Andolana originals

ಮೆಕ್ಕೆ ಜೋಳ ದರ ಕುಸಿತ; ಕೃಷಿಕರಿಗೆ ಬರೆ

ದಾ. ರಾ. ಮಹೇಶ್

ವೀರನಹೊಸಹಳ್ಳಿ: ಮೆಕ್ಕೆಜೋಳಕ್ಕೆ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆ ಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ. ನಿಂದ ೩,೦೦೦ ರೂ. ವರೆಗೆ ಬೆಲೆ ಇತ್ತು. ಕಳೆದ ಮಾರ್ಚ್‌ನಲ್ಲಿ ೨,೮೦೦ ರೂ. ಇದ್ದ ಬೆಲೆ ಸದ್ಯ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ೧,೪೦೦ರಿಂದ ೧,೫೦೦ ರೂ. ಗೆ ಕುಸಿದಿದೆ.

ಜೋಳದ ಶುಷ್ಕತೆ, ತೂಕ, ಗುಣಮಟ್ಟದ ಆಧಾರದಲ್ಲಿ ಬೆಲೆ ನಿರ್ಧಾರ ಆಗುತ್ತದೆ. ಹೆಚ್ಚು ದಿನ ಸಂಗ್ರಹಿಸಿಟ್ಟರೆ ಬೇಡಿಕೆ ಕಡಿಮೆ ಆಗ ಬಹುದು. ಇದೇ ರೀತಿ ದರ ಕಡಿಮೆಯಾಗುತ್ತಿದ್ದರೆ ಹಾಕಿದ ಬಂಡವಾಳವೂ ಕೈ ಸೇರುವುದಿಲ್ಲ. ಕನಿಷ್ಠ ೧,೮೦೦ರಿಂದ ೨,೦೦೦ ರೂ. ದೊರೆತರೆ ಮಾತ್ರ ಬೆಳೆಗಾರರಿಗೆ ಸ್ವಲ್ಪ ಆದಾಯ ಬರುತ್ತದೆ ಎಂದು ವಡಗೆರೆಯ ಕೃಷಿಕರು ಹೇಳುತ್ತಾರೆ. ಮಳೆಗೂ ಮೊದಲು ಧಾನ್ಯ ಕಟಾವು ಮಾಡಬೇಕು. ಮಳೆ ಹೆಚ್ಚಾದರೆ, ನಿರ್ವಹಣೆಯ ವೆಚ್ಚ ಏರುತ್ತದೆ. ಸಂಗ್ರಹಕ್ಕೂ ಹಿನ್ನಡೆಯಾಗು ತ್ತದೆ. ಇದನ್ನು ಅರಿತಿರುವ ಬೆಳೆಗಾರರು ಬೆಲೆ ಹೆಚ್ಚಾಗುವ ನಿರೀಕ್ಷೆಯಲ್ಲಿ ತೆನೆ ಕತ್ತರಿಸದೆ ಬಿಟ್ಟಿದ್ದಾರೆ.

ಮತ್ತೆ ಕೆಲವರು ಕೊಯ್ಲೋತ್ತರ ಕೆಲಸದಲ್ಲಿ ನಿರತರಾಗಿದ್ದಾರೆ. ತಾಲ್ಲೂಕಿನಲ್ಲಿ ಶೇ. ೨೫ರಷ್ಟು ಕೃಷಿಕರು ಜೋಳ ಮಾರಾಟ ಮಾಡಿದ್ದಾರೆ. ಶೇ. ೭೫ರಷ್ಟು ರೈತರು ಮಾರಾಟವನ್ನು ಮುಂದೂಡಿದ್ದಾರೆ. ನೆರೆ ರಾಜ್ಯದ ವ್ಯಾಪಾರಿಗಳು ಕೊಳ್ಳಲು ಮುಂದಾಗುತ್ತಿಲ್ಲ. ಆದರೆ, ಬಿಹಾರವು ತಮಿಳುನಾಡಿಗೆ ಕಡಿಮೆ ಬೆಲೆಗೆ ಜೋಳ ಪೂರೈಸುತ್ತಿದೆ. ಈ ಎಲ್ಲ ಕಾರಣಗಳಿಂದ ಮೆಕ್ಕೆಜೋಳ ಬೆಳೆಗಾರರು ಸ್ವಲ್ಪದಿನಗಳ ತನಕ ಕಾದು ನೋಡುವ ತಂತ್ರ ಅನುಸರಿಸಿದ್ದಾರೆ. ಸ್ಥಳೀಯ ಫಾರಂಗಳಿಗೆ ಮಾರಾಟ: ಕುಕ್ಕುಟೋದ್ಯಮಕ್ಕೆ ಪೂರೈಕೆ ಆಗುತ್ತಿದ್ದ ಮೆಕ್ಕೆಜೋಳಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ ಬೆಲೆ ಮಾತ್ರ ಹೆಚ್ಚುತ್ತಿಲ್ಲ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕೋಳಿ ಸಾಕಣೆದಾರರು ಮೆಕ್ಕೆಜೋಳ ಕೊಳ್ಳಲು ಸ್ಥಳೀಯ ದಲ್ಲಾಳಿಗಳು ಬಿಡುತ್ತಿಲ್ಲ ಎಂದು ಸ್ಥಳಿಯ ರೈತರು ದೂರುತ್ತಾರೆ. ಹೀಗಾಗಿ ಯಾರೂ ಕೂಡ ಮೆಕ್ಕೆಜೋಳವನ್ನು ಕೊಳ್ಳಲು ಮುಂದಾಗುತ್ತಿಲ್ಲ. ಇದರಿಂದಾಗಿ ಸ್ಥಳೀಯ ಫಾರಂಗಳಿಗೆ ಧಾನ್ಯ ಮಾರಾಟ ಮಾಡಬೇಕಿದೆ ಎಂದು ರೈತ ಕೃಷ್ಣೇಗೌಡ ಹೇಳಿದರು.

ಸರ್ಕಾರ ಮೆಕ್ಕೆಜೋಳಕ್ಕೆ ಕನಿಷ್ಠ ೨,೫೦೦ ರೂ. ಬೆಂಬಲ ಬೆಲೆ ಘೋಷಿಸಬೇಕು. ಇದರಿಂದ ರೈತರ ಬದುಕು ಹಸನಾಗುತ್ತದೆ. -ರಾಜೇಗೌಡ (ಅಜ್ಜ), ರೈತರು

ನಮ್ಮ ಜಿಲ್ಲೆಯಲ್ಲಿ ಭತ್ತ, ರಾಗಿ ಹಾಗೂ ಹೆಸರುಕಾಳು ಗಳಿಗೆ ಮಾತ್ರ ಬೆಂಬಲ ಬೆಲೆಗೆ ಅವಕಾಶವಿದ್ದು, ಹುಣಸೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು ಮೆಕ್ಕೆ ಜೋಳ ಬೆಳೆಯನ್ನು ಬೆಳೆಯುತ್ತಿದ್ದಾರೆ. ಮೆಕ್ಕೆಜೋಳಕ್ಕೂ ಸಹ ಸರ್ಕಾರ ಬೆಂಬಲ ಬೆಲೆ ನೀಡಬೇಕು ಎಂಬ ಒತ್ತಾಯವಿದೆ. ಇದಕ್ಕೆ ಸಂಬಂಽಸಿದಂತೆ ಹಿರಿಯ ಅಽಕಾರಿಗಳ ಗಮನಕ್ಕೆ ತರಲಾಗುವುದು. -ಹಂಪಣ್ಣ, ಕಾರ್ಯದರ್ಶಿ, ಎಪಿಎಂಸಿ, ಹುಣಸೂರು

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago