Andolana originals

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ

೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ 

ಮಡಿಕೇರಿ: ಡಿ.೨೦ ಮತ್ತು ೨೧ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಾಥ್ ನೀಡಿದೆ.

ಮಡಿಕೇರಿಯ ಕಿಂಬರ್ಲಿ ಕೂರ್ಗ್ ಎಂಬ ಸಂಸ್ಥೆ ೨ನೇ ಬಾರಿಗೆ ಕೊಡಗಿನಲ್ಲಿ ಕೂರ್ಗ್ ಕಾರ್ನಿವಲ್ ಆಯೋಜಿಸುತ್ತಿದ್ದು, ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಈಬಾರಿ ಉತ್ಸವದ ಸಂಪೂರ್ಣ ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು, ಸಣ್ಣ ಮತ್ತು ಮಧ್ಯಮಉದ್ಯಮಿಗಳ ಅನುಕೂಲಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಡಿಜೆ, ಸಂಗೀತ, ಸ್ಟಾಂಡ್ ಅಪ್ ಕಾಮಿಡಿ ಸೇರಿದಂತೆ ಹಲವು ವೈವಿಧ್ಯಗಳು ಇರಲಿವೆ ಎಂದು ಕಿಂಬರ್ಲಿ ಕೂರ್ಗ್ ಮುಖ್ಯಸ್ಥ ಕೆ.ಜಿ. ಮದನ್ ತಿಳಿಸಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಈ ಬಾರಿ ೨ನೇ ವರ್ಷದ ಕೂರ್ಗ್ ಕಾರ್ನಿವಲ್ ಹಮ್ಮಿಕೊಳ್ಳಲಾಗುತ್ತಿದೆ. ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಕೈಜೋಡಿಸಿರುವುದರಿಂದ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆಯಿದೆ.

ಉತ್ಸವದಲ್ಲಿ ನಾನಾ ಬಗೆಯ ಸ್ಟಾಲ್‌ಗಳನ್ನು ತೆರೆಯಲಾಗುತ್ತಿದ್ದು, ಸ್ಥಳೀಯ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ ತಿಂಗಳು ಪ್ರವಾಸಿ ಸೀಜನ್ ಆಗಿರುವುದರಿಂದ ಅದನ್ನೇ ಬಳಸಿಕೊಳ್ಳಲು ಆಯೋಜಕರು ಮುಂದಾಗಿದ್ದಾರೆ. ಇನ್ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಾಪ್, ಯೂ ಟ್ಯೂಬ್ ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ನಡೆಸುತ್ತಿದ್ದು, ಈ ಕಾರ್ಯಕ್ರಮಕ್ಕಾಗಿಯೇ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಬರುವಂತೆ ಮಾಡಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಫುಡ್ ಫೆಸ್ಟಿವಲ್, ಹೋಂ ಮೇಡ್ ವಸ್ತುಗಳ ಪ್ರದರ್ಶನ, ಗೇಮ್ಸ್, ಕಾರ್ಯಾಗಾರಗಳು ಮತ್ತು ರಾಕ್ ಬ್ಯಾಂಡ್ ಮ್ಯೂಸಿಕ್ ಕಾರ್ಯಕ್ರಮದ ವಿಶೇಷತೆಗಳಲ್ಲಿ ಒಂದಾಗಿದೆ.

ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಉಚಿತ ಪ್ರವೇಶ ನೀಡದಿರಲು ಆಯೋಜಕರು ನಿರ್ಧರಿಸಿದ್ದಾರೆ. ೯೦ ರೂ. ಟಿಕೆಟ್ ದರ ನಿಗದಿಪಡಿಸಿ, ಪ್ರವೇಶ ಪಡೆಯುವ ವ್ಯವಸ್ಥೆ ಮಾಡಲಾಗಿದ್ದು, ಒಂದು ಟಿಕೆಟ್ ಒಬ್ಬರಿಗೆ ಮತ್ತು ಒಂದು ದಿನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿರಲಿದೆ. ಯಾವುದೇ ರೀತಿಯ ಮುಂಗಡ ಬುಕ್ಕಿಂಗ್‌ಗೆ ಅವಕಾಶವಿರುವುದಿಲ್ಲ. ನೇರವಾಗಿ ಬಂದು ಟಿಕೆಟ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ಆಯೋಜಕರಾದ ಮದನ್ ತಿಳಿಸಿದ್ದಾರೆ.

ಸರ್ಕಾರ ಪ್ರವಾಸಿ ಉತ್ಸವ ಆಯೋಜಿಸಲಿ:  ಸರ್ಕಾರ ಪ್ರವಾಸಿ ಉತ್ಸವ ಆಯೋಜಿಸಬೇಕೆಂಬ ನಿಟ್ಟಿನಲ್ಲಿ ಹೋಟೆಲ್ ಅಸೋಸಿಯೇಷನ್ ಮತ್ತು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಹಲವು ವರ್ಷಗಳಿಂದ ಪ್ರಯತ್ನ ನಡೆಸುತ್ತಿವೆ. ಆದರೆ ನಾನಾ ಕಾರಣಗಳಿಂದ ಇದು ಸಾಕಾರಗೊಳ್ಳುತ್ತಿಲ್ಲ. ೨೦೧೯ರಲ್ಲಿ ನಡೆಸಿದ್ದ ಪ್ರವಾಸಿ ಉತ್ಸವದಿಂದ, ಪ್ರವಾಸೋದ್ಯಮದ ಚೇತರಿಕೆಗೆ ಅನುಕೂಲವಾಗಿತ್ತು. ಪ್ರತಿ ವರ್ಷ ಪ್ರವಾಸೋದ್ಯಮ ಇಲಾಖೆಯಿಂದ ಕೊಡಗು ಉತ್ಸವವನ್ನು ಹಮ್ಮಿಕೊಂಡು ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ, ಪಾರಂಪರಿಕತೆ, ಪ್ರಾಕೃತಿಕ ಮಹತ್ವವನ್ನು ಪಸರಿಸಬೇಕು. ಆ ಮೂಲಕ ಪರಿಸರ ಸ್ನೇಹಿ, ಸುಸ್ಥಿರ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಕರಿಸಬೇಕು ಎಂಬುದು ಪ್ರವಾಸೋದ್ಯಮಿಗಳ ಆಗ್ರಹವಾಗಿದೆ.

” ಜಿಲ್ಲೆಯಲ್ಲಿ ಪ್ರವಾಸಿ ಉತ್ಸವದಂತಹ ಕಾರ್ಯಕ್ರಮಗಳನ್ನು ವರ್ಷಕ್ಕೊಮ್ಮೆಯಾದರೂಹಮ್ಮಿಕೊಳ್ಳಬೇಕು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಸ್ಥಳೀಯ ಸಣ್ಣ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಜತೆಗೂಡಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ.”

-ಮದನ್ ಕೆ.ಜಿ, ಕಿಂಬರ್ಲಿ ಮುಖ್ಯಸ್ಥ

” ಡಿ.೨೦ ಮತ್ತು ೨೧ರಂದು ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವವನ್ನು ಹಮ್ಮಿಕೊಂಡಿದ್ದೇವೆ. ಫುಡ್ ಫೆಸ್ಟ್,ರಾಕ್ ಬ್ಯಾಂಡ್, ವೈವಿಧ್ಯಮಯ ವಸ್ತು ಪ್ರದರ್ಶನ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸ್ಟಾಲ್‌ಗಳು, ಕಾರ್ಯಾಗಾರಗಳು ಸೇರಿದಂತೆ ನಾನಾ ವಿಶೇಷತೆಗಳು ಈ ಉತ್ಸವದಲ್ಲಿರಲಿವೆ.”

-ದಿನೇಶ್ ಕಾರ್ಯಪ್ಪ, ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ 

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

8 mins ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

2 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

4 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

5 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

5 hours ago