ ರಾಜ್ಯ ಸಹಭಾಗಿತ್ವದ ಯೋಜನೆಗಳಿಗೆ ತಾರತಮ್ಯವಿಲ್ಲದೆ ಅನುದಾನವನ್ನು ಒದಗಿಸಿದರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಕ್ಕೂಟ ವ್ಯವಸ್ಥೆಯಡಿ ಅಸಮಾಧಾನ ಅಪಸ್ವರಗಳಿಗೆ ಆಸ್ಪದ ಕೊಡದೆ ಸಮನ್ವಯವನ್ನು ಸಾಧಿಸುವುದು ಒಳಿತು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…