Andolana originals

ಮೆಕ್ಕೆ ಜೋಳ ದರ ಕುಸಿತ; ಕೃಷಿಕರಿಗೆ ಬರೆ

ದಾ. ರಾ. ಮಹೇಶ್

ವೀರನಹೊಸಹಳ್ಳಿ: ಮೆಕ್ಕೆಜೋಳಕ್ಕೆ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆ ಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ. ನಿಂದ ೩,೦೦೦ ರೂ. ವರೆಗೆ ಬೆಲೆ ಇತ್ತು. ಕಳೆದ ಮಾರ್ಚ್‌ನಲ್ಲಿ ೨,೮೦೦ ರೂ. ಇದ್ದ ಬೆಲೆ ಸದ್ಯ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ೧,೪೦೦ರಿಂದ ೧,೫೦೦ ರೂ. ಗೆ ಕುಸಿದಿದೆ.

ಜೋಳದ ಶುಷ್ಕತೆ, ತೂಕ, ಗುಣಮಟ್ಟದ ಆಧಾರದಲ್ಲಿ ಬೆಲೆ ನಿರ್ಧಾರ ಆಗುತ್ತದೆ. ಹೆಚ್ಚು ದಿನ ಸಂಗ್ರಹಿಸಿಟ್ಟರೆ ಬೇಡಿಕೆ ಕಡಿಮೆ ಆಗ ಬಹುದು. ಇದೇ ರೀತಿ ದರ ಕಡಿಮೆಯಾಗುತ್ತಿದ್ದರೆ ಹಾಕಿದ ಬಂಡವಾಳವೂ ಕೈ ಸೇರುವುದಿಲ್ಲ. ಕನಿಷ್ಠ ೧,೮೦೦ರಿಂದ ೨,೦೦೦ ರೂ. ದೊರೆತರೆ ಮಾತ್ರ ಬೆಳೆಗಾರರಿಗೆ ಸ್ವಲ್ಪ ಆದಾಯ ಬರುತ್ತದೆ ಎಂದು ವಡಗೆರೆಯ ಕೃಷಿಕರು ಹೇಳುತ್ತಾರೆ. ಮಳೆಗೂ ಮೊದಲು ಧಾನ್ಯ ಕಟಾವು ಮಾಡಬೇಕು. ಮಳೆ ಹೆಚ್ಚಾದರೆ, ನಿರ್ವಹಣೆಯ ವೆಚ್ಚ ಏರುತ್ತದೆ. ಸಂಗ್ರಹಕ್ಕೂ ಹಿನ್ನಡೆಯಾಗು ತ್ತದೆ. ಇದನ್ನು ಅರಿತಿರುವ ಬೆಳೆಗಾರರು ಬೆಲೆ ಹೆಚ್ಚಾಗುವ ನಿರೀಕ್ಷೆಯಲ್ಲಿ ತೆನೆ ಕತ್ತರಿಸದೆ ಬಿಟ್ಟಿದ್ದಾರೆ.

ಮತ್ತೆ ಕೆಲವರು ಕೊಯ್ಲೋತ್ತರ ಕೆಲಸದಲ್ಲಿ ನಿರತರಾಗಿದ್ದಾರೆ. ತಾಲ್ಲೂಕಿನಲ್ಲಿ ಶೇ. ೨೫ರಷ್ಟು ಕೃಷಿಕರು ಜೋಳ ಮಾರಾಟ ಮಾಡಿದ್ದಾರೆ. ಶೇ. ೭೫ರಷ್ಟು ರೈತರು ಮಾರಾಟವನ್ನು ಮುಂದೂಡಿದ್ದಾರೆ. ನೆರೆ ರಾಜ್ಯದ ವ್ಯಾಪಾರಿಗಳು ಕೊಳ್ಳಲು ಮುಂದಾಗುತ್ತಿಲ್ಲ. ಆದರೆ, ಬಿಹಾರವು ತಮಿಳುನಾಡಿಗೆ ಕಡಿಮೆ ಬೆಲೆಗೆ ಜೋಳ ಪೂರೈಸುತ್ತಿದೆ. ಈ ಎಲ್ಲ ಕಾರಣಗಳಿಂದ ಮೆಕ್ಕೆಜೋಳ ಬೆಳೆಗಾರರು ಸ್ವಲ್ಪದಿನಗಳ ತನಕ ಕಾದು ನೋಡುವ ತಂತ್ರ ಅನುಸರಿಸಿದ್ದಾರೆ. ಸ್ಥಳೀಯ ಫಾರಂಗಳಿಗೆ ಮಾರಾಟ: ಕುಕ್ಕುಟೋದ್ಯಮಕ್ಕೆ ಪೂರೈಕೆ ಆಗುತ್ತಿದ್ದ ಮೆಕ್ಕೆಜೋಳಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ ಬೆಲೆ ಮಾತ್ರ ಹೆಚ್ಚುತ್ತಿಲ್ಲ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕೋಳಿ ಸಾಕಣೆದಾರರು ಮೆಕ್ಕೆಜೋಳ ಕೊಳ್ಳಲು ಸ್ಥಳೀಯ ದಲ್ಲಾಳಿಗಳು ಬಿಡುತ್ತಿಲ್ಲ ಎಂದು ಸ್ಥಳಿಯ ರೈತರು ದೂರುತ್ತಾರೆ. ಹೀಗಾಗಿ ಯಾರೂ ಕೂಡ ಮೆಕ್ಕೆಜೋಳವನ್ನು ಕೊಳ್ಳಲು ಮುಂದಾಗುತ್ತಿಲ್ಲ. ಇದರಿಂದಾಗಿ ಸ್ಥಳೀಯ ಫಾರಂಗಳಿಗೆ ಧಾನ್ಯ ಮಾರಾಟ ಮಾಡಬೇಕಿದೆ ಎಂದು ರೈತ ಕೃಷ್ಣೇಗೌಡ ಹೇಳಿದರು.

ಸರ್ಕಾರ ಮೆಕ್ಕೆಜೋಳಕ್ಕೆ ಕನಿಷ್ಠ ೨,೫೦೦ ರೂ. ಬೆಂಬಲ ಬೆಲೆ ಘೋಷಿಸಬೇಕು. ಇದರಿಂದ ರೈತರ ಬದುಕು ಹಸನಾಗುತ್ತದೆ. -ರಾಜೇಗೌಡ (ಅಜ್ಜ), ರೈತರು

ನಮ್ಮ ಜಿಲ್ಲೆಯಲ್ಲಿ ಭತ್ತ, ರಾಗಿ ಹಾಗೂ ಹೆಸರುಕಾಳು ಗಳಿಗೆ ಮಾತ್ರ ಬೆಂಬಲ ಬೆಲೆಗೆ ಅವಕಾಶವಿದ್ದು, ಹುಣಸೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು ಮೆಕ್ಕೆ ಜೋಳ ಬೆಳೆಯನ್ನು ಬೆಳೆಯುತ್ತಿದ್ದಾರೆ. ಮೆಕ್ಕೆಜೋಳಕ್ಕೂ ಸಹ ಸರ್ಕಾರ ಬೆಂಬಲ ಬೆಲೆ ನೀಡಬೇಕು ಎಂಬ ಒತ್ತಾಯವಿದೆ. ಇದಕ್ಕೆ ಸಂಬಂಽಸಿದಂತೆ ಹಿರಿಯ ಅಽಕಾರಿಗಳ ಗಮನಕ್ಕೆ ತರಲಾಗುವುದು. -ಹಂಪಣ್ಣ, ಕಾರ್ಯದರ್ಶಿ, ಎಪಿಎಂಸಿ, ಹುಣಸೂರು

andolana

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

35 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago