Andolana originals

ಪ್ರಸಿದ್ಧ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ

ಆನಂದ್ ಹೊಸೂರ್

೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ; ರಾಸುಗಳನ್ನು ಕಟ್ಟಲು ರೈತರಿಂದ ಸಿದ್ಧತೆ

ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ ಕಂಡುಬರುತ್ತಿದೆ.

ಜನವರಿ ೫ರಿಂದ ಆರಂಭಗೊಳ್ಳುವ ಈ ಜಾನುವಾರು ಜಾತ್ರೆ ಹಳ್ಳಿಕಾರ್ ತಳಿಯ ರಾಸುಗಳಿಂದ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದ್ದು, ಜಾತ್ರೆಯಲ್ಲಿ ಭಾಗವಹಿಸುವ ರೈತರು ಭರದಿಂದ ಜಾತ್ರಮಾಳಕ್ಕೆ ಆಗಮಿಸಿ ತಮ್ಮ ರಾಸುಗಳನ್ನು ಇಳಿಜಾರಿನಲ್ಲಿ ನಿಲ್ಲುವಂತೆ ಕಟ್ಟಲು ಧವಣಿಗಳನ್ನು ಮಾಡುತ್ತಿರು ವುದು ಕಂಡುಬರುತ್ತಿದೆ.

ಜಾತ್ರೆಗೆ ಬರುವ ರಾಸುಗಳನ್ನು ಕಟ್ಟಲು ಪ್ರತ್ಯೇಕ ಜಾಗ ಇಲ್ಲದ ಕಾರಣ ಚುಂಚನ ಕಟ್ಟೆಯ ಸುತ್ತ ಮುತ್ತ ಇರುವ ಜಾಗದಲ್ಲಿ ರೈತರ ಜಮೀನುಗಳನ್ನು ೧ ಗದ್ದೆಗೆ ೨ ರಿಂದ ೮ ಸಾವಿರ ರೂ. ನೀಡಿ ಅಲ್ಲಿ ರಾಸುಗಳನ್ನು ಕಟ್ಟಲು ಗದ್ದೆಗಳನ್ನು ಸ್ವಚ್ಛಗೊಳಿಸಿ ಧವಣಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಅಲ್ಲದೆ ತಮ್ಮ ರಾಸುಗಳ ವೈಭೋಗ ತೋರಲು ಬೃಹತ್ ಚಪ್ಪರ, ಶಾಮಿಯಾನ ಹಾಕಲು ತಯಾರಿ ನಡೆಸುತ್ತಿದ್ದಾರೆ. ಜಾತ್ರೆ ಇನ್ನು ೭ ದಿನಗಳಲ್ಲಿ ಭರ್ಜರಿಯಾಗಿ ಆರಂಭಗೊಳ್ಳಲಿದ್ದು ಇದಕ್ಕಾಗಿ ರಾಸುಗಳ ವ್ಯಾಪಾರಿಗಳು ಎದುರು ನೋಡುತ್ತಿದ್ದಾರೆ. ಕೋಟ್ಯಂತರ ರೂ. ವ್ಯಾಪಾರ ನಡೆಯುವುದು ನಿಶ್ಚಿತವಾಗಿದೆ.

ಶಾಸಕ ಡಿ ರವಿಶಂಕರ್ ಅವರು ಈಗಾಗಲೇ ಜಾತ್ರೆಯ ಪೂರ್ವಭಾವಿ ಸಭೆ ನಡೆಸಿ ಜಾತ್ರೆಗೆ ಅಗತ್ಯ ಮೂಲ ಭೂತ ಸೌಲಭ್ಯವನ್ನು ಕಲ್ಪಿಸಲು ಅಧಿಕಾರಿಗಳಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಅಧಿಕಾರಿಗಳ ಸಿದ್ಧತೆ : ಜಾನುವಾರು ಜಾತ್ರೆಗಾಗಿ ಈಗಾಗಲೇ ರಸ್ತೆಯ ಬದಿಗೆ ಜಾತ್ರಾ ಮಾಳದಲ್ಲಿ ವಿದ್ಯುತ್ ದೀಪ ಅಲಂಕಾರ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಇಲ್ಲಿ ಕುಡಿಯುವ ನೀರಿನ ನಲ್ಲಿಗಳನ್ನು ಅಳವಡಿಸುವುದು, ವಿದ್ಯುತ್ ದೀಪ ಅಳವಡಿಸುವುದು, ಆರೋಗ್ಯ ಇಲಾ ಖೆಯ ವತಿಯಿಂದ ತಾತ್ಕಾಲಿಕ ಆರೋಗ್ಯ ಚಿಕಿತ್ಸಾ ಕೇಂದ್ರ, ಪಶು ಇಲಾಖೆಯ ವತಿಯಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲು ಈಗಾಗಲೇ ಸ್ಥಳ ಪರಿಶೀಲನಾ ಕಾರ್ಯ ನಡೆದಿದೆ.

ಈ ಜಾತ್ರೆಯ ಬಗ್ಗೆ ಜಿಲ್ಲಾಡಳಿತ ರಾಜ್ಯ ಮಟ್ಟದಲ್ಲಿ ಸೂಕ್ತ ಪ್ರಚಾರ ಕಲ್ಪಿಸುವ ಜತೆಗೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಯುವ ಮುಖಂಡ ಡೇರಿ ಮಾಧು ಒತ್ತಾಯಿಸಿದ್ದಾರೆ.

” ಜನವರಿ ೬ರಿಂದ ಚುಂಚನಕಟ್ಟೆ ಜಾನುವಾರು ಜಾತ್ರೆ ಆರಂಭಗೊಳ್ಳಲಿದ್ದು ರೈತರು ಆ ದಿನದಿಂದಲೇ ಜಾತ್ರಾಮಾಳಕ್ಕೆ ಜಾನುವಾರುಗಳನ್ನು ಕರೆತರಲು ಮುಂದಾಗಬೇಕು. ಅದಕ್ಕಿಂತ ಮೊದಲೇ ಬಂದರೆ ರಾಸುಗಳನ್ನು ವಾಪಸ್ ಕಳಿಸಲಾಗುವುದು. ಈ ಸಂಬಂಧ ತಹಸಿಲ್ದಾರ್ ನರಗುಂದ ಅವರು ಆದೇಶ ಮಾಡಿದ್ದಾರೆ”

-ಕೆ.ಜೆ.ಶರತ್ ಕುಮಾರ್, ಉಪತಹಸಿಲ್ದಾರ್ ಚುಂಚನಕಟ್ಟೆ

ಆಂದೋಲನ ಡೆಸ್ಕ್

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

3 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

3 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

5 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

5 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

5 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

5 hours ago