Andolana originals

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ

೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ 

ಮಡಿಕೇರಿ: ಡಿ.೨೦ ಮತ್ತು ೨೧ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಾಥ್ ನೀಡಿದೆ.

ಮಡಿಕೇರಿಯ ಕಿಂಬರ್ಲಿ ಕೂರ್ಗ್ ಎಂಬ ಸಂಸ್ಥೆ ೨ನೇ ಬಾರಿಗೆ ಕೊಡಗಿನಲ್ಲಿ ಕೂರ್ಗ್ ಕಾರ್ನಿವಲ್ ಆಯೋಜಿಸುತ್ತಿದ್ದು, ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಈಬಾರಿ ಉತ್ಸವದ ಸಂಪೂರ್ಣ ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು, ಸಣ್ಣ ಮತ್ತು ಮಧ್ಯಮಉದ್ಯಮಿಗಳ ಅನುಕೂಲಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಡಿಜೆ, ಸಂಗೀತ, ಸ್ಟಾಂಡ್ ಅಪ್ ಕಾಮಿಡಿ ಸೇರಿದಂತೆ ಹಲವು ವೈವಿಧ್ಯಗಳು ಇರಲಿವೆ ಎಂದು ಕಿಂಬರ್ಲಿ ಕೂರ್ಗ್ ಮುಖ್ಯಸ್ಥ ಕೆ.ಜಿ. ಮದನ್ ತಿಳಿಸಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಈ ಬಾರಿ ೨ನೇ ವರ್ಷದ ಕೂರ್ಗ್ ಕಾರ್ನಿವಲ್ ಹಮ್ಮಿಕೊಳ್ಳಲಾಗುತ್ತಿದೆ. ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಕೈಜೋಡಿಸಿರುವುದರಿಂದ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆಯಿದೆ.

ಉತ್ಸವದಲ್ಲಿ ನಾನಾ ಬಗೆಯ ಸ್ಟಾಲ್‌ಗಳನ್ನು ತೆರೆಯಲಾಗುತ್ತಿದ್ದು, ಸ್ಥಳೀಯ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ ತಿಂಗಳು ಪ್ರವಾಸಿ ಸೀಜನ್ ಆಗಿರುವುದರಿಂದ ಅದನ್ನೇ ಬಳಸಿಕೊಳ್ಳಲು ಆಯೋಜಕರು ಮುಂದಾಗಿದ್ದಾರೆ. ಇನ್ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಾಪ್, ಯೂ ಟ್ಯೂಬ್ ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ನಡೆಸುತ್ತಿದ್ದು, ಈ ಕಾರ್ಯಕ್ರಮಕ್ಕಾಗಿಯೇ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಬರುವಂತೆ ಮಾಡಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಫುಡ್ ಫೆಸ್ಟಿವಲ್, ಹೋಂ ಮೇಡ್ ವಸ್ತುಗಳ ಪ್ರದರ್ಶನ, ಗೇಮ್ಸ್, ಕಾರ್ಯಾಗಾರಗಳು ಮತ್ತು ರಾಕ್ ಬ್ಯಾಂಡ್ ಮ್ಯೂಸಿಕ್ ಕಾರ್ಯಕ್ರಮದ ವಿಶೇಷತೆಗಳಲ್ಲಿ ಒಂದಾಗಿದೆ.

ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಉಚಿತ ಪ್ರವೇಶ ನೀಡದಿರಲು ಆಯೋಜಕರು ನಿರ್ಧರಿಸಿದ್ದಾರೆ. ೯೦ ರೂ. ಟಿಕೆಟ್ ದರ ನಿಗದಿಪಡಿಸಿ, ಪ್ರವೇಶ ಪಡೆಯುವ ವ್ಯವಸ್ಥೆ ಮಾಡಲಾಗಿದ್ದು, ಒಂದು ಟಿಕೆಟ್ ಒಬ್ಬರಿಗೆ ಮತ್ತು ಒಂದು ದಿನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿರಲಿದೆ. ಯಾವುದೇ ರೀತಿಯ ಮುಂಗಡ ಬುಕ್ಕಿಂಗ್‌ಗೆ ಅವಕಾಶವಿರುವುದಿಲ್ಲ. ನೇರವಾಗಿ ಬಂದು ಟಿಕೆಟ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ಆಯೋಜಕರಾದ ಮದನ್ ತಿಳಿಸಿದ್ದಾರೆ.

ಸರ್ಕಾರ ಪ್ರವಾಸಿ ಉತ್ಸವ ಆಯೋಜಿಸಲಿ:  ಸರ್ಕಾರ ಪ್ರವಾಸಿ ಉತ್ಸವ ಆಯೋಜಿಸಬೇಕೆಂಬ ನಿಟ್ಟಿನಲ್ಲಿ ಹೋಟೆಲ್ ಅಸೋಸಿಯೇಷನ್ ಮತ್ತು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಹಲವು ವರ್ಷಗಳಿಂದ ಪ್ರಯತ್ನ ನಡೆಸುತ್ತಿವೆ. ಆದರೆ ನಾನಾ ಕಾರಣಗಳಿಂದ ಇದು ಸಾಕಾರಗೊಳ್ಳುತ್ತಿಲ್ಲ. ೨೦೧೯ರಲ್ಲಿ ನಡೆಸಿದ್ದ ಪ್ರವಾಸಿ ಉತ್ಸವದಿಂದ, ಪ್ರವಾಸೋದ್ಯಮದ ಚೇತರಿಕೆಗೆ ಅನುಕೂಲವಾಗಿತ್ತು. ಪ್ರತಿ ವರ್ಷ ಪ್ರವಾಸೋದ್ಯಮ ಇಲಾಖೆಯಿಂದ ಕೊಡಗು ಉತ್ಸವವನ್ನು ಹಮ್ಮಿಕೊಂಡು ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ, ಪಾರಂಪರಿಕತೆ, ಪ್ರಾಕೃತಿಕ ಮಹತ್ವವನ್ನು ಪಸರಿಸಬೇಕು. ಆ ಮೂಲಕ ಪರಿಸರ ಸ್ನೇಹಿ, ಸುಸ್ಥಿರ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಕರಿಸಬೇಕು ಎಂಬುದು ಪ್ರವಾಸೋದ್ಯಮಿಗಳ ಆಗ್ರಹವಾಗಿದೆ.

” ಜಿಲ್ಲೆಯಲ್ಲಿ ಪ್ರವಾಸಿ ಉತ್ಸವದಂತಹ ಕಾರ್ಯಕ್ರಮಗಳನ್ನು ವರ್ಷಕ್ಕೊಮ್ಮೆಯಾದರೂಹಮ್ಮಿಕೊಳ್ಳಬೇಕು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಸ್ಥಳೀಯ ಸಣ್ಣ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಜತೆಗೂಡಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ.”

-ಮದನ್ ಕೆ.ಜಿ, ಕಿಂಬರ್ಲಿ ಮುಖ್ಯಸ್ಥ

” ಡಿ.೨೦ ಮತ್ತು ೨೧ರಂದು ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವವನ್ನು ಹಮ್ಮಿಕೊಂಡಿದ್ದೇವೆ. ಫುಡ್ ಫೆಸ್ಟ್,ರಾಕ್ ಬ್ಯಾಂಡ್, ವೈವಿಧ್ಯಮಯ ವಸ್ತು ಪ್ರದರ್ಶನ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸ್ಟಾಲ್‌ಗಳು, ಕಾರ್ಯಾಗಾರಗಳು ಸೇರಿದಂತೆ ನಾನಾ ವಿಶೇಷತೆಗಳು ಈ ಉತ್ಸವದಲ್ಲಿರಲಿವೆ.”

-ದಿನೇಶ್ ಕಾರ್ಯಪ್ಪ, ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

2 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

2 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

3 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

3 hours ago