Andolana originals

ಮಡಿಕೇರಿಯಲ್ಲಿ ಏಡಿ ಮಾರಾಟ ಬಲು ಜೋರು

ಪುನೀತ್ ಮಡಿಕೇರಿ

ಮಳೆಗಾಲದಲ್ಲಿ ಮೈ ಬೆಚ್ಚಗಿಡಲು ಏಡಿ ವಿಶೇಷ ಆಹಾರ 

ಮಡಿಕೇರಿ: ಮಳೆಯ ನಡುವೆ ಮಡಿಕೇರಿ ನಗರದಲ್ಲಿ ಏಡಿ ಮಾರಾಟ ಬಲು ಜೋರಾಗಿದೆ.

ಹೌದು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಚಳಿಗೆ ದೇಹವನ್ನು ಬೆಚ್ಚಗಿಡಲು ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ವ್ಯಾಪಾರಿಗಳು ಏಡಿ, ಬಿದಿರು ಕಣಿಲೆ, ಮರಕೆಸ ಮಾರಾಟ ಮಾಡುತ್ತಿದ್ದಾರೆ. ಏಡಿ ವ್ಯಾಪಾರ ಬಲು ಜೋರಾಗಿ ಸಾಗಿದರೆ, ಕಣಿಲೆ, ಮರಕೆಸ ಒಂದು ದಿನ ವ್ಯಾಪಾರವಾದರೆ, ಮತ್ತೊಂದು ದಿನ ಬೇಡಿಕೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಜಿಲ್ಲೆಯ ಜನರು ಮಳೆಗಾಲದಲ್ಲಿ ವಿವಿಧ ಬಗೆಯ ಖಾದ್ಯಗಳ ಮೊರೆ ಹೋಗುವುದು ಸಾಮಾನ್ಯ. ಅದರಲ್ಲೂ ಮೈಕೊರೆಯುವ ಚಳಿಯಿಂದ ಬೆಚ್ಚಗಿರಿಸುವಂತಹ ಆಹಾರ ಪದಾರ್ಥಗಳನ್ನು ಜನ ಹೆಚ್ಚಾಗಿ ಇಷ್ಟ ಪಡುತ್ತಾರೆ.

ರಸ್ತೆ ಬದಿಯಲ್ಲಿ ವ್ಯಾಪಾರಿಗಳು ಹಾರಂಗಿ ಬ್ಯಾಕ್ ವಾಟರ್, ಎಚ್.ಡಿ.ಕೋಟೆ ಸೇರಿದಂತೆ ನದಿ, ತೋಡುಗಳಿಂದ ನಾಟಿ ಏಡಿಗಳನ್ನು ಹಿಡಿದು ತಂದು ಮಾರಾಟ ಮಾಡುತ್ತಿದ್ದಾರೆ. ಪ್ರತಿ ದಿನ ಮಡಿಕೇರಿಗೆ ಸುಮಾರು ೬೦-೭೦ ಕೆ.ಜಿ.ಜೀವಂತ ಏಡಿಗಳೊಂದಿಗೆ ಆಗಮಿಸುವ ಮಡಿಕೇರಿ ಕುಮಾರ್ ೧೨ ಏಡಿಗಳನ್ನು ದಾರದಲ್ಲಿ ಪೋಣಿಸಿಡುತ್ತಾರೆ. ಏಡಿ ಮಾಲೆಗೆ ೩೫೦ ರೂ.ನಂತೆ ಮಾರಾಟ ಮಾಡಲಾಗುತ್ತದೆ. ಕೆ.ಜಿ.ಗೆ ೩೦೦ ರೂ.ನಂತೆ ಮಾರಾಟ ಮಾಡುತ್ತಿದ್ದಾರೆ.

ಏಡಿಯ ಉಷ್ಣಾಂಶ ಸರಿದೂಗಿಸುವ ಆಹಾರ: ನಮ್ಮ ದೇಹದ ಉಷ್ಣತೆಯನ್ನು ಕಾಪಾಡುವುದೇ ಏಡಿಯ ವಿಶೇಷ. ಬೇಸಿಗೆ ಕಳೆದು ಮಳೆಗಾಲ ಬಂದಾಗ ದೇಹದಲ್ಲಿನ ಉಷ್ಣಾಂಶ ಕಡಿಮೆಯಾಗುತ್ತದೆ. ಅದನ್ನು ಸರಿದೂಗಿಸುವುದಕ್ಕಾಗಿ ಇಂಥ ಆಹಾರಗಳನ್ನೇ ಮಳೆಗಾಲದಲ್ಲಿ ಹೆಚ್ಚು ಸೇವಿಸಲಾಗುತ್ತದೆ. ಈ ಹಿಂದೆ ಭತ್ತದ ಗದ್ದೆಗಳಲ್ಲಿ, ಹಳ್ಳಕೊಳ್ಳಗಳಲ್ಲಿ ಹೇರಳವಾಗಿ ಸಿಗುತ್ತಿದ್ದ ಏಡಿ ಮಳೆಗಾಲದ ಜಂಕ್ ಫುಡ್ ಇದ್ದಹಾಗೆ. ಇವುಗಳನ್ನು ಸುಟ್ಟು ತಿನ್ನುವುದು, – ಮಾಡಿ ತಿನ್ನುವುದು ಗ್ರಾಮೀಣ ಜನರ ಹವ್ಯಾಸ. ಆದರೆ, ಇಂದು ಗದ್ದೆಗೆ ರಾಸಾಯನಿಕ ಗೊಬ್ಬರ ಹಾಕುವುದರಿಂದ ಮತ್ತು ಗದ್ದೆಯಲ್ಲಿ ಶುಂಠಿ ಬೆಳೆ ಬೆಳೆಯಲು ಆರಂಭಿಸಿದ ಮೇಲೆ ಏಡಿಗಳ ಸಂತತಿ ಕ್ಷೀಣಗೊಳ್ಳುತ್ತಿದೆ.

ಉಷ್ಣಾಂಶ ಹೊಂದಿರುವ ಖಾದ್ಯಗಳಿವು: ಏಡಿಯಂತೆಯೇ ಮರಕೆಸ ಹಾಗೂ ಕಣಿಲೆ ಕೂಡ ಉಷ್ಣಾಂಶ ಹೊಂದಿರುವ ಒಂದು ಖಾದ್ಯ. ವ್ಯಾಪಾರಿಗಳು ಇಂದು ಸುಮಾರು ಅರ್ಧ ಕಿಲೋ ತೂಕ ಹೊಂದಿರುವ ಕಣಿಲೆಯ ಒಂದು ಪ್ಯಾಕೆಟ್ ಅನ್ನು ೬೦ ರೂ.ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಅದೇ ರೀತಿ ಕರ್ಕಾಟಕ ಮಾಸದಲ್ಲಿ ಮರದ ಮೇಲೆ ಬಿಡುವ ಮರಕೆಸ ಎಂಬ ಸೊಪ್ಪು ಕೂಡ ಔಷಧ ರೂಪದೊಂದಿಗೆ ಉಷ್ಣಾಂಶ ಹೊಂದಿರುವ ಖಾದ್ಯವಾಗಿದೆ. ಕೊಡಗು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮರಕೆಸವನ್ನು ಬಳಸುತ್ತಾರೆ. ಆಟಿ ಮಾಸದಲ್ಲಿ ಒಂದು ದಿನವಾದರೂ ಈ ಸೊಪ್ಪನ್ನು ಉಪಯೋಗಿಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ. ಮರಕೆಸದಿಂದ ಪತ್ರೊಡೆ ಸೇರಿದಂತೆ ಇನ್ನಿತರ ಖಾದ್ಯಮಾಡಿ ಸವಿಯಲಾಗುತ್ತದೆ. ಅರಣ್ಯ ಪ್ರದೇಶದಲ್ಲಿ ಬೆಳೆಯುವ ಬಿದಿರಿನ ಕಣಿಲೆ ಮತ್ತು ಮರಕೆಸಕ್ಕೆ ಕೆಲವೊಮ್ಮೆ ಬೇಡಿಕೆ ಕೂಡ ಇದೆ.

” ಏಡಿ ಕೊಂಡುಕೊಳ್ಳಲು ಜನ  ಬರುತ್ತಿದ್ದಾರೆ. ಮಾರಾಟಕ್ಕೆ ತಂದ ಏಡಿಗಳು ಸಂಜೆ ಹೊತ್ತಿಗೆ ಖಾಲಿಯಾಗುತ್ತದೆ. ಹಾರಂಗಿ ಬ್ಯಾಕ್ ವಾಟರ್‌ನಿಂದ ಏಡಿ ತಂದು ಇಲ್ಲಿ ಮಾರಾಟ ಮಾಡುತ್ತಿದ್ದೇನೆ. ಕೊಡಗಿನಲ್ಲಿ ಹಲವು ಕಾರಣಗಳಿಂದ ಸ್ಥಳಿಯವಾಗಿ ಹೆಚ್ಚಿನ ಏಡಿ ದೊರೆಯುತ್ತಿಲ್ಲ. ಆದ್ದರಿಂದ ನಾವು ತಂದ ಏಡಿಯನ್ನು ಗ್ರಾಹಕರು ಕೊಂಡುಕೊಳ್ಳುತ್ತಾರೆ. ದಿನಕ್ಕೆ ೧೨ ಏಡಿಗಳುಳ್ಳ ೬೦-೭೦ ಸರಗಳು ಮಾರಾಟವಾಗುತ್ತದೆ.”

-ಕುಮಾರ್, ಏಡಿ ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago