Andolana originals

ಮೆಕ್ಕೆಜೋಳದ ದರ ಕುಸಿತ; ಕಂಗಾಲಾದ ರೈತರು

ದಾ.ರಾ.ಮಹೇಶ್

ಕ್ವಿಂಟಾಲ್‌ಗೆ ೨,೮೦೦ ರೂ. ಇದ್ದ ದರ ಈಗ ೧,೫೦೦ ರೂ.ಗೆ ಕುಸಿತ; ನೆರೆ ರಾಜ್ಯಗಳಿಂದ ಬೇಡಿಕೆಯಿಲ್ಲ 

ವೀರನಹೊಸಹಳ್ಳಿ: ಮೆಕ್ಕೆಜೋಳದ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟ ಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ.ನಿಂದ ೩,೦೦೦ ರೂ.ವರೆಗೆ ಬೆಲೆ ಇತ್ತು. ಕಳೆದ ಮಾರ್ಚ್‌ನಲ್ಲಿ ೨,೮೦೦ ರೂ. ಇದ್ದ ಬೆಲೆ ಸದ್ಯ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ೧,೪೦೦ರಿಂದ ೧,೫೦೦ ರೂ.ಗೆ ಕುಸಿದಿದೆ.

ಜೋಳದ ಶುಷ್ಕತೆ, ತೂಕ, ಗುಣಮಟ್ಟದ ಆಧಾರದಲ್ಲಿ ಬೆಲೆ ನಿರ್ಧಾರ ಆಗುತ್ತದೆ. ಹೆಚ್ಚು ದಿನ ಸಂಗ್ರಹಿಸಿಟ್ಟರೆ ಬೇಡಿಕೆ ಕಡಿಮೆ ಆಗಬಹುದು. ಇದೇ ರೀತಿ ದರ ಕಡಿಮೆಯಾಗುತ್ತಿದ್ದರೆ ಹಾಕಿದ ಬಂಡವಾಳವೂ ಕೈ ಸೇರುವುದಿಲ್ಲ. ಕನಿಷ್ಠ ೧,೮೦೦ ರೂ.ನಿಂದ ೨೦೦೦ ರೂ. ದೊರೆತರೆ ಮಾತ್ರ ಬೆಳೆಗಾರರಿಗೆ ಸ್ವಲ್ಪ ಆದಾಯ ಬರುತ್ತದೆ ಎಂದು ವಡಗೆರೆಯ ಕೃಷಿಕರು ಹೇಳುತ್ತಾರೆ.

ಮಳೆಗೂ ಮೊದಲು ಬೆಳೆ ಕಟಾವು ಮಾಡಬೇಕು. ಮಳೆ ಹೆಚ್ಚಾದರೆ ನಿರ್ವಹಣೆಯ ವೆಚ್ಚ ಏರುತ್ತದೆ. ಸಂಗ್ರಹಕ್ಕೂ ಹಿನ್ನಡೆಯಾಗುತ್ತದೆ. ಇದನ್ನು ಅರಿತಿರುವ ಬೆಳೆಗಾರರು ಬೆಲೆ ಹೆಚ್ಚಾಗುವ ನಿರೀಕ್ಷೆಯಲ್ಲಿ ತೆನೆ ಕತ್ತರಿಸದೆ ಬಿಟ್ಟಿದ್ದಾರೆ. ಮತ್ತೆ ಕೆಲವರು ಕೊಯ್ಲೋತ್ತರ ಕೆಲಸದಲ್ಲಿ ನಿರತರಾಗಿದ್ದಾರೆ. ಹುಣಸೂರು ತಾಲ್ಲೂಕಿನಲ್ಲಿ ಶೇ.೨೫ರಷ್ಟು ಕೃಷಿಕರು ಮಾತ್ರ ಜೋಳ ಮಾರಾಟ ಮಾಡಿದ್ದಾರೆ. ಶೇ.೭೫ರಷ್ಟು ರೈತರು ಮಾರಾಟವನ್ನು ಮುಂದೂಡಿದ್ದಾರೆ. ನೆರೆ ರಾಜ್ಯದ ವ್ಯಾಪಾರಿಗಳು ಕೊಳ್ಳಲು ಮುಂದಾಗುತ್ತಿಲ್ಲ. ಆದರೆ, ಬಿಹಾರವು ತಮಿಳುನಾಡಿಗೆ ಕಡಿಮೆ ಬೆಲೆಗೆ ಜೋಳ ಪೂರೈಸುತ್ತಿದೆ. ಈ ಎಲ್ಲ ಕಾರಣಗಳಿಂದ ಮೆಕ್ಕೆಜೋಳ ಬೆಳೆಗಾರರು ಸ್ವಲ್ಪದಿನಗಳ ತನಕ ಕಾದುನೋಡುವ ತಂತ್ರ ಅನುಸರಿಸಿದ್ದಾರೆ.

ಸ್ಥಳೀಯ ಫಾರಂಗಳಿಗೆ ಮಾರಾಟ: ಕುಕ್ಕುಟೋದ್ಯಮಕ್ಕೆ ಪೂರೈಕೆ ಆಗುತ್ತಿದ್ದ ಮೆಕ್ಕೆ ಜೋಳಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ ಬೆಲೆ ಮಾತ್ರ ಹೆಚ್ಚುತ್ತಿಲ್ಲ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳ ಕೋಳಿ ಸಾಕಣೆದಾರರು ಮೆಕ್ಕೆಜೋಳ ಕೊಳ್ಳಲು ಸ್ಥಳೀಯ ದಲ್ಲಾಳಿಗಳು ಬಿಡುತ್ತಿಲ್ಲ ಎಂದು ಸ್ಥಳಿಯ ರೈತರು ದೂರುತ್ತಾರೆ. ಇದರಿಂದಾಗಿ ಸ್ಥಳೀಯ ಫಾರಂಗಳಿಗೆ ಧಾನ್ಯ ಮಾರಾಟ ಮಾಡಬೇಕಿದೆ ಎಂದು ರೈತ ಕೃಷ್ಣೇಗೌಡ ಹೇಳಿದರು.

” ಸರ್ಕಾರ ಮೆಕ್ಕೆಜೋಳಕ್ಕೆ ಕನಿಷ್ಠ ೨,೫೦೦ ರೂ. ಬೆಂಬಲ ಬೆಲೆ ಘೋಷಿಸಬೇಕು. ಇದರಿಂದ ರೈತರ ಬದುಕು ಹಸನಾಗುತ್ತದೆ.”

-ಅವಿನಾಶ್, ರೈತರು, ಹನಗೋಡು

” ನಮ್ಮ ಜಿಲ್ಲೆಯಲ್ಲಿ ಭತ್ತ, ರಾಗಿ ಹಾಗೂ ಹೆಸರುಕಾಳುಗಳಿಗೆ ಮಾತ್ರ ಬೆಂಬಲ ಬೆಲೆಗೆ ಅವಕಾಶವಿದ್ದು, ಹುಣಸೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು ಮೆಕ್ಕೆಜೋಳ ಬೆಳೆಯನ್ನು ಬೆಳೆಯುತ್ತಿದ್ದಾರೆ. ಮೆಕ್ಕೆಜೋಳಕ್ಕೂ ಸರ್ಕಾರ ಬೆಂಬಲ ಬೆಲೆ ನೀಡಬೇಕು ಎಂಬ ಒತ್ತಾಯವಿದೆ. ಇದನ್ನು ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳ ಗಮನಕ್ಕೆ ತರಲಾಗುವುದು.”

-ಜಿ.ಡಿ.ಹರೀಶ್ ಗೌಡ, ಶಾಸಕರು

ಆಂದೋಲನ ಡೆಸ್ಕ್

Recent Posts

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

30 mins ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

1 hour ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

2 hours ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

2 hours ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

2 hours ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

2 hours ago