Andolana originals

ರೈತರಿಗೆ ವರವಾದ ಸಂಚಾರಿ ಪಶು ಚಿಕಿತ್ಸಾ ಘಟಕ

ಕೆ.ಬಿ.ರಮೇಶ ನಾಯಕ

ತಿಂಗಳಿಗೆ ೧,೨೦೦ರಿಂದ ೧,೫೦೦ ಪ್ರಾಣಿಗಳಿಗೆ ಸೂಕ್ತ ರೀತಿಯ ಚಿಕಿತ್ಸೆ

ವಾಹನದಲ್ಲಿ ಪಶು ವೈದ್ಯರು ಹಾಗೂ ಅರೆ ತಾಂತ್ರಿಕ ಸಿಬ್ಬಂದಿ ಕೆಲಸ

ಪ್ರತಿದಿನ ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆವರೆಗೆ ಕಾರ್ಯನಿರ್ವಹಣೆ

ಕಾಲ್‌ಸೆಂಟರ್ ೧೯೬೨ರ ಸಂಖ್ಯೆಗೆ ಕರೆ ಮಾಡಿದರೆ ಮನೆ ಬಾಗಿಲಿಗೆ ಸೇವೆ

ಮೈಸೂರು: ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನದಾಗಿ ರೈತಾಪಿ ವರ್ಗದವರು ಸಾಕುವ ಸಾಕು ಪ್ರಾಣಿಗಳ ಆರೋಗ್ಯ ಹದಗೆಟ್ಟರೆ ತಕ್ಷಣವೇ ಸ್ಪಂದಿಸಲು ಆರಂಭಿಸಿರುವ ಸಂಚಾರಿ ಪಶು ಚಿಕಿತ್ಸಾ ಘಟಕ ವಾಹನದಿಂದ ಪ್ರಾಣಿಗಳ ಜೀವ ಉಳಿಯುತ್ತಿರುವುದು ರೈತರಿಗೆ ವರದಾನವಾಗಿದೆ.

ತಮ್ಮ ಸಾಕು ಪ್ರಾಣಿಗಳ ಆರೋಗ್ಯ ಹದಗೆಟ್ಟು ದೂರದ ಪಶು ಚಿಕಿತ್ಸಾ ಆಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯುವುದು ತಪ್ಪುವುದರ ಜತೆಗೆ ಹಣವೂ ಉಳಿತಾಯವಾಗುತ್ತಿದೆ.

ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ಪಶು ವೈದ್ಯರನ್ನು ಹುಡಕಲು ಪರ ದಾಡುತ್ತಿದ್ದ ರೈತರಿಗೆ ಸಂಚಾರಿ ಪಶು ಚಿಕಿತ್ಸಾ ಘಟಕ ವಾಹನ ನೆರವಾಗಿರುವುದರಿಂದ ಮತ್ತಷ್ಟು ಸಂಚಾರಿ ಪಶುಚಿಕಿತ್ಸಾ ಘಟಕ ವಾಹನಗಳಿಗೆ ಬೇಡಿಕೆ ಉಂಟಾಗಿದೆ. ಕೃಷಿ ಪ್ರಧಾನವಾಗಿರುವ ಭಾರತದಲ್ಲಿ ಇಂದಿಗೂ ಹೈನುಗಾರಿಕೆಯನ್ನು ನಂಬಿ ಕೋಟ್ಯಂತರ ಜನರು ಜೀವನ ಮಾಡುತ್ತಿದ್ದಾರೆ. ಅದರಲ್ಲೂ ಪಶು ಭಾಗ್ಯ ಯೋಜನೆಯಿಂದ ಹಸು ಸಾಕಲು ಸಾಲ ಸೌಲಭ್ಯ ದೊರೆಯುತ್ತಿದೆ. ಜೊತೆಗೆ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆದ ಬಳಿಕ ಕುರಿ ಸಾಕಾಣಿಕೆ ಜಾಸ್ತಿಯಾಗಿದೆ.

ಜಾನುವಾರು ಸಾಲದಂತೆ ಕುರಿ ಸಾಕಾಣಿಕೆಗೂ ೫೦,೦೦೦ ದಿಂದ ೩ ಲಕ್ಷ ರೂ.ವರೆಗೆ ಸಬ್ಸಿಡಿ ರೂಪದಲ್ಲಿ ಸಾಲ, ಸೌಲಭ್ಯ ನೀಡುತ್ತಿರುವುದರಿಂದ ಹಸು, ಕುರಿ ಸಾಕುವವರ ಸಂಖ್ಯೆಯು ಹೆಚ್ಚಾಗಿದೆ. ಇದರಿಂದಾಗಿ ಸಾಕು ಪ್ರಾಣಿಗಳ ಆರೋಗ್ಯ ಕಾಪಾಡಲು ಹೋಬಳಿ, ಗ್ರಾಪಂ ಮಟ್ಟದಲ್ಲಿ ಪಶು ಚಿಕಿತ್ಸಾ ಕೇಂದ್ರಗಳನ್ನು ತೆರೆದು ಚಿಕಿತ್ಸೆ ಕೊಡಲಾಗುತ್ತಿದೆ.

ಕಾಲುಬಾಯಿ ಜ್ವರ, ಚರ್ಮಗಂಟು ರೋಗ, ಕರಳು ಬೇನೆ, ಗಂಟಲು ಬೇನೆ, ಚಪ್ಪೆರೋಗ ಕಂಡುಬಂದಾಗ ಸಾಮೂಹಿಕವಾಗಿ ಲಸಿಕೆ ಕೊಡಬೇಕಾಗಿದೆ. ಜೊತೆಗೆ ದಿಢೀರನೇ ಅಸ್ವಸ್ಥವಾಗುವ ಸಾಕು ಪ್ರಾಣಿಗಳಿಗೆಸಕಾಲದಲ್ಲಿ ಚಿಕಿತ್ಸೆ ನೀಡಿದರೆ ಜೀವ ಉಳಿಯುತ್ತದೆ ಎನ್ನುವ ಕಾರಣಕ್ಕಾಗಿ ರಾಜ್ಯ ಸರ್ಕಾರ ಮೈಸೂರು ಜಿಲ್ಲೆಯಲ್ಲಿ ಒಟ್ಟು ೧೦ ಕೇಂದ್ರಗಳನ್ನು ಮುಖ್ಯವಾಗಿಟ್ಟುಕೊಂಡು ಒಂದೊಂದು ಸಂಚಾರಿ ಪಶುಚಿಕಿತ್ಸಾ ಘಟಕ ವಾಹನ ಸೇವೆ ಆರಂಭಿಸಿದೆ.

ತಿಂಗಳಿಗೆ ೧,೨೦೦ರಿಂದ ೧,೫೦೦ ಪ್ರಾಣಿಗಳಿಗೆ ಚಿಕಿತ್ಸೆ: ಜಿಲ್ಲೆಯ ಎಚ್.ಡಿ.ಕೋಟೆ, ನಂಜನಗೂಡು, ಕೆ.ಆರ್.ನಗರ, ಸಾಲಿಗ್ರಾಮ, ಮೈಸೂರು, ಪಿರಿಯಾಪಟ್ಟಣ, ಹುಣಸೂರು, ಸರಗೂರು, ತಿ.ನರಸೀಪುರ ಹಾಗೂ ಬೆಟ್ಟದಪುರದಲ್ಲಿ ಚಿಕಿತ್ಸಾ ಘಟಕ ವಾಹನವಿದ್ದು, ಪ್ರತಿ ತಿಂಗಳು ಅಂದಾಜು ೧,೨೦೦ರಿಂದ ೧,೫೦೦ ಸಾಕು ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ದನ, ಎಮ್ಮೆ, ಹಸು, ಕುರಿ, ಮೇಕೆಗಳಿಗೆ ಚಿಕಿತ್ಸೆ ಕೊಡಲಾಗು ತ್ತದೆ. ಇದರಿಂದಾಗಿ ಅಚಾನಕ್ಕಾಗಿ ಆಗುವ ತೊಂದರೆ ಗಳೂ ತಪ್ಪಿದಂತಾಗಿದೆ.

ಸೂಕ್ತ ರೀತಿಯ ಚಿಕಿತ್ಸೆ ವ್ಯವಸ್ಥೆ: ಜಿಲ್ಲೆಯಾದ್ಯಂತ ಒಟ್ಟು ೧೦ ಸಂಚಾರಿ ಪಶು ಚಿಕಿತ್ಸಾ ಘಟಕ ವಾಹನಗಳಿದ್ದು, ನುರಿತ ಪಶು ವೈದ್ಯರು ಹಾಗೂ ಅರೆ ತಾಂತ್ರಿಕ ಸಿಬ್ಬಂದಿ  ಘಟಕದಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ವಾಹನಗಳು ಪ್ರತಿದಿನ ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆವರೆಗೆ ಕಾರ್ಯನಿರ್ವಹಿಸಲಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಂಗಳೂರು ಆಯುಕ್ತಾಲಯದಲ್ಲಿ ಮೊಬೈಲ್ ವೆಟರ್ನರಿ ಯೂನಿಟ್ ಕಾಲ್ ಸೆಂಟರ್ ಅನ್ನು ಸ್ಥಾಪಿಸಿದ್ದು, ಕಾಲ್ ಸೆಂಟರ್ ೧೯೬೨ ಉಚಿತ ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ ಮನೆ ಬಾಗಿಲಿಗೇ ಬಂದು ಸೇವೆ ಒದಗಿಸಲಾಗುತ್ತಿದೆ.

ಜಾನುವಾರುಗಳ ಮಾಲೀಕರು ಮೊಬೈಲ್ ವೆಟರ್ನರಿ ಯೂನಿಟ್ ಕಾಲ್ ಸೆಂಟರ್‌ಗೆ ಕಾಲ್ ಮಾಡಿದಾಗ ಕಾಲ್ ಸೆಂಟರ್ ಕಾರ್ಯನಿರ್ವಾಹಕರು ಕರೆಯನ್ನು ಸ್ವೀಕರಿಸಿದ ನಂತರ ಪ್ರತಿಯೊಂದು ಪಶುವೈದ್ಯಕೀಯ ಸೇವೆಗೆ ಡಾಕೆಟ್ ನಂಬರ್ ಸೃಜಿಸಿ ಸಂಚಾರಿ ಪಶುಚಿಕಿತ್ಸಾ ಘಟಕ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ಪಶುವೈದ್ಯರುಗಳಿಗೆ ಕರೆಯನ್ನು ವರ್ಗಾಯಿಸುತ್ತಾರೆ.

ಅಲ್ಲಿಂದ, ತಕ್ಷಣವೇ ಸಂಬಂಧಪಟ್ಟ ಸಂಚಾರಿ ಪಶುಚಿಕಿತ್ಸಾ ಘಟಕ ವಾಹನ ಪಶುವೈದ್ಯರಿಗೆ ರವಾನೆಯಾಗುತ್ತಿದ್ದಂತೆ ಅರ್ಧಗಂಟೆಯೊಳಗೆ ದೂರವಾಣಿ ಕರೆ ಮಾಡಿದ್ದ ರೈತರ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಾರೆ ಎಂದು ಅಧಿಕಾರಿಗಳು ಹೇಳುತ್ತಾರೆ.

” ಜಿಲ್ಲೆಯಲ್ಲಿ ಸಂಚಾರಿ ಪಶುಚಿಕಿತ್ಸಾ ಘಟಕ ವಾಹನಗಳು ಆರಂಭವಾದ ಮೇಲೆ ದಿಢೀರನೇ ಅಸ್ವಸ್ಥಗೊಳ್ಳುವ ಸಾಕು ಪ್ರಾಣಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುತ್ತಿರುವುದರಿಂದ ಶೇ.೨೦ರಷ್ಟು ಸಾವಿನ ಪ್ರಮಾಣ ಕಡಿಮೆಯಾಗಿದೆ. ತಿಂಗಳಿಗೆ ೧,೫೦೦ ಸಾಕುಪ್ರಾಣಿಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ದೊಡ್ಡ ಜಿಲ್ಲೆಯಾಗಿರುವ ಕಾರಣ ಮತ್ತೆ ಐದು ವಾಹನಗಳನ್ನು ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದೇವೆ.”

-ಸಿ.ನಾಗರಾಜು, ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ.

ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

2 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

6 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

6 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

6 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

6 hours ago