Andolana originals

ಪ್ರಸಿದ್ಧ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ

ಆನಂದ್ ಹೊಸೂರ್

೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ; ರಾಸುಗಳನ್ನು ಕಟ್ಟಲು ರೈತರಿಂದ ಸಿದ್ಧತೆ

ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ ಕಂಡುಬರುತ್ತಿದೆ.

ಜನವರಿ ೫ರಿಂದ ಆರಂಭಗೊಳ್ಳುವ ಈ ಜಾನುವಾರು ಜಾತ್ರೆ ಹಳ್ಳಿಕಾರ್ ತಳಿಯ ರಾಸುಗಳಿಂದ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದ್ದು, ಜಾತ್ರೆಯಲ್ಲಿ ಭಾಗವಹಿಸುವ ರೈತರು ಭರದಿಂದ ಜಾತ್ರಮಾಳಕ್ಕೆ ಆಗಮಿಸಿ ತಮ್ಮ ರಾಸುಗಳನ್ನು ಇಳಿಜಾರಿನಲ್ಲಿ ನಿಲ್ಲುವಂತೆ ಕಟ್ಟಲು ಧವಣಿಗಳನ್ನು ಮಾಡುತ್ತಿರು ವುದು ಕಂಡುಬರುತ್ತಿದೆ.

ಜಾತ್ರೆಗೆ ಬರುವ ರಾಸುಗಳನ್ನು ಕಟ್ಟಲು ಪ್ರತ್ಯೇಕ ಜಾಗ ಇಲ್ಲದ ಕಾರಣ ಚುಂಚನ ಕಟ್ಟೆಯ ಸುತ್ತ ಮುತ್ತ ಇರುವ ಜಾಗದಲ್ಲಿ ರೈತರ ಜಮೀನುಗಳನ್ನು ೧ ಗದ್ದೆಗೆ ೨ ರಿಂದ ೮ ಸಾವಿರ ರೂ. ನೀಡಿ ಅಲ್ಲಿ ರಾಸುಗಳನ್ನು ಕಟ್ಟಲು ಗದ್ದೆಗಳನ್ನು ಸ್ವಚ್ಛಗೊಳಿಸಿ ಧವಣಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಅಲ್ಲದೆ ತಮ್ಮ ರಾಸುಗಳ ವೈಭೋಗ ತೋರಲು ಬೃಹತ್ ಚಪ್ಪರ, ಶಾಮಿಯಾನ ಹಾಕಲು ತಯಾರಿ ನಡೆಸುತ್ತಿದ್ದಾರೆ. ಜಾತ್ರೆ ಇನ್ನು ೭ ದಿನಗಳಲ್ಲಿ ಭರ್ಜರಿಯಾಗಿ ಆರಂಭಗೊಳ್ಳಲಿದ್ದು ಇದಕ್ಕಾಗಿ ರಾಸುಗಳ ವ್ಯಾಪಾರಿಗಳು ಎದುರು ನೋಡುತ್ತಿದ್ದಾರೆ. ಕೋಟ್ಯಂತರ ರೂ. ವ್ಯಾಪಾರ ನಡೆಯುವುದು ನಿಶ್ಚಿತವಾಗಿದೆ.

ಶಾಸಕ ಡಿ ರವಿಶಂಕರ್ ಅವರು ಈಗಾಗಲೇ ಜಾತ್ರೆಯ ಪೂರ್ವಭಾವಿ ಸಭೆ ನಡೆಸಿ ಜಾತ್ರೆಗೆ ಅಗತ್ಯ ಮೂಲ ಭೂತ ಸೌಲಭ್ಯವನ್ನು ಕಲ್ಪಿಸಲು ಅಧಿಕಾರಿಗಳಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಅಧಿಕಾರಿಗಳ ಸಿದ್ಧತೆ : ಜಾನುವಾರು ಜಾತ್ರೆಗಾಗಿ ಈಗಾಗಲೇ ರಸ್ತೆಯ ಬದಿಗೆ ಜಾತ್ರಾ ಮಾಳದಲ್ಲಿ ವಿದ್ಯುತ್ ದೀಪ ಅಲಂಕಾರ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಇಲ್ಲಿ ಕುಡಿಯುವ ನೀರಿನ ನಲ್ಲಿಗಳನ್ನು ಅಳವಡಿಸುವುದು, ವಿದ್ಯುತ್ ದೀಪ ಅಳವಡಿಸುವುದು, ಆರೋಗ್ಯ ಇಲಾ ಖೆಯ ವತಿಯಿಂದ ತಾತ್ಕಾಲಿಕ ಆರೋಗ್ಯ ಚಿಕಿತ್ಸಾ ಕೇಂದ್ರ, ಪಶು ಇಲಾಖೆಯ ವತಿಯಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲು ಈಗಾಗಲೇ ಸ್ಥಳ ಪರಿಶೀಲನಾ ಕಾರ್ಯ ನಡೆದಿದೆ.

ಈ ಜಾತ್ರೆಯ ಬಗ್ಗೆ ಜಿಲ್ಲಾಡಳಿತ ರಾಜ್ಯ ಮಟ್ಟದಲ್ಲಿ ಸೂಕ್ತ ಪ್ರಚಾರ ಕಲ್ಪಿಸುವ ಜತೆಗೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಯುವ ಮುಖಂಡ ಡೇರಿ ಮಾಧು ಒತ್ತಾಯಿಸಿದ್ದಾರೆ.

” ಜನವರಿ ೬ರಿಂದ ಚುಂಚನಕಟ್ಟೆ ಜಾನುವಾರು ಜಾತ್ರೆ ಆರಂಭಗೊಳ್ಳಲಿದ್ದು ರೈತರು ಆ ದಿನದಿಂದಲೇ ಜಾತ್ರಾಮಾಳಕ್ಕೆ ಜಾನುವಾರುಗಳನ್ನು ಕರೆತರಲು ಮುಂದಾಗಬೇಕು. ಅದಕ್ಕಿಂತ ಮೊದಲೇ ಬಂದರೆ ರಾಸುಗಳನ್ನು ವಾಪಸ್ ಕಳಿಸಲಾಗುವುದು. ಈ ಸಂಬಂಧ ತಹಸಿಲ್ದಾರ್ ನರಗುಂದ ಅವರು ಆದೇಶ ಮಾಡಿದ್ದಾರೆ”

-ಕೆ.ಜೆ.ಶರತ್ ಕುಮಾರ್, ಉಪತಹಸಿಲ್ದಾರ್ ಚುಂಚನಕಟ್ಟೆ

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

12 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago